Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಸಮಾನತೆಯ ಸಂದೇಶಕ್ಕಾಗಿ ಸೈಕ್ಲಿಂಗ್ ಮಾಡಿ...

ಸಮಾನತೆಯ ಸಂದೇಶಕ್ಕಾಗಿ ಸೈಕ್ಲಿಂಗ್ ಮಾಡಿ ವಿಶ್ವ ದಾಖಲೆ ಬರೆದ ಕೋಲಾರದ ಬಿ.ಎಂ.ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ18 March 2025 9:15 AM IST
share
ಸಮಾನತೆಯ ಸಂದೇಶಕ್ಕಾಗಿ ಸೈಕ್ಲಿಂಗ್ ಮಾಡಿ ವಿಶ್ವ ದಾಖಲೆ ಬರೆದ ಕೋಲಾರದ ಬಿ.ಎಂ.ಶ್ರೀನಿವಾಸ್

ಕೋಲಾರ, ಮಾರ್ಚ್.17 : "ಸಮಾನತೆಯ ಸಂದೇಶದೊಂದಿಗೆ ವಿಶ್ವ ದಾಖಲೆ" ಎಂಬ ಘೋಷಣೆಯಡಿ ಚಿನ್ನದ ನಾಡು ಕೋಲಾರದಿಂದ ಸಾಂಸ್ಕೃತಿಕ ನಗರಿ ಮೈಸೂರಿನವರೆಗೆ 12 ಗಂಟೆಗಳ ಸಮಯ ಅತೀವೇಗದಲ್ಲಿ ಸೈಕ್ಲಿಂಗ್ ಮಾಡಿ ವಿಶ್ವ ದಾಖಲೆ ಬರೆದ ಮಾಸ್ಟರ್ ಕ್ರೀಡಾಪಟು ಕೋಲಾರದ ಬಿ.ಎಂ.ಶ್ರೀನಿವಾಸ್ ಅವರನ್ನು ದಸಂಸ ಪದಾಧಿಕಾರಿಗಳು ಮೈಸೂರಿಗೆ ಬರಮಾಡಿಕೊಂಡು ಅಭಿನಂದಿಸಿದರು.

ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಸಹಯೋಗದಲ್ಲಿ ಸತತ 12 ತಾಸುಗಳ ಸೈಕ್ಲಿಂಗ್ ಮಾಡಿ ವಿಶ್ವ ದಾಖಲೆ ಬರೆದಿದ್ದಾರೆ. ಕೋಲಾರದ ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಮಾರ್ಚ್ 14ರ ಶುಕ್ರವಾರ ರಾತ್ರಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ .ಬಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ ರವರು ಹಸಿರು ಬಾವುಟ ಹಾರಿಸುವ ಮೂಲಕ ಸೈಕ್ಲಿಂಗ್ ಗೆ ಚಾಲನೆ ನೀಡಿದರು.

ಮಾರನೇ ದಿನ ಮಾರ್ಚ್ 15ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಟೌನ್ ಹಾಲ್ ತಲುಪಿ ವಿಶ್ವ ದಾಖಲೆ ಬರೆದ ಶ್ರೀನಿವಾಸ್ ಅವರನ್ನು ಮೈಸೂರಿನ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರೂ ಶ್ರೀನಿವಾಸ್ ಅವರನ್ನು ಮೈಸೂರಿನ ತಮ್ಮ ಮನೆಗೆ ಬರಮಾಡಿಕೊಂಡು ಅವರ ಸಾಧನೆಯನ್ನು ಶ್ಲಾಘಿಸಿದರು.

ಇಲ್ಲಿಯ ತನಕ ಸುಮಾರು 10 ಸಾವಿರ ಕಿ.ಮೀ.ಗೂ ಹೆಚ್ಚು ಸೈಕ್ಲಿಂಗ್ ಮಾಡಿರುವ ಶ್ರೀನಿವಾಸ್ ಕೋಲಾರದ ನೆಲ ಜಲ ಸಂಪನ್ಮೂಲ ರಕ್ಷಣೆಗಾಗಿ ಹಾಗೂ ಶಾಶ್ವತ ನೀರಾವರಿಗಾಗಿ ಸೈಕಲ್ ತುಳಿದಿದ್ದಾರೆ. ಚೈತ್ಯ ಭೂಮಿ ನಾಗಪುರಕ್ಕೆ ಸೈಕಲ್ ತುಳಿದ ಇವರು ಜಿಲ್ಲೆಗೆ ನೀರಾವರಿ ಯೋಜನೆ ರೂಪಿಸಬೇಕು ಎಂದು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಿದ್ದಾರೆ. ಇದೀಗ ಸಮಾನತೆಯ ಸಂದೇಶಕ್ಕಾಗಿ ವಿಶ್ವ ದಾಖಲೆ ಸೈಕ್ಲಿಂಗ್ ಮಾಡಿ ಗುರಿ ಮುಟ್ಟಿದ್ದಾರೆ.

ಈ ಸಂದರ್ಭದಲ್ಲಿ ಜಿ.ಡಬ್ಲೂ.ಆರ್ ಸಂಸ್ಥೆಯ ಮುಖ್ಯಸ್ಥೆ ಪೂಜಾ, ಸೈಕ್ಲಿಂಗ್ ಸಹಾಯಕರಾದ ಸುಹಾಸ್, ಸುಜೀತ್, ಮುಖಂಡರಾದ ಮುರುಡಗಳ್ಳಿ ಮಂಜು, ನಿಂಗರಾಜು ಬೇರಂಬಾಡಿ, ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯಕೋಟೆ, ಆಲಗೂಡು ಶಿವಕುಮಾರ್, ಸಂ.ಸಂಚಾಲಕರಾದ ಶಂಭುಲಿಂಗ ಸ್ವಾಮಿ,ಹೆಗ್ಗನೂರುನಿಂಗರಾಜು,ಬಿ.ಡಿ.ಶಿವಬುದ್ದಿ, ಯಾಚೇನಹಳ್ಳಿ ಸೋಮಶೇಖರ್,ಕುಕ್ಕೂರುರಾಜು,ರಜನಿ, ನಾಗರಾಜ್ ಮೂರ್ತಿ, ಉಮೇಶ್, ಅತ್ತಿಕುಪ್ಪೆರಾಮಕೃಷ್ಣ, ರಾಜು ಚಿಕ್ಕ ಹುಣಸೂರು, ಮೈಲಾರ ಮಹೇಶ್, ದಾಸಯ್ಯ, ಕಲ್ಲಹಳ್ಳಿ ಕುಮಾರ್,ಕುಪ್ಪೇಗಾಲಸೋಮಣ್ಣ, ಅಪ್ಸರ್, ರಾಜಣ್ಣ ಇತರರು ಉಪಸ್ಥಿತರಿದ್ದರು.

1982ರಿಂದ ಸುಮಾರು 43 ವರ್ಷಗಳ ಸುದೀರ್ಘ ಕಾಲ ಸುಸ್ಥಿರ ಆರೋಗ್ಯದ ಬಗ್ಗೆ ತಿಳಿ ಸಮುದಾಯಗಳ ಯುವ ಸಮೂಹಕ್ಕೆ ಸ್ಪೂರ್ತಿ ನೀಡಲೆಂದು ನಿರಂತರವಾಗಿ ಕ್ರೀಡೆ ಮತ್ತು ವ್ಯಾಯಾಮ ಕುರಿತು ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ಪ್ರತಿಯೊಬ್ಬರೂ ದಿನಕ್ಕೆ ಅರ್ಧ ಗಂಟೆ ವ್ಯಾಯಾಮ ಮಾಡುವುದರಿಂದ ಸುಸ್ಥಿರ ಆರೋಗ್ಯ ಹೊಂದಲು ಸಾಧ್ಯ. ನನ್ನ ಪ್ರಯತ್ನಕ್ಕೆ ಕೋಲಾರದ ಆದಿಮ ಸಾಂಸ್ಕೃತಿಕ ಕೇಂದ್ರ ಹಾಗೂ ಅಪಾರ ಸಂಖ್ಯೆಯ ಕೋಲಾರದ ಬಂಧುಗಳು ಬೆನ್ನು ತಟ್ಟಿದ್ದಾರೆ. ದೇಶದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿ ಇಂದು ಶಾಂತಿ ಸೌಹಾರ್ದತೆ ಕಾಪಾಡಲು ಸಮಾನತೆಯ ಸಂದೇಶಕ್ಕಾಗಿ ಸೈಕ್ಲಿಂಗ್ ಮಾಡಿದ್ದೇನೆ. ಇದು ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಆಗಿದೆ.

-- ಬಿ.ಎಂ. ಶ್ರೀನಿವಾಸ್, ಮಾಸ್ಟರ್ ಅಥ್ಲೀಟ್, ಕೋಲಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X