Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ರೆಡ್ಡಿ ಸಮುದಾಯದಲ್ಲಿ ಯಾವುದೇ ಉಪ...

ರೆಡ್ಡಿ ಸಮುದಾಯದಲ್ಲಿ ಯಾವುದೇ ಉಪ ಪಂಗಡಗಳಿಲ್ಲ, ಜಾತಿ ಸಮೀಕ್ಷೆಯಲ್ಲಿ 1105ರಲ್ಲೇ ನಮೂದಿಸಬೇಕು : ಎಂ.ಸಿ.ಪ್ರಭಾಕರ್ ರೆಡ್ಡಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Aug 2025 5:30 PM IST
share
ರೆಡ್ಡಿ ಸಮುದಾಯದಲ್ಲಿ ಯಾವುದೇ ಉಪ ಪಂಗಡಗಳಿಲ್ಲ, ಜಾತಿ ಸಮೀಕ್ಷೆಯಲ್ಲಿ 1105ರಲ್ಲೇ ನಮೂದಿಸಬೇಕು : ಎಂ.ಸಿ.ಪ್ರಭಾಕರ್ ರೆಡ್ಡಿ ಆಗ್ರಹ

ಕೋಲಾರ : ರೆಡ್ಡಿ ಸಮುದಾಯದಲ್ಲಿ ಯಾವುದೇ ಉಪ-ಪಂಗಡಗಳು ಇಲ್ಲ, ಹಾಗಾಗಿ ಎಲ್ಲಾ ವೇಮನ -ಮಲ್ಲಮ್ಮ ರೆಡ್ಡಿಗಳು ಜಾತಿ ಸಮೀಕ್ಷೆಯಲ್ಲಿ 1105ರಲ್ಲೇ ನಮೂದಿಸಬೇಕು ಎಂದು ಕರ್ನಾಟಕ ರೆಡ್ಡಿ ಜನ ಸಂಘದ ರಾಜ್ಯ ಸಂಘಟನಾ ಅಧ್ಯಕ್ಷ ಎಂ.ಸಿ.ಪ್ರಭಾಕರ್ ರೆಡ್ಡಿ ಆಗ್ರಹಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.28ರಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಪ್ರಕಟಣೆಯಲ್ಲಿ ರೆಡ್ಡಿ ಜನರನ್ನು ಕ್ರಿಶ್ಚಿಯನ್, ಲಿಂಗಾಯತ , ಶೈವ, ಬಲಜ, ದಾಸರ, ಗೌಂಡರ್ ಎಂಬ ವಿವಿಧ ಧಾರ್ಮಿಕ ಉಪ ಪಂಗಡಗಳಾಗಿ ವಿಂಗಡಿಸಿ ವಾಸ್ತವವಾಗಿ 30-40 ಲಕ್ಷ ಮೂಲ ರೆಡ್ಡಿ ಸಮುದಾಯದ ಜನ ಸಂಖ್ಯೆಯನ್ನು ಕೇವಲ 7 ಲಕ್ಷಕ್ಕೆ ಇಳಿಸಿ ರೆಡ್ಡಿ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಇಲ್ಲಿಯವರೆಗೂ ರೆಡ್ಡಿ ಸಮುದಾಯವನ್ನು ರಡ್ಡಿ ಮತ್ತು ರೆಡ್ಡಿ ಎಂದಷ್ಟೇ ನಮೂದಿಸಲಾಗುತ್ತಿತ್ತು, ಆದರೆ ಕಾಂತರಾಜು ಆಯೋಗ ಬೇರೆ ಬೇರೆ ಧಾರ್ಮಿಕ ಗುಂಪಿಗೆ ಸೇರಿದ ಹಲವು ಉಪ ಪಂಗಡಗಳನ್ನು ರೆಡ್ಡಿಗಳ ಗುಂಪಿನಲ್ಲಿ ಸೇರಿಸಿ ರೆಡ್ಡಿ ಸಮುದಾಯಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಸಿಗಬೇಕಾದ ಸವಲತ್ತುಗಳಿಂದ ವಂಚಿಸಲಾಗುತ್ತಿದೆ ಎಂದು ದೂರಿದರು.

ರೆಡ್ಡಿ ಸಮಾಜದವರು ಎಲ್ಲರನ್ನೂ ಒಂದೇ ಕುಲದ ಜನ ಎಂದು ಜಾತಿ ಸಮೀಕ್ಷೆಯಲ್ಲಿ 1105 ರಲ್ಲೇ ನಮೂದಿಸಬೇಕು, ಯಾರಾದರೂ ಇತರೆ ಧರ್ಮಗಳಿಗೆ ಮತಾಂತರ ಆಗಿದ್ದರೆ, ಅವರನ್ನು ರೆಡ್ಡಿ ಸಮೀಕ್ಷೆಯಲ್ಲಿ ಸೇರಿಸಬಾರದು. ರೆಡ್ಡಿ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಎಲ್ಲಾ ವೇಮನ-ಮಲ್ಲಮ್ಮ ರೆಡ್ಡಿ ಜನಾಂಗವನ್ನು ಒಂದೇ ಕುಲವೆಂದು ಪರಿಗಣಿಸಿ ಸಮೀಕ್ಷಾ ಪಟ್ಟಿಯಲ್ಲಿ 1105ರಲ್ಲೇ ನಮೂದಿಸಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರೆಡ್ಡಿ ಜನ ಸಂಘದ ರಾಜ್ಯ ಸಂಘಟನಾ ಸಂಚಾಲಕ ರವೀಂದ್ರ ರೆಡ್ಡಿ, ಶಾಂತರಾಜು ರೆಡ್ಡಿ, ಸುರೇಶ್ ರೆಡ್ಡಿ, ಆನಂದ ರೆಡ್ಡಿ, ರಾಘವೇಂದ್ರ ರೆಡ್ಡಿ, ವೇಮಣ್ಣ, ರಾಮಚಂದ್ರ ರೆಡ್ಡಿ, ವಿಶ್ವನಾಥ್ ರೆಡ್ಡಿ, ಕೃಷ್ಣಾರೆಡ್ಡಿ, ಬಾಬು ರೆಡ್ಡಿ, ಚಿನ್ನಪ್ಪ ರೆಡ್ಡಿ, ಸಂಪಂಗಿ, ಜೀವನ್ ಉಪಸ್ಥಿತರಿದ್ದರು.

ʼರಾಜ್ಯದ ಇತಿಹಾಸದಲ್ಲಿ ಸ್ವಾತಂತ್ರ್ಯ ನಂತರದ ಮೊದಲ ಮೈಸೂರು ರಾಜ್ಯದ ಮುಖ್ಯಮಂತ್ರಿ ಕೆ.ಚಂಗಲರಾಯರೆಡ್ಡಿ ಅವರ ಸೇವೆಯನ್ನು ಗುರುತಿಸಿ ಕೋಲಾರ ಜಿಲ್ಲಾ ಕೇಂದ್ರದ ಯಾವುದಾದರೂ ಒಂದು ವೃತ್ತಕ್ಕೆ ಕೆ.ಸಿ.ರೆಡ್ಡಿ ವೃತ್ತ ಎಂದು ನಾಮಕರಣ ಮಾಡಿ ಅಲ್ಲಿ ಅವರ ಕಂಚಿನ ಪ್ರತಿಮೆ ಅನಾವರಣ ಮಾಡಬೇಕುʼ

ಪ್ರಭಾಕರ್ ರೆಡ್ಡಿ, ರಾಜ್ಯ ಅಧ್ಯಕ್ಷರು ಕರ್ನಾಟಕ ರೆಡ್ಡಿ ಜನ ಸಂಘ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X