ಚಾಮರಾಜನಗರ:ಹೆದ್ದಾರಿ ಮಧ್ಯೆ ಪಲ್ಟಿಯಾದ ಅಕ್ಕಿ ಸಾಗಾಟದ ಲಾರಿ; ಚಾಲಕನಿಗೆ ಗಾಯ

ಚಾಮರಾಜನಗರ : ತಮಿಳುನಾಡಿನಿಂದ ಚಾಮರಾಜನಗರಕ್ಕೆ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ತಮಿಳುನಾಡಿನ ಈರೋಡ್ ನಿಂದ ಚಾಮರಾಜನಗರಕ್ಕೆ ಬರುವಾಗ ತುಂತುರು ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಲಾರಿ ಪಲ್ಟಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ತಮಿಳುನಾಡು ನಡುವಿನ ಸಂಪರ್ಕ ರಸ್ತೆಯಾಗಿದ್ದು, ಲಾರಿ ಪಲ್ಟಿಯಾಗಿದ್ದರಿಂದ ಗಂಟೆಗಟ್ಟಲೆ ಉಭಯ ರಾಜ್ಯಗಳ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಆಗಮಿಸಿ ಪಲ್ಟಿಯಾದ ಲಾರಿಯನ್ನು ಕ್ರೈನ್ ಮೂಲಕ ಮೇಲಕ್ಕೆ ಎತ್ತಿದ ಬಳಿಕ ಉಭಯ ರಾಜ್ಯಗಳ ನಡುವೆ ಸಂಚಾರ ಆರಂಭಗೊಂಡಿತ್ತು.
ಲಾರಿಯಲ್ಲಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Next Story