Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಇಷ್ಟಲಿಂಗದ ಜನಕ

ಇಷ್ಟಲಿಂಗದ ಜನಕ

ರಂಜಾನ್ ದರ್ಗಾರಂಜಾನ್ ದರ್ಗಾ6 Dec 2019 4:33 PM IST
share
ಇಷ್ಟಲಿಂಗದ ಜನಕ

‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚೆನ್ನಬಸವಣ್ಣನವರು ಹೇಳಿದ್ದಾರೆ. ಬಸವಣ್ಣನವರೇ ಇಷ್ಟಲಿಂಗದ ಜನಕರು ಎಂಬುದನ್ನು ಅಲ್ಲಮಪ್ರಭು, ಸಿದ್ಧರಾಮ, ಅಕ್ಕಮಹಾದೇವಿ ಮುಂತಾದವರು ಸೂಚಿಸಿದ್ದಾರೆ. ಲಿಂಗಭೇದ, ವರ್ಣಭೇದ ಮತ್ತು ವರ್ಗಭೇದವನ್ನು ಕಳೆದು ಸಮರತಿ, ಸಮಕಳೆ ಮತ್ತು ಸಮಸುಖದ ಅರಿವು ಮೂಡಿಸಲಿಕ್ಕಾಗಿಯೇ ಇರುವಂಥದ್ದು ಎಂಬುದನ್ನು ಬಸವಣ್ಣನವರು ಸ್ಪಷ್ಟಪಡಿಸಿದ್ದಾರೆ. ‘‘ಲಿಂಗವ ಪೂಜಿಸಿ ಫಲವೇನಯ್ಯಾ ಸಮರತಿ, ಸಮಕಳೆ, ಸಮಸುಖವನರಿಯದನ್ನಕ್ಕ’’ ಎಂದು ಬಸವಣ್ಣನವರು ಪ್ರಶ್ನಿಸಿದ್ದಾರೆ.

ರಕ್ತಸಂಬಂಧವನ್ನು ‘ನಂಟುಭಕ್ತಿ ನಾಯಕ ನರಕ’ ಎಂದು ಅಲ್ಲಗಳೆದು ಭಕ್ತಿಸಂಬಂಧದ ಮೂಲಕ ಸರ್ವ ಜಾತಿಮತಗಳ ಜನರನ್ನು ಅಕ್ಕ, ಅಣ್ಣ, ಅಪ್ಪ, ಅವ್ವ, ಅಮ್ಮ, ತಾಯಿ, ತಂದೆ, ಬೊಪ್ಪ, ಅಜ್ಜ, ಮುತ್ತಜ್ಜ, ಮುತ್ತಾತ, ಅಯ್ಯ, ಮುತ್ತಯ್ಯ ಮುಂತಾದ ರಕ್ತಸಂಬಂಧದ ಶಬ್ದ ಮತ್ತು ಪದಗಳಿಗೆ ಭಕ್ತಿಸಂಬಂಧದ ಅರ್ಥ ಕೊಟ್ಟು ಇಡೀ ಮಾನವ ಸಮಾಜವನ್ನೇ ಮಹಾಮನೆಯ ಪರಿಕಲ್ಪನೆಯಲ್ಲಿ ನೋಡಿದ್ದಾರೆ. ಕಲ್ಯಾಣದ ಪ್ರಧಾನಿಯಾಗಿದ್ದರೂ ಕಾಯಕಜೀವಿಗಳ ಜೊತೆ ದಾಸೋಹದ ಪಂಕ್ತಿಯಲ್ಲಿ ಪ್ರಸಾದ ಸ್ವೀಕರಿಸುತ್ತ ಅವರ ಜೊತೆ ಬದುಕಿದ್ದಾರೆ.

ಕಾಯಕ, ಪ್ರಸಾದ ಮತ್ತು ದಾಸೋಹ ಪ್ರಜ್ಞೆಯೊಂದಿಗೆ ಸಮೂಹ ಬದುಕಿಗೆ ನಾಂದಿ ಹಾಡಿದ್ದಾರೆ. ಬಿಜ್ಜಳನ ಹಳೆಯ ರಾಜ್ಯವ್ಯವಸ್ಥೆಯ ಪ್ರಧಾನಿಯಾಗಿದ್ದರೂ ನವಸಮಾಜದ ನಿರ್ಮಾಣಕ್ಕಾಗಿ ಕಾಯಕಜೀವಿಗಳ ನಾಯಕತ್ವ ವಹಿಸಿಕೊಂಡು ಅದ್ವಿತೀಯ ಮುತ್ಸದ್ದಿ ಎನಿಸಿಕೊಂಡಿದ್ದಾರೆ. ಪ್ರಧಾನಿ ಸಮೇತ ಎಲ್ಲ ಪರಸೇವಕರು ಮತ್ತು ಕಾಯಕಜೀವಿಗಳು ಸರಿಸಮಾನರು ಎಂದು ಘೋಷಿಸಿದವರೇ ಬಸವಣ್ಣನವರು.

‘‘ಲಿಂಗವ ಪೂಜಿಸಿ ಫಲವೇನಯ್ಯ

ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ?

ಲಿಂಗವ ಪೂಜಿಸಿ ಫಲವೇನಯ್ಯ

ಕೂಡಲಸಂಗಮದೇವರ ಪೂಜಿಸಿ

ನದಿಯೊಳಗೆ ನದಿ ಬೆರಸಿದಂತಾಗದನ್ನಕ್ಕ?’’

ಎಂದು ಬಸವಣ್ಣನವರು ಹೇಳುವ ಮೂಲಕ ಇಷ್ಟಲಿಂಗ ಪೂಜೆಯ ಮಹತ್ವವನ್ನು ಸಾರಿದ್ದಾರೆ. ಈ ವಚನ ಲಿಂಗಾಂಗಸಾಮರಸ್ಯದ ಅರ್ಥವನ್ನು ಒಳಗೊಂಡಂತೆ ಲೌಕಿಕ ಬದುಕಿನ ಅರ್ಥವನ್ನೂ ಸ್ಫುರಿಸುತ್ತದೆ. ಲೌಕಿಕದಲ್ಲಿ ‘ಸಮರತಿ’ ಲಿಂಗಸಮಾನತೆಯನ್ನು ಸೂಚಿಸುತ್ತದೆ. ಬ್ರಹ್ಮತೇಜಸ್ಸು, ಕ್ಷಾತ್ರತೇಜಸ್ಸು ಎಂಬುದಿಲ್ಲ ಇರುವುದೊಂದೇ ಮಾನವ ತೇಜಸ್ಸು ಎಂಬುದನ್ನು ‘ಸಮಕಳೆ’ ಸೂಚಿಸುತ್ತದೆ. ‘ಸಮಸುಖ’ವೆಂಬುದು ಎಲ್ಲ ಮಾನವರಿಗೂ ಪ್ರಕೃತಿ ಒಂದೇ ರೀತಿಯಲ್ಲಿ ನೋಡಿಕೊಳ್ಳುತ್ತದೆ ಎಂಬ ಸತ್ಯವನ್ನು ತಿಳಿಸುತ್ತದೆ. ಈ ಸತ್ಯದ ಅರಿವೇ ಇಷ್ಟಲಿಂಗ ಪೂಜಾಫಲವಾಗಿದೆ. ಬಸವಣ್ಣನವರು ಇಷ್ಟಕ್ಕೇ ನಿಲ್ಲುವುದಿಲ್ಲ. ಇಷ್ಟಲಿಂಗ ಪೂಜೆಯು ಮಾನವ ಏಕತೆಯ ಅರಿವನ್ನು ಮೂಡಿಸುತ್ತದೆ ಎಂದು ಹೇಳುತ್ತಾರೆ. ಭೂಮಿಯ ಮೇಲಿನ ಎಲ್ಲ ಮಾನವರು ನದಿಯೊಳಗೆ ನದಿ ಬೆರೆತಾಗ ಉಂಟಾಗುವ ಐಕ್ಯಭಾವವನ್ನು ತಮ್ಮ ನಿಜಜೀವನದಲ್ಲಿ ಹೊಂದಿರಬೇಕು. ಈ ಅರಿವು ೂಡ ಇಷ್ಟಲಿಂಗ ಪೂಜಾಫಲವೇ ಆಗಿದೆ.

ಲಿಂಗಭೇದ, ಜಾತಿ-ವರ್ಣಭೇದ, ವರ್ಗಭೇದ ಹಾಗೂ ಮಾನವ ಸಮಾಜಗಳ ಭೇದವನ್ನು ಅಳಿದು ಸಮತೆಯ ಬದುಕನ್ನು ಬದುಕುವ ಅರಿವು ಮೂಡಿದಾಗ ಜಗತ್ತು ಯುದ್ಧ ಮತ್ತು ಎಲ್ಲ ತೆರನಾದ ಹಿಂಸೆಗಳಿಂದ ಮುಕ್ತವಾಗುತ್ತದೆ. ಬಸವಣ್ಣನವರ ಇಷ್ಟಲಿಂಗ ಸೃಷ್ಟಿಯ ಉದ್ದೇಶ, ಮಾನವನನ್ನು ವಿಶ್ವಮಾನವನನ್ನಾಗಿ ಮಾಡುವುದೇ ಆಗಿದೆ.

share
ರಂಜಾನ್ ದರ್ಗಾ
ರಂಜಾನ್ ದರ್ಗಾ
Next Story
X