Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. ಭದ್ರಾ ಮೇಲ್ದಂಡೆ ಕಾಮಗಾರಿಗಳು...

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ; ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Jan 2025 8:47 PM IST
share
ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ; ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ, ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ. ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಜಿಲ್ಲೆಯ ವಾಣಿವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24ರ ಕೇಂದ್ರ ಬಜೆಟ್‍ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಆ ವೇಳೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ. ಸರಕಾರ ಅನೇಕ ಬಾರಿ ಕೇಂದ್ರಕ್ಕೆ ಮನವಿಯನ್ನು ನೀಡಿದ್ದು, ಪ್ರಧಾನಿ, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್‍ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ನಬಾರ್ಡ್‍ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್‍ರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ಈ ಬಜೆಟ್‍ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಬೇಕೆಂದು ಕೋರಿ ಕೇಂದ್ರಕ್ಕೆ ಬರೆದು ಒತ್ತಡ ಹೇರಲಾಗುವುದು ಎಂದರು.

ತಡೆಯಲು ಪ್ರಯತ್ನ: ಹೊಸದುರ್ಗ ತಾಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರಕಾರ ಮಾಡಲಿದೆ. ವಾಣಿವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ 2025ರ ಜ.14ರಲ್ಲಿ ಕೋಡಿ ಬಿದ್ದಿದೆ. ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್‌ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿವಿಲಾಸ ಸಾಗರ ಎಂದು ಕರೆಯಲಾಗಿದೆ. 1898ನೆ ಇಸವಿಯಲ್ಲಿ ಪ್ರಾರಂಭವಾಗಿ 1907ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30 ಟಿಎಂಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯ ವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು. ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X