ಸಚಿವ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ಆರೋಪ | ಡಿಜಿಪಿಗೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ?

ಕೆ.ಎನ್.ರಾಜಣ್ಣ
ಬೆಂಗಳೂರು : ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಕೇಳಿಬಂದ ಹನಿಟ್ರ್ಯಾಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ತನಿಖೆ ಪೂರ್ಣಗೊಳಿಸಿ ಡಿಜಿಪಿಗೆ ಅಂತಿಮ ವರದಿ ಸಲ್ಲಿಸಿರುವುದಾಗಿ ವರದಿಯಾಗಿದೆ.
ಈ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಪೂರ್ಣಗೊಳಿಸಿ ಅಂತಿಮ ವರದಿಯನ್ನು ಡಿಜಿ-ಐಜಿಪಿಗೆ ಸಲ್ಲಿಸಿದ್ದು, ಪರಿಶೀಲನೆ ನಂತರ ಗೃಹಮಂತ್ರಿ, ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
2025ರ ಮಾರ್ಚ್ನಲ್ಲಿ ನಡೆದ ಬಜೆಟ್ ಅಧಿವೇಶನ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಕೆಲವು ರಾಜಕಾರಣಿಗಳ ವಿರುದ್ಧ ಹನಿಟ್ರ್ಯಾಪ್ ಅಸ್ತ್ರವನ್ನು ಬಳಸಲಾಗುತ್ತಿದೆ. ನನ್ನ ಮೇಲೆ ಕೂಡ ಪ್ರಯೋಗ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸರ್ವಪಕ್ಷದ ಹಲವು ನಾಯಕರು ಸರಕಾರವನ್ನು ಒತ್ತಾಯಿಸಿದ್ದರು. ಬಳಿಕ ಇದನ್ನು ಗಂಭೀರವಾಗಿ ಪರಗಣಿಸಿದ ಸರಕಾರ, ಎಸ್ಐಟಿ ರಚನೆ ಮಾಡಿ ತನಿಖೆ ನಡೆಸುವಂತೆ ಆದೇಶಿಸಿತ್ತು
Next Story