Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ‘ಕಿಸಾನ್ ಸಮ್ಮಾನ್ ನಿಧಿ ಯೋಜನೆ’ |...

‘ಕಿಸಾನ್ ಸಮ್ಮಾನ್ ನಿಧಿ ಯೋಜನೆ’ | ರಾಜ್ಯದಲ್ಲಿ 18,922 ಕೋಟಿ ರೂ.ರೈತರ ಖಾತೆಗೆ ಜಮೆ: ಕೇಂದ್ರ ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ2 Aug 2025 10:00 PM IST
share
‘ಕಿಸಾನ್ ಸಮ್ಮಾನ್ ನಿಧಿ ಯೋಜನೆ’ | ರಾಜ್ಯದಲ್ಲಿ 18,922 ಕೋಟಿ ರೂ.ರೈತರ ಖಾತೆಗೆ ಜಮೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು ಉತ್ತರ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6 ಸಾವಿರ ರೂ.ಗಳು ಯಾವುದೇ ಮಧ್ಯವರ್ತಿಗಳಿಲ್ಲದೆ ರೈತರ ಖಾತೆಗಳಿಗೆ ನೇರವಾಗಿ ತಲುಪುತ್ತಿದೆ. ಈ ಯೋಜನೆಯ 20ನೇ ಕಂತು ಒಳಗೊಂಡಂತೆ ಈವರೆಗೆ ದೇಶದ ರೈತರಿಗೆ 3.89 ಲಕ್ಷ ಕೋಟಿ ರೂ. ಸಂದಾಯವಾಗಿದೆ. ಈ ಪೈಕಿ ರಾಜ್ಯದಲ್ಲಿ 18,922 ಕೋಟಿ ರೂ. ರೈತರ ಖಾತೆಗೆ ಜಮೆ ಆಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಶನಿವಾರ ಬೆಂಗಳೂರು ಉತ್ತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೆ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಿದ ಬಳಿಕ ಅವರು ರೈತರನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಸುಮಾರು 43.28 ಲಕ್ಷ ರೈತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದಿದ್ದಾರೆ. 2013-14ರಲ್ಲಿ ಕೇಂದ್ರದ ಕೃಷಿ ಬಜೆಟ್ 21,933 ಸಾವಿರ ಕೋಟಿ ರೂ. ಇತ್ತು. ಈಗ ನರೇಂದ್ರ ಮೋದಿ ಸರಕಾರದಲ್ಲಿ 2025-26ರಲ್ಲಿ 1,27,209 ಕೋಟಿ ರೂ.ಗಳ ಕೃಷಿ ಬಜೆಟ್‍ನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಇಂದಿನ 20ನೆ ಕಂತಿನಲ್ಲಿ ದೇಶದಾದ್ಯಂತ ಸುಮಾರು 9.7 ಕೋಟಿ ರೈತರ ಖಾತೆಗೆ ಸುಮಾರು 20,800 ಕೋಟಿ ರೂ. ಸಂದಾಯವಾಗಲಿದೆ. ಅಂದಿನ ನಮ್ಮ ಸರಕಾರದಿಂದ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ 6 ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ 4 ಸಾವಿರ ರೂ. ನೀಡುತ್ತಿತ್ತು. ಇದನ್ನು ಈಗಿನ ಸರಕಾರ ಪುನಃ ಜಾರಿಗೊಳಿಸಬೇಕು ಎಂದು ಸೋಮಣ್ಣ ಮನವಿ ಮಾಡಿದರು.

ರೈತರಿಗೆ ರಸಗೊಬ್ಬರದ ಸಮಸ್ಯೆಯಿಲ್ಲ: ರೈತರಿಗೆ ಯೂರಿಯಾ ಗೊಬ್ಬರ ಕೊರತೆಯನ್ನು ನಿವಾರಿಸಿದ್ದೇವೆ. 6.52 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯತೆಯಿದೆ. ರಾಜ್ಯಕ್ಕೆ 15,825 ಸಾವಿರ ಮೆಟ್ರಿಕ್ ಟನ್ ಲಭ್ಯವಿದ್ದು, ಯೂರಿಯಾ ಮಾರಾಟ ಬೇಡಿಕೆಗಿಂದ ಹೆಚ್ಚಿದೆ. ಇನ್ನೂ ಕೊರತೆ ಇದ್ದರೆ ಕೇಂದ್ರ ಸರಕಾರಕ್ಕೆ ತಿಳಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ರೈತರಿಗೆ ಯಾವುದೇ ಸಂಕಷ್ಟ ಆಗದಂತೆ ಅವರಿಗೆ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ನೀಡುವುದು ಸರಕಾರಗಳ ಜವಾಬ್ದಾರಿಯಾಗಿದೆ. ರೈತರ ಸಂಕಷ್ಟದ ಕಣ್ಣಿರು ಒರೆಸಬೇಕಿದೆ. ಈ ದಿಸೆಯಲ್ಲಿ ಬಯಲು ಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನ ಹೊಳೆ ಯೋಜನೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಇದರೊಂದಿಗೆ ಈ ಹಿಂದೆ ಪರಮಶಿವಯ್ಯ ಅವರ ವರದಿಯನ್ನು ನಾವು ಜಾರಿಗೊಳಿಸಬೇಕಿದ್ದು, ಇದರಿಂದ ವ್ಯರ್ಥವಾಗಿ ಸಮುದ್ರ ಸೇರುವ 500 ಟಿಎಂಸಿ ನೀರು ಲಭ್ಯವಾಗಲಿದೆ. ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿರುವ ಜಲಶಕ್ತಿ ಖಾತೆಯನ್ನು ಹೊಂದಿರುವ ಸೋಮಣ್ಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಸಬೇಕಿದೆ ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದ ಅಂಗವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು ಹಾಗೂ ಕೃಷಿ ಪರಿಕರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಹಾಡೋನಹಳ್ಳಿ ಗ್ರಾ.ಪಂ. ಅಧ್ಯಕ್ಷ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ.ಕಲಾವತಿ, ಉಪ ನಿರ್ದೇಶಕಿ ಗಾಯಿತ್ರಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ, ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X