Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಕ್ತರು ದೇವಾಲಯಗಳಿಗೆ ಕಾಣಿಕೆ ನೀಡುವುದು...

ಭಕ್ತರು ದೇವಾಲಯಗಳಿಗೆ ಕಾಣಿಕೆ ನೀಡುವುದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಲ್ಲ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ17 Sept 2025 12:04 AM IST
share
ಭಕ್ತರು ದೇವಾಲಯಗಳಿಗೆ ಕಾಣಿಕೆ ನೀಡುವುದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆಗಳನ್ನು ಕಲ್ಯಾಣ ಮಂಟಪಗಳ ನಿರ್ಮಾಣಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.

ದೇಗುಲಗಳಿಗೆ ಕಾಣಿಕೆ ನೀಡುವ ಭಕ್ತರ ಉದ್ದೇಶವೇ ದೇವಾಲಯದ ಅಭಿವೃದ್ಧಿ ಹಾಗೂ ಧಾರ್ಮಿಕ ಸೌಲಭ್ಯಗಳ ಸುಧಾರಣೆ ಎಂಬುದಾಗಿ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಸಂದೀಪ್ ಮೆಹ್ರಾ ಅವರನ್ನೊಳಗೊಂಡ ಪೀಠವು, “ಭಕ್ತರು ದೇಗುಲಗಳಿಗೆ ಕಾಣಿಕೆ ನೀಡುವಾಗ ಮದುವೆ ಮಂಟಪ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಕಟ್ಟಡಗಳನ್ನು ನಿರ್ಮಿಸಬೇಕು ಎಂಬ ಆಲೋಚನೆಯಿಂದ ನೀಡುವುದಿಲ್ಲ. ಈ ಕಾಣಿಕೆ ಸಂಪೂರ್ಣವಾಗಿ ದೇಗುಲದ ಆವರಣದ ಸೌಕರ್ಯ, ಪೂಜೆ-ಪರಂಪರೆ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಾಗಿರಬೇಕು” ಎಂದು ಅಭಿಪ್ರಾಯಪಟ್ಟಿತು.

ತಮಿಳುನಾಡಿನ ಐದು ಪ್ರಮುಖ ದೇವಸ್ಥಾನಗಳ ನಿಧಿಯನ್ನು ಬಳಸಿ ಕಲ್ಯಾಣ ಮಂಟಪಗಳನ್ನು ನಿರ್ಮಿಸಲು ಸರ್ಕಾರ ಅನುಮತಿ ನೀಡಿದ್ದುದನ್ನು ಮದ್ರಾಸ್ ಹೈಕೋರ್ಟ್‌ ಮದುರೈ ಪೀಠವು ಆಗಸ್ಟ್ 19ರಂದು ವಜಾಗೊಳಿಸಿತ್ತು. ಸರ್ಕಾರದ ಈ ನಿರ್ಧಾರವು ಧಾರ್ಮಿಕ ಉದ್ದೇಶಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿತ್ತು.

ಅದರ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಮದುರೈ ಪೀಠದ ಆದೇಶಕ್ಕೆ ತಡೆ ನೀಡಲು ಸಲ್ಲಿಸಿದ್ದ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.

“ದೇವಾಲಯದ ಆವರಣದಲ್ಲಿ ನಿರ್ಮಿಸಲಾದ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯುತ್ತದೆ ಎಂದು ಭಾವಿಸಿದರೆ, ಅಲ್ಲಿ ಅಶ್ಲೀಲ ಹಾಡುಗಳು, ಅಸಭ್ಯ ನೃತ್ಯಗಳು ನಡೆದರೆ, ಅದು ದೇವಾಲಯದ ಧಾರ್ಮಿಕ ಸನ್ಮಾನ್ಯತೆಯನ್ನು ಹಾಳು ಮಾಡುವುದಲ್ಲವೇ?” ಎಂದು ವಿಚಾರಣೆ ವೇಳೆ ನ್ಯಾಯಪೀಠವು ತೀವ್ರವಾಗಿ ಪ್ರಶ್ನಿಸಿತು.

ಹೈಕೋರ್ಟ್‌ನ ಅಭಿಪ್ರಾಯವನ್ನು ಮರುಉಲ್ಲೇಖಿಸಿದ ಸುಪ್ರೀಂ, “ದೇವಾಲಯದ ಕಾಣಿಕೆಗಳನ್ನು ಸರ್ಕಾರದ ನಿಧಿಯಂತೆ ಪರಿಗಣಿಸಲಾಗುವುದಿಲ್ಲ. ಇವು ಶುದ್ಧ ಧಾರ್ಮಿಕ ಉದ್ದೇಶಕ್ಕೆ ಮಾತ್ರ ಮೀಸಲಾಗಿರಬೇಕು. ಕಲ್ಯಾಣ ಮಂಟಪ ನಿರ್ಮಿಸಿ ಬಾಡಿಗೆಗೆ ಕೊಡುವುದು ಭಕ್ತರ ಕಾಣಿಕೆಯ ಧಾರ್ಮಿಕ ಉದ್ದೇಶಕ್ಕೆ ವಿರುದ್ಧ” ಎಂದು ಸ್ಪಷ್ಟಪಡಿಸಿತು.

ಈ ಹಂತದಲ್ಲಿ ಯಾವುದೇ ತಡೆಯಾಜ್ಞೆ ನೀಡುವುದಿಲ್ಲವೆಂದು ತಿಳಿಸಿದ ಸುಪ್ರೀಂ, “ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರದ ಅನುಮತಿ ಸರಿಯೇ ತಪ್ಪೇ ಎಂಬುದರ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ” ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X