ಕೊಪ್ಪಳ : ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಂದ ಪತಿ

ಕೊಪ್ಪಳ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಗುರುವಾರ ಕೊಪ್ಪಳ ಜಿಲ್ಲೆಯ ಬೂದುಗುಂಪಾ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ ದೊಣ್ಣೆ ಕೊಲೆಯಾದ ಮಹಿಳೆ. ಶಿವಪ್ಪ ದೊಣ್ಣೆ ಎಂಬ ವ್ಯಕ್ತಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮುನೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Next Story