Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮನುಷ್ಯಕುಲದ ಮಹಾಮಾರಿ ಏಡ್ಸ್

ಮನುಷ್ಯಕುಲದ ಮಹಾಮಾರಿ ಏಡ್ಸ್

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು1 Dec 2024 9:37 AM IST
share
ಮನುಷ್ಯಕುಲದ ಮಹಾಮಾರಿ ಏಡ್ಸ್

ಚಿಕಿತ್ಸೆ ಹೇಗೆ?

ಏಡ್ಸ್ ರೋಗಕ್ಕೆ ಮದ್ದು ಇಲ್ಲ. ಚಿಕಿತ್ಸೆಯಿಂದ ರೋಗವನ್ನು ಗುಣ ಪಡಿಸಲು ಸಾಧ್ಯವಿಲ್ಲ. ಆದರೆ ರೋಗದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆ್ಯಂಟಿ ರಿಟ್ರೊವೈರಲ್ ಥೆರಪಿ ಎಂಬ ಚಿಕಿತ್ಸೆ ನೀಡಲಾಗುತ್ತದೆ. ಈ ಚಿಕಿತ್ಸೆಯ ಮುಖಾಂತರ ಎಚ್‌ಐವಿ ರೋಗಾಣುವಿನ ಆರ್ಭಟವನ್ನು ಕಡಿಮೆ ಮಾಡಬಹುದು. ವ್ಯಕ್ತಿಯ ರೋಗ ನಿರೋಧಕ ಶಕ್ತಿಯನ್ನು ಕುಂದದಂತೆ ನೋಡಿಕೊಳ್ಳಲಾಗುತ್ತದೆ ಮತ್ತು ಇತರ ವ್ಯಕ್ತಿಗಳಂತೆ ಎಚ್‌ಐವಿ ಸೋಂಕಿತ ವ್ಯಕ್ತಿಗಳು ದೈನಂದಿನ ಜೀವನ ನಡೆಸಬಹುದು.

ಮಾರಣಾಂತಿಕ ಕಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್ ರೋಗ ಮನುಕುಲದ ಬಹುದೊಡ್ಡ ಶತ್ರು. ಅಂಕಿಅಂಶಗಳ ಪ್ರಕಾರ ಇದುವರೆಗೆ ಸುಮಾರು ೪೨ ಮಿಲಿಯನ್ ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು ೩೯ ಮಿಲಿಯನ್ ಮಂದಿ ಎಚ್‌ಐವಿ ರೋಗಾಣುವಿನಿಂದ ರೋಗಗ್ರಸ್ತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ಏಡ್ಸ್‌ನ್ನು ವಿಶ್ವದ ಬಹುದೊಡ್ಡ ಆರೋಗ್ಯ ಸಮಸ್ಯೆ ಎಂದರೆ ಅತಿಶಯೋಕ್ತಿಯಲ್ಲ. ರೋಗದ ತೀವ್ರತೆಯನ್ನು ಕಡಿಮೆ ಮಾಡುವ ಚಿಕಿತ್ಸೆಯ ಹೊರತಾಗಿಯೂ, ಪ್ರತಿವರ್ಷ ೨ ಮಿಲಿಯನ್ ಮಂದಿ ಜೀವ ಕಳೆದುಕೊಳ್ಳುತ್ತಿರುವುದು ಬಹುದೊಡ್ಡ ದುರಂತವೇ ಸರಿ. ಈ ನಿಟ್ಟಿನಲ್ಲಿ ಏಡ್ಸ್ ರೋಗದ ಜಾಗೃತಿ ಮೂಡಿಸಿ, ಏಡ್ಸ್ ರೋಗದ ಬಗೆಗಿನ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕಾಗಿಯೇ ಪ್ರತೀ ವರ್ಷ ಡಿಸೆಂಬರ್ ಒಂದರಂದು ಜಾಗೃತಿ ಜಾಥಾಗಳು, ಬೀದಿ ನಾಟಕಗಳು, ಸರಕಾರಿ ಪ್ರಾಯೋಜಿತ ಏಡ್ಸ್ ತಿಳುವಳಿಕಾ ಕಾರ್ಯಕ್ರಮಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಸಂಘ ಸಂಸ್ಥೆಗಳಿಂದ ಏಡ್ಸ್ ಕುರಿತಾದ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಏನಿದು ಏಡ್ಸ್ ಮತ್ತು ಎಚ್‌ಐವಿ?

ಎಚ್‌ಐವಿ ಎಂದರೆ ‘ಹ್ಯೂಮನ್ ಇಮ್ಯೂನ್‌ಡೆಫಿಷಿಯನ್ಸಿ ವೈರಸ್’ ಎಂಬ ರೋಗಾಣು. ಇದು ಮನುಷ್ಯನ ದೇಹಕ್ಕೆ ಸೇರಿಕೊಂಡಾಗ ದೇಹದ ರಕ್ಷಣಾ ವ್ಯವಸ್ಥೆಯನ್ನು ಹಾಳುಮಾಡಿ ಮಾನವನ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಹತ್ತು ಹಲವಾರು ರೋಗಗಳಿಗೆ ಕಾರಣವಾಗುತ್ತದೆ. ಏಡ್ಸ್ ಎಂದರೆ ಅಕ್ವಾಯರ್ಡ್ ಇಮ್ಯೂನ್ ಡೆಫಿಷಿಯನ್ಸಿ ಸಿಂಡ್ರೋಮ್. ಎಚ್‌ಐವಿ ವೈರಾಣುವಿನಿಂದ ಸೋಂಕು ಹೊಂದಿದ ವ್ಯಕ್ತಿಗಳೆಲ್ಲಾ ಏಡ್ಸ್ ರೋಗದಿಂದ ಬಳಲಬೇಕೆಂದಿಲ್ಲ. ಮನುಷ್ಯನ ರೋಗ ನಿರೋಧಕ ಶಕ್ತಿ ಹಾಳಾಗಿ ಮನುಷ್ಯನ ದೇಹ ರೋಗಗಳ ಹಂದರವಾದಾಗ, ಮನುಷ್ಯನ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಿದ ರೋಗಗಳ ಸಮೂಹಕ್ಕೆ ಏಡ್ಸ್ ಎನ್ನಲಾಗುತ್ತದೆ. ಏಡ್ಸ್ ರೋಗ ಇರುವವರೆಲ್ಲರೂ ಎಚ್‌ಐವಿ ಸೋಂಕಿತರಾಗಿರುತ್ತಾರೆ. ಆದರೆ ಎಚ್‌ಐವಿ ಸೋಂಕು ತಗುಲಿದವರೆಲ್ಲರೂ ಏಡ್ಸ್ ರೋಗದಿಂದ ಬಳಲೇಬೇಕು ಎಂಬ ನಿಯಮವಿಲ್ಲ. ವ್ಯಕ್ತಿಯ ರೋಗನಿರೋಧಕ ಶಕ್ತಿ ತೀರಾ ದುರ್ಬಲವಾದಾಗ ಏಡ್ಸ್ ರೋಗಕ್ಕೆ ತುತ್ತಾಗಿ ದೇಹದ ರಕ್ಷಣಾ ವ್ಯವಸ್ಥೆ ದುರ್ಬಲಗೊಂಡು ಸಾವನ್ನಪ್ಪುತ್ತಾನೆ.

ಏಡ್ಸ್ ರೋಗದ ಲಕ್ಷಣಗಳು

ಪದೇ ಪದೇ ಕಾಡುವ ಜ್ವರ ಮತ್ತು ಪದೇ ಪದೇ ಕಾಡುವ ಭೇದಿ ಏಡ್ಸ್‌ನ ಪ್ರಾಥಮಿಕ ಲಕ್ಷಣವಾಗಿರುತ್ತದೆ. ಜೊತೆಗೆ ವಿಪರೀತ ಸುಸ್ತು, ಅಪೌಷ್ಟಿಕತೆ, ಬಾಯಿಯಲ್ಲಿ ಹುಣ್ಣು, ಗಂಟಲು ಉರಿ, ಗಂಟಲು ನೋವು, ಕೆಮ್ಮು ಮತ್ತು ಕುತ್ತಿಗೆಯ ಸುತ್ತ ಗಡ್ಡೆಗಳ ಅನುಭವ ಉಂಟಾಗಬಹುದು. ಆಹಾರ ನುಂಗುವಾಗ ನೋವು, ತಲೆನೋವು ಮತ್ತು ಮರೆಗುಳಿತನ ಇರುತ್ತದೆ. ಅದೇ ರೀತಿ ಏಡ್ಸ್ ರೋಗಿ ಅರ್ಬುದ ರೋಗಗಳಿಗೆ ತುತ್ತಾಗುವ ಸಾಧ್ಯತೆ ಕೂಡಾ ಹೆಚ್ಚಾಗಿರುತ್ತದೆ.

ಯಾವುದೇ ರೀತಿಯ ಚಿಕಿತ್ಸೆಗೆ ಇದು ಸ್ಪಂದಿಸುವುದಿಲ್ಲ. ವ್ಯಕ್ತಿ ಕಾರಣವಿಲ್ಲದೆ ದೇಹದ ತೂಕವನ್ನು ಕಳೆದುಕೊಳ್ಳುತ್ತಾನೆ. ಎಚ್‌ಐವಿ ವೈರಾಣು ದೇಹದ ರಕ್ಷಣಾ ವ್ಯವಸ್ಥೆಯ ಸೈನಿಕರಾದ ಬಿಳಿರಕ್ತಕಣಗಳ ಮೇಲೆ ದಾಳಿ ಮಾಡುತ್ತದೆ. ಹೀಗಾಗಿ ದೇಹದ ರಕ್ಷಣಾ ವ್ಯವಸ್ಥೆ ಕುಸಿದು ಬಿದ್ದು, ವ್ಯಕ್ತಿಗೆ ಬ್ಯಾಕ್ಟೀರಿಯಾ, ಫಂಗಸ್ ಮತ್ತು ಇತರ ವೈರಾಣುಗಳ ಸೋಂಕಿಗೆ ಸುಲಭವಾಗಿ ತುತ್ತಾಗುತ್ತಾನೆ. ಎಚ್‌ಐವಿ ಸೋಂಕಿತ ವ್ಯಕ್ತಿ ಏಡ್ಸ್ ರೋಗಕ್ಕೆ ತುತ್ತಾಗಲು ೫ರಿಂದ ೧೦ವರ್ಷ ತಗಲಬಹುದು. ಕೆಲವೊಮ್ಮೆ ೧೦ರಿಂದ ೧೫ವರ್ಷ ತಗಲಬಹುದು ಇದು ವ್ಯಕ್ತಿಯಿಂದ ವ್ಯಕ್ತಿಗೆ ವ್ಯತ್ಯಾಸವಿರುತ್ತದೆ. ಸಕಾಲದಲ್ಲಿ ಗುರುತಿಸಿ ವೈರಸ್ ವಿರುದ್ಧ ಚಿಕಿತ್ಸೆ ಪಡೆದಲ್ಲಿ ರೋಗದ ಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಬಹುದು.

ಏಡ್ಸ್‌ರೋಗದ ತೀವ್ರತೆಯನ್ನು ಸಿಡಿ-೪ ಎಂಬ ಬಿಳಿರಕ್ತ ಕಣಗಳ ಸಂಖ್ಯೆಯ ಆಧಾರದ ಮೇಲೆ ವಿಂಗಡಿಸಲಾಗುತ್ತದೆ. ಸಾಮಾನ್ಯವಾಗಿ ಎಚ್‌ಐವಿ ಪೀಡಿತರಲ್ಲಿ ಈ ಸಂಖ್ಯೆ ೫೦೦ಕ್ಕಿಂತ ಜಾಸ್ತಿ ಇರುತ್ತದೆ. ಏಡ್ಸ್ ರೋಗಿಗಳಲ್ಲಿ ಈ ಸಂಖ್ಯೆ ೨೦೦ಕ್ಕಿಂತಲೂ ಕಡಿಮೆ ಇರುತ್ತದೆ. ಅದೇ ರೀತಿ ಚಿಕಿತ್ಸೆಯ ಪರಿಣಾಮ ಮತ್ತು ಯಶಸ್ಸನ್ನು ಸಿಡಿ-೪ ಸಂಖ್ಯೆಯ ಆಧಾರದ ಮೇಲೆ ನಿರ್ಧಾರಿಸಲಾಗುತ್ತದೆ. ಚಿಕಿತ್ಸೆ ಪರಿಣಾಮಕಾರಿಯಾಗಿದ್ದಲ್ಲಿ ಸಿಡಿ-೪ ಎಂಬ ಬಿಳಿ ರಕ್ತಕಣಗಳ ಸಂಖ್ಯೆ ವೃದ್ಧಿಸುತ್ತದೆ. ಸಿಡಿ-೪ ರಕ್ತಕಣಗಳ ಸಂಖ್ಯೆ ವೃದ್ಧಿಸಿದಲ್ಲಿ ರೋಗಿಯ ರೋಗ ನಿರೋಧಕಶಕ್ತಿ ಕೂಡ ಹೆಚ್ಚಾಗುತ್ತದೆ.

ಹೇಗೆ ಹರಡುತ್ತದೆ?

1. ಎಚ್‌ಐವಿ ಸೋಂಕಿತ ರೋಗಿಯೊಂದಿಗಿನ ಅಸುರಕ್ಷಿತ ಲೈಂಗಿಕ ಸಂಪರ್ಕ.

2. ಎಚ್‌ಐವಿ ಸೋಂಕಿತ ವ್ಯಕ್ತಿಗಳಿಂದ ರಕ್ತ ಪಡೆಯುವುದರಿಂದ.

3. ಮಾದಕ ದ್ರವ್ಯ ವ್ಯಸನಿಗಳು ಬಳಸಿದ ಎಚ್‌ಐವಿ ಸೋಂಕಿತ ಸಿರಿಂಜ್‌ಗಳನ್ನು ಬಳಸುವುದರಿಂದ.

4. ಎಚ್‌ಐವಿ ಸೋಂಕಿತ ತಾಯಂದಿ ರಿಂದ ಮಗುವಿಗೆ ಗರ್ಭಾವಸ್ಥೆಯ ಸಮಯದಲ್ಲಿ, ಹೆರಿಗೆಯ ಸಮಯದಲ್ಲಿ ಮತ್ತು ಎದೆ ಹಾಲುಣಿಸುವ ಮುಖಾಂತರ.

5. ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಿಂದ.

6. ದೇಹದ ಮೇಲೆ ಹಾಕುವ ಹಚ್ಚೆಗಳ ಸೂಜಿಗಳು ಎಚ್‌ಐವಿ ಸೋಂಕಿತವಾಗಿದ್ದಲ್ಲಿ ಅದರಿಂದಲೂ ರೋಗ ಹರಡುವ ಸಾಧ್ಯತೆ ಇರುತ್ತದೆ.

ಹೇಗೆ ಹರಡುವುದಿಲ್ಲ

1. ಕೈ ಕುಲುಕುವುದು, ಆಲಿಂಗನ, ಸೀನುವುದು, ಕೆಮ್ಮುವುದು ಇತ್ಯಾದಿ

2. ಬೆವರು, ಎಂಜಲು, ಕಣ್ಣೀರು, ಸಿಂಬಳ, ಮಲ-ಮೂತ್ರ ಮುಂತಾದವುಗಳನ್ನು ಸ್ಪರ್ಶಿಸುವುದರಿಂದ.

3. ಊಟ, ತಟ್ಟೆ, ಬಟ್ಟೆ, ನೀರು ಮುಂತಾದವುಗಳನ್ನು ಹಂಚಿಕೊಳ್ಳುವುದರಿಂದ.

4. ಸೊಳ್ಳೆಗಳಿಂದ ಹರಡುವುದಿಲ್ಲ.

ಎಚ್‌ಐವಿ ವೈರಸ್ ಬಹಳ ಕಾಲ ಮನುಷ್ಯನ ದೇಹದ ಹೊರಗೆ ಜೀವಿಸಲಾರದು. ಹೊರಗಿನ ಉಷ್ಣತೆಯನ್ನು ಸಹಿಸಿಕೊಳ್ಳುವ ಶಕ್ತಿ ಅದಕ್ಕಿಲ್ಲ. ದೇಹದ ದ್ರವ ಆರಿದಾಗ ವೈರಾಣು ತನ್ನಿಂತಾನೇ ಸಾಯುತ್ತದೆ.

ತಪ್ಪು ಕಲ್ಪನೆಗಳು

ಏಡ್ಸ್ ರೋಗಕ್ಕಿಂತ ರೋಗದ ಭಯವೇ ರೋಗಿಯ ಮಾನಸಿಕ ಸ್ಥೈರ್ಯವನ್ನು ಕೆಡಿಸುತ್ತದೆ. ನೆನಪಿರಲಿ, ಎಚ್‌ಐವಿ ಪೀಡಿತರು ಎಲ್ಲರಂತೆ ಜೀವನ ನಡೆಸಬಹುದು. ಎಚ್‌ಐವಿ ಸೋಂಕಿತರು ತಾನು ಎಚ್‌ಐವಿ ಸೋಂಕಿತ ಎಂದು ತಿಳಿದಾಕ್ಷಣ, ಆಕಾಶವೇ ತಲೆಯ ಮೇಲೆ ಬಿದ್ದಂತೆ ವರ್ತಿಸುತ್ತಾರೆೆ. ಇನ್ನು ಕೆಲವೇ ದಿನಗಳಲ್ಲಿ ತಾನು ಸಾಯುತ್ತೇನೆ ಎಂಬ ಭಯದಲ್ಲಿ ಊಟ, ನಿದ್ರೆ ಬಿಟ್ಟು ಚಿಂತೆಗೆ ಶರಣಾಗಿ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಈ ಚಿಂತೆಯಿಂದಲೇ ಇನ್ನೂ ಹತ್ತಿಪ್ಪತ್ತು ವರ್ಷ ಬಾಳಿ ಬದುಕಬೇಕಾದ ಜೀವ, ಒಂದೆರಡು ವರ್ಷದಲ್ಲಿಯೇ ಕೊರಗಿ ಕೊರಗಿ ಜೀವ ಬತ್ತಿ ಹೋಗುತ್ತದೆ. ಮಾನಸಿಕ ಚಿಂತೆ, ಒತ್ತಡ, ಅವಮಾನ, ಆತಂಕ, ಗಾಬರಿ ಮತ್ತು ಸಮಾಜದ ಪ್ರಶ್ನೆಗಳಿಗೆ ಹೆದರಿ ತನ್ನದಲ್ಲದ ತಪ್ಪಿಗೂ ಜೀವ ತೆರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಎಚ್‌ಐವಿ ಬಾಧಿತರಿಗೆ ಸಾಂತ್ವನ ಹೇಳಿ ಅವರನ್ನು ಇತರರಂತೆ ಉಪಚರಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿಕೊಳ್ಳಬೇಕಾದ ಗುರುತರ ಜವಾಬ್ದಾರಿ ನಮ್ಮೆಲ್ಲರಿಗೂ ಇದೆ.

share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X