ಕಾಸರಗೋಡು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಚಾಲಕ ಅಪಾಯದಿಂದ ಪಾರು

ಕಾಸರಗೋಡು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ಹೊರವಲಯದ ವಿದ್ಯಾನಗರದಲ್ಲಿ ನಡೆದಿದ್ದು, ಚಾಲಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ವಿದ್ಯಾನಗರ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾನಗರ ಪವಿತ್ರನ್ ಎಂಬವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದಾಗ ಭಾರೀ ಗಾಳಿ ಮಳೆಗೆ ಮರ ಉರುಳಿ ಬಿದ್ದಿದೆ. ವಿದ್ಯುತ್ ತಂತಿಯೂ ಮುರಿದು ಕಾರಿನ ಮೇಲೆ ಬಿದ್ದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿದ್ಯುತ್ ಮಂಡಳಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸಿದರು. ಕಾರಿಗೆ ಹಾನಿ ಉಂಟಾಗಿದೆ.
Next Story