Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕಮ್ಯುನಿಷ್ಟರು, ಅಂಬೇಡ್ಕರ್...

ಕಮ್ಯುನಿಷ್ಟರು, ಅಂಬೇಡ್ಕರ್ ಒಗ್ಗೂಡಿದ್ದರೆ ಕ್ರಾಂತಿಯಾಗಿ ನಾವು ಸಮಾಜವಾದದಲ್ಲಿ ಬದುಕುತ್ತಿದ್ದೆವು : ರಾವ್ ಸಾಹೇಬ್ ಕಸಬೆ

ವಾರ್ತಾಭಾರತಿವಾರ್ತಾಭಾರತಿ28 May 2025 8:39 PM IST
share
ಕಮ್ಯುನಿಷ್ಟರು, ಅಂಬೇಡ್ಕರ್ ಒಗ್ಗೂಡಿದ್ದರೆ ಕ್ರಾಂತಿಯಾಗಿ ನಾವು ಸಮಾಜವಾದದಲ್ಲಿ ಬದುಕುತ್ತಿದ್ದೆವು : ರಾವ್ ಸಾಹೇಬ್ ಕಸಬೆ

ಬೀದರ್ : ಕಮ್ಯುನಿಷ್ಟರು ಹಾಗೂ ಅಂಬೇಡ್ಕರ್ ಇವರಿಬ್ಬರು ಒಗ್ಗೂಡಿದರೆ ಈ ದೇಶದಲ್ಲಿ ಯಾವಾಗಲೋ ಕ್ರಾಂತಿಯಾಗಿ ನಾವು ಈಗ ಸಮಾಜವಾದದಲ್ಲಿ ಬದುಕುತ್ತಿದ್ದೆವು ಎಂದು ಮಹಾರಾಷ್ಟ್ರದ ಹಿರಿಯ ಸಾಹಿತಿ, ಚಿಂತಕ ರಾವ್ ಸಾಹೇಬ್ ಕಸಬೆ ಅವರು ಅಭಿಪ್ರಾಯಪಟ್ಟರು.

ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶಹೀದ್ ಭಗತಸಿಂಗ್ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಎನ್ ಸುಂದರರಾಜ್ ಅವರ ಸ್ಮರಣಾರ್ಥವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಹುಶಃ ಬಾಬಾಸಾಹೇಬರ ಮಾತುಗಳು ಕಮ್ಯುನಿಷ್ಟರಿಗೆ ತಿಳಿದಿಲ್ಲ ಅಥವಾ ಆ ಸಮಯದ ಕಮ್ಯುನಿಷ್ಟರು ಬಾಬಾಸಾಹೇಬರನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದರು ಅನಿಸುತ್ತದೆ. ಇವರಿಬ್ಬರು ಒಬ್ಬರಿಗೊಬ್ಬರು ತಿಳಿದುಕೊಂಡಿಲ್ಲ. ಈ ದೇಶದ ಬಡವರ ಚಳುವಳಿ ಮಾರ್ಕ್ಸ್ ವಾದಿಗಳು ನಡೆಸುತ್ತಿದ್ದರು. ಇನ್ನೊಂದು ಕಡೆ ದಲಿತರ ಚಳುವಳಿ ಅಂಬೇಡ್ಕರ್ ಅವರ ನೇತೃತ್ವದಲ್ಲಿ ನಡೆಯುತ್ತಿತ್ತು. ಒಂದು ವೇಳೆ ಇವರಿಬ್ಬರು ಒಗ್ಗೂಡಿದರೆ ಈ ದೇಶದಲ್ಲಿ ಕ್ರಾಂತಿಯಾಗುತ್ತಿತ್ತು. ಇವತ್ತು ನಾವು ಸಮಾಜವಾದದ ವ್ಯವಸ್ಥೆಯಲ್ಲಿ ಬದುಕಿರುತ್ತಿದ್ದೇವು. ಆದರೆ ಈ ತರಹ ಆಗಲಿಲ್ಲ ಎಂದು ತಿಳಿಸಿದರು.

ಇಂದು ದೇಶದಲ್ಲಿ ಫ್ಯಾಸಿಸಂ ಜಾರಿಯಲ್ಲಿದೆ. ಇಂದಿನ ದಿನಗಳಲ್ಲಿ ಅಸ್ಪೃಶ್ಯರ ಮುಖದ ಮೇಲೆ ಮೂತ್ರ ಮಾಡಲಾಗುತ್ತಿದೆ. ಸ್ತ್ರೀಯರನ್ನು ಬೆತ್ತಲೆ ಮಾಡಿ ರಸ್ತೆ ಮೇಲೆ ತಿರುಗಾಡಿಸಲಾಗುತ್ತಿದೆ. ಮಕ್ಕಳ ಮೇಲೆ ದೌರ್ಜನ್ಯ, ಮುಸ್ಲಿಂರಿಗೆ ತೊಂದರೆ, ಜಾತೀಯ ಘೋಷಣೆ ಹಾಗೂ ಬಲತ್ಕಾರದಂತಹ ಘಟನೆಗಳು ದಿನನಿತ್ಯ ಸಾಗುತ್ತಿವೆ. ಇದಕ್ಕೆಲ್ಲ ಕಾರಣವೇನೆಂದರೆ ಬಂಡವಾಳಶಾಹಿಯನ್ನು ಪೋಷಣೆ ಮಾಡುವುದಾಗಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ಉಳಿಸಬೇಕು ಎಂದರೆ ನಾವು ಇಂದು ಸುಂದರರಾಜ್ ಅವರ ವಿಚಾರಗಳ ಕಡೆಗೆ ಸಾಗಬೇಕಿದೆಯೋ ಅಥವಾ ಮೋದಿಯವರ ವಿಚಾರಗಳ ಕಡೆಗೆ ಸಾಗಬೇಕಿದೆಯೋ ಎನ್ನುವುದು ನಮ್ಮನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕಿದೆ. ಸಮಾಜವಾದ ಈ ದೇಶದಲ್ಲಿ ಅಷ್ಟೇ ಅಲ್ಲ, ಇಡೀ ಜಗತ್ತಿನಲ್ಲಿ ಬರಬೇಕು. ಅದು ತುಂಬಾ ಅವಶ್ಯಕವಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಪ್ರೊ.ಆರ್. ಕೆ.ಹುಡಗಿ, ಶಹೀದ್ ಭಗತ್‌ಸಿಂಗ್ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮಾರುತಿ ಗೋಖಲೆ, ಸದಸ್ಯರಾದ ನೂರಂದಯ್ಯ ಸ್ವಾಮಿ, ಬಾಬುರಾವ್ ಹೊನ್ನಾ, ನೀಲಂಜನ, ಸಾಮಾಜಿಕ ಹೋರಾಟಗಾರ ಗಂಗಾರಾಮ್ ನಡುವಿನದೊಡ್ಡಿ ಹಾಗೂ ಸುಂದರರಾಜ್ ಅವರ ಪತ್ನಿ ವಿಕ್ಟೋರಿಯಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X