ಕಲಬುರಗಿ | ವಾಕ್ ಥಾನ್ಗೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ

ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕೆ.ಕೆ.ಆರ್.ಡಿ.ಬಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಜಂಟಿಯಾಗಿ ಮಂಗಳವಾರ ಆಯೋಜಿಸಿದ್ದ ವಾಕ್ ಥಾನ್ಗೆ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ ನೀಡಿದರು.
ಜಗತ್ ವೃತ್ತದಿಂದ ಆರಂಭವಾದ ವಾಕ್ ಥಾನ್, ಡಿ.ಸಿ. ಕಚೇರಿ ಹಾಗೂ ಕೆ.ಕೆ.ಆರ್.ಡಿ.ಬಿ ಕಚೇರಿ ಮಾರ್ಗವಾಗಿ ಪಿ.ಡಿ.ಎ. ಕಾಲೇಜಿನಲ್ಲಿ ಸಂಪನ್ನವಾಯಿತು. ನೂರಾರು ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಅಜಯ್ ಸಿಂಗ್, ದೇಶ ಸ್ವಾತಂತ್ರ್ಯವನ್ನು 1947ರ ಆಗಸ್ಟ್ 15ರಂದು ಪಡೆದರೆ, ಹೈದರಾಬಾದ್ ಕರ್ನಾಟಕದ ಜನರು 1948ರ ಸೆಪ್ಟೆಂಬರ್ 17ರಂದು ನಿಜವಾದ ಸ್ವಾತಂತ್ರ್ಯ ಉಸಿರಾಡಿದರು. ಈ ದಿನವೂ ಸ್ವಾತಂತ್ರ್ಯದ ದಿನದಷ್ಟೇ ಮಹತ್ವದ್ದಾಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.