Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ದೇಶದ ವಿವಿಧೆಡೆ ಅಪರಾಧ ಕೃತ್ಯಗಳಲ್ಲಿ...

ದೇಶದ ವಿವಿಧೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿ : ಮಧ್ಯ ಪ್ರದೇಶ ಮೂಲದ ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Aug 2025 11:34 PM IST
share
ದೇಶದ ವಿವಿಧೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿ : ಮಧ್ಯ ಪ್ರದೇಶ ಮೂಲದ ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ, ಆ.19: ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಅಪರಾಧ ಕೃತ್ಯಗಳನ್ನು ನಡೆಸಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಪೊಲೀಸ್ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣದ ತನಿಖೆೆ ಕೈಗೊಂಡ ಪೊಲೀಸರಿಗೆ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ.

ಈ ಸಂಬಂಧ ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕಳೆದ ಎರಡು ತಿಂಗಳಿನಿಂದ ನೂರಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಧ್ಯಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದರು.

ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ನಾರ್ವಲ್ಲಿ ಗ್ರಾಮದ ಸುರೇಶ್ ಸೆಂಗಾರ್(23) ಹಾಗೂ ಮಾಲ್‌ಪುರ ಗ್ರಾಮದ ಮನೀಶ್ ಭಗೇಲ್ (27) ಎಂದು ಗುರುತಿಸಲಾಗಿದೆ.

ಸುರೇಶ್ ವಿರುದ್ಧ ಕರ್ನಾಟಕ ಮತ್ತು ಹೊರ ರಾಜ್ಯಗಳಲ್ಲಿ 25ಕ್ಕೂ ಹೆಚ್ಚಿನ ಅಪರಾಧ ಪ್ರಕರಣಗಳು ದಾಖಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಸೆರೆಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಪೊಲೀಸರ ಮನೆಯಲ್ಲೇ ಕಳ್ಳತನ!:

ಮಡಿಕೇರಿ ನಗರದ ಓಲ್ಡ್ ರೈಫಲ್ ರೇಂಜ್ ಪೊಲೀಸ್ ವಸತಿ ಗೃಹ ಸಮುಚ್ಛಯದಲ್ಲಿ ಜೂ.17ರಂದು ರಾತ್ರಿ ವೇಳೆ ಮನೆಗಳ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿತ್ತು. ಮೂರು ಮನೆಗಳಿಂದ 95 ಸಾವಿರ ರೂ. ನಗದು ಮತ್ತು 5.5 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು.

ಈ ಕಳವು ಪ್ರಕರಣವನ್ನು ಪತ್ತೆ ಹಚ್ಚುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಕಳವು ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಸಿಸಿ ಕ್ಯಾಮರಾಗಳ ಮಾಹಿತಿಯನ್ನು ಕಲೆಹಾಕಿ ತನಿಖೆ ನಡೆಸಲಾಯಿತು.

ಕೆರೆಯಲ್ಲಿ ಬೈಕ್ ಪತ್ತೆ:

ತನಿಖೆಯ ಹಂತದಲ್ಲಿ ಮಕ್ಕಂದೂರು ಬಳಿಯ ಕಾಂಡನಕೊಲ್ಲಿಯ ಕೆರೆಯಲ್ಲಿ ಮಹಾರಾಷ್ಟ್ರ ನೋಂದಣಿಯ ಬೈಕ್ ಪತ್ತೆಯಾಗಿತ್ತು. ಈ ಆರೋಪಿಗಳು ತಾವು ದುಷ್ಕೃತ್ಯವೆಸಗುವ ಸಂದರ್ಭಗಳಲ್ಲೆಲ್ಲ ಕಳವು ಮಾಡಿದ ಬೈಕ್‌ಗಳನ್ನೇ ಬಳಸುತ್ತಿದ್ದರು. ಕೆರೆಗೆ ಹಾಕಿದ್ದ ಬೈಕ್‌ನ್ನು ಗೋವಾದಿಂದ ಕದ್ದು ಇಲ್ಲಿಗೆ ತರಲಾಗಿತ್ತು. ಬಳಿಕ ಮತ್ತೊಂದು ಬೈಕ್ ಕಳವು ಮಾಡಿ ತೆರಳಿದ್ದರೆಂದು ತನಿಖೆಯ ಸಂದರ್ಭ ತಿಳಿದು ಬಂದಿದೆ.

500 ಸಿಸಿ ಕ್ಯಾಮರಾ ಪರಿಶೀಲನೆ:

ಆರೋಪಿಗಳ ಸುಳಿವಿನ ಜಾಡು ಹಿಡಿದ ಪೊಲೀಸರು ಕೊಡಗು, ಹಾಸನ, ಗೋವಾ ಮೊದಲಾದೆಡೆ ಸುಮಾರು 700 ಕಿ.ಮೀ. ವ್ಯಾಪ್ತಿಯ 500 ಕ್ಕೂ ಅಧಿಕ ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲನೆಗೆ ಒಳಪಡಿಸಿದರು. ಆರೋಪಿಗಳ ಪತ್ತೆಗೆ ರಚಿಸಲಾಗಿದ್ದ ವಿಶೇಷ ತಂಡ ಮಧ್ಯ ಪ್ರದೇಶದ ಧಾರ್ ಜಿಲ್ಲೆಗೆ ತೆರಳಿ ಅಲ್ಲಿನ ಪೊಲೀಸ್ ಅಧಿಕಾರಿಗಳ ಸಹಕಾರದಿಂದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಬಂಧಿತರಿಂದ 50,480 ರೂ. ನಗದು, 9 ಮೊಬೈಲ್ ಫೋನ್‌ಗಳು, ಒಂದು ಬೋಲ್ಟ್ ಕಟ್ಟರ್, ಒಂದು ಕಬ್ಬಿಣದ ರಾಡ್ ಮತ್ತು ಒಂದು ಬ್ಯಾಕ್ ಪ್ಯಾಕ್ ಬ್ಯಾಗ್‌ನ್ನು ವಶಪಡಿಸಿಕೊಂಡಿರುವುದಾಗಿ ಎಸ್ಪಿ ಕೆ.ರಾಮರಾಜನ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಡಿವೈಎಸ್ಪಿ ಸೂರಜ್, ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X