ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ಹುಬ್ಬಳ್ಳಿ, ಮೇ 6: ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರ ಸಹಿತ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಶಶಿಕಲಾ, ಶ್ವೇತಾ, ಅಂಜಲಿ, ಸಂದೀಪ್ ಮತ್ತು ವಿಠಲ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Next Story