ಬೀದರ್: ಬಸ್-ಬೈಕ್ ಢಿಕ್ಕಿ; ಸವಾರ ಮೃತ್ಯು

ಬೀದರ್ : ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್ ಹತ್ತಿರ ಗುರುವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ನಡೆದಿದೆ.
ಜೊನ್ನಿಕೇರಿ ಗ್ರಾಮದ ನಿವಾಸಿ ಯುವರಾಜ್ ಬಿರಾದಾರ್ (35) ಮೃತಪಟ್ಟ ಬೈಕ್ ಸವಾರ.
ಗುರುವಾರ ಬೆಳಿಗ್ಗೆ ಯುವರಾಜ್ ಬೀದರ್ ಕಡೆಯಿಂದ ತಮ್ಮ ಸ್ವಂತ ಊರಾದ ಜೊನ್ನಿಕೇರಿಗೆ ಹೋಗುತ್ತಿದ್ದರು. ಈ ಸಮಯದಲ್ಲಿ ಮಾರ್ಗ ಮಧ್ಯದ ಶೆಂಬೆಳ್ಳಿ ಕ್ರಾಸ್ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ ಇವರು ಸಾಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story