ಬೀದರ್ | ಬಸವಕಲ್ಯಾಣಕ್ಕೆ ವಸತಿ ಶಾಲೆ ಮಂಜೂರು

ಬೀದರ್ : ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ಹೊಸ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.
ತಾಲೂಕಿನಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಅಧಿಕ ಇದೆ. ಹೀಗಾಗಿ ಬಸವಕಲ್ಯಾಣದಲ್ಲಿ ವಸತಿ ಶಾಲೆ ಮಂಜೂರು ಮಾಡಿ ಈ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ವಿಜಯಸಿಂಗ್ ಈ ಮೊದಲು ಮನವಿ ಪತ್ರವನ್ನು ಸಲ್ಲಿಸಿದ್ದರು.
ವಿಜಯಸಿಂಗ್ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ಬಸವಕಲ್ಯಾಣದಲ್ಲಿ ವಸತಿ ಶಾಲೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಸರಕಾರ, ವಸತಿ ಶಾಲೆ ಮಂಜೂರು ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿಜಯಸಿಂಗ್ , ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಈ ವಸತಿ ಶಾಲೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Next Story