Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಶನಿವಾರಸಂತೆ : ಮೀಲಾದುನ್ನಬಿ ಪ್ರಯುಕ್ತ...

ಶನಿವಾರಸಂತೆ : ಮೀಲಾದುನ್ನಬಿ ಪ್ರಯುಕ್ತ ಮದೀನಾ ಯೂತ್ ಬಾಯ್ಸ್ ವತಿಯಿಂದ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ10 Sept 2025 11:25 AM IST
share
ಶನಿವಾರಸಂತೆ : ಮೀಲಾದುನ್ನಬಿ ಪ್ರಯುಕ್ತ ಮದೀನಾ ಯೂತ್ ಬಾಯ್ಸ್ ವತಿಯಿಂದ ಶ್ರಮದಾನ

ಕೊಡಗು: ಶನಿವಾರಸಂತೆ ಮದೀನಾ ಯೂತ್ ಬಾಯ್ಸ್ ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ (ಸ.ಅ.) ರವರ 1500 ನೇ ಜನ್ಮ ದಿನಾಚರಣೆ ಪ್ರಯುಕ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ "ಫ್ರೆಶ್ ವಿಲೇಜ್” ಸ್ವಚ್ಛತಾ ಕಾರ್ಯಕ್ರಮದಡಿ ಶ್ರಮದಾನ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮದೀನಾ ಯೂತ್ ಬಾಯ್ಸ್ ಸಂಘದ ಅಧ್ಯಕ್ಷ ಹಾಗೂ ಕೆ.ಜೆ.ಆರ್. ಉಸ್ತಾದ್ ಹಸೈನಾರ್ ಕಾಜೂರು ಅವರ ನೇತೃತ್ವದಲ್ಲಿ ಬೆಳಿಗ್ಗೆ ಬಾಪೂಜಿ ವೃತ್ತದಿಂದ ಹೊರಟ ಸಂಘದ ಸದಸ್ಯರು ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪೊಲೀಸ್ ಠಾಣೆ, ಸಾರ್ವಜನಿಕ ಗ್ರಂಥಾಲಯ, ಮದ್ಯಪೇಟೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಮಾಡಿ ಸ್ವಚ್ಛಗೊಳಿಸಿದರು.

ಸಂಘದ ಸದಸ್ಯರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹೊರ ಆವರಣ ಹಾಗೂ ಒಳಾಂಗಣವನ್ನು ಸ್ವಚ್ಛಗೊಳಿಸಿದ ನಂತರ ಮುಖ್ಯಶಿಕ್ಷಕಿ ಜೆಸಿಂತಾ ಸಿಕ್ವೆರಾ ಮಾತನಾಡಿ, ಸರ್ಕಾರಿ ಶಾಲೆ ಸರ್ವಧರ್ಮ ಸಮನ್ವಯವನ್ನು ಸಾರುತ್ತದೆ. ಶಾಲೆಗೆ ಬರುವ ಅನುದಾನ ಕಡಿಮೆ. ಆ ಹಣದಿಂದ ಸ್ವಚ್ಛತೆ ಸಾಧ್ಯವಿಲ್ಲ. ಮದೀನಾ ಯೂತ್ ಬಾಯ್ಸ್ ಸದಸ್ಯರು ನಿಸ್ವಾರ್ಥ ಮನೋಭಾವದಿಂದ ಶಾಲೆಯನ್ನು ಸ್ವಚ್ಛಗೊಳಿಸಿ ಬೆಳಕು ನೀಡಿದ್ದಾರೆ. ಈ ಸಂಘ ಇತರ ಸಂಘಟನೆಗಳಿಗೆ ಮಾದರಿಯಾಗಲಿ ಎಂದು ಹಾರೈಸಿದರು.

`ಸಂಘದ ಅಧ್ಯಕ್ಷ ಉಸ್ತಾದ್ ಹಸೈನಾರ್ ಮಾತನಾಡಿ, ಸಮಾಜದಲ್ಲಿ ಉತ್ತಮ ಕಾರ್ಯ ಮಾಡುವ ಉದ್ದೇಶದಿಂದ ಮದೀನಾ ಯೂತ್ ಬಾಯ್ಸ್ ಸಂಘಟನೆ ರಚಿಸಿಕೊಂಡು ಈದ್ ಮಿಲಾದ್ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಾಗಿದೆ. ಹಿಂದೂ ಯುವಕರು ಸಹ ಜತೆಗೂಡಿದ್ದಾರೆ. ಮುಂದೆಯೂ ಈ ಸಂಘಟನೆ ಸಮಾಜದ ಯಾವುದೇ ಉತ್ತಮ ಕಾರ್ಯಕ್ಕೆ ಕೈಜೋಡಿಸುತ್ತದೆ ಎಂದರು.

ಸಂಘದ ಉಪಾಧ್ಯಕ್ಷ ಸುಜ್ಜಾದ್ ಭಯ್ಯಾ, ಪದಾಧಿಕಾರಿಗಳಾದ ಜಾಫರ್, ಮುನಾಫ್, ಮುಹೀದ್, ಶಾಹೀದ್, ರಬ್ಬಾನಿ, ಇಬ್ರಾಹಿಂ, ತಸ್ಲಿಂ ಮಾಮು, ಶಮೀರ್ ಅಳಿಯಾಕ, ಭಾವಕ, ಬಾಬಣ್ಣ, ರಫೀಕ್ ದುಬೈ, ಅಶ್ರಫ್, ದಸ್ತು, ತಸ್ವೀರ್ ಮತ್ತಿತರ ಸದಸ್ಯರು ಇಡೀ ದಿನದ ಶ್ರಮದಾನದಲ್ಲಿ ತೊಡಗಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X