Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಶಾಸಕ ಸ್ಥಾನಕ್ಕೆ ಜನಾರ್ಧನ ರೆಡ್ಡಿ...

ಶಾಸಕ ಸ್ಥಾನಕ್ಕೆ ಜನಾರ್ಧನ ರೆಡ್ಡಿ ಅನರ್ಹತೆ ಬೆನ್ನಲ್ಲೇ ಗರಿಗೆದರಿದ ರಾಜಕೀಯ

►ಜನಾರ್ಧನ ರೆಡ್ಡಿ ಪತ್ನಿ ಚುನಾವಣಾ ಕಣಕ್ಕೆ ? ► ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಅಂತರ

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು16 May 2025 2:53 PM IST
share
ಶಾಸಕ ಸ್ಥಾನಕ್ಕೆ ಜನಾರ್ಧನ ರೆಡ್ಡಿ ಅನರ್ಹತೆ ಬೆನ್ನಲ್ಲೇ ಗರಿಗೆದರಿದ ರಾಜಕೀಯ

ಕೊಪ್ಪಳ/ಗಂಗಾವತಿ : ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಅನರ್ಹತೆಗೊಂಡ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿವೆ.

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕಿನ ಓಬಳಾಪುರಂನ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ಜನಾರ್ಧನ ರೆಡ್ಡಿಯವರನ್ನು ದೋಷಿ ಎಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದಾದ ಬೆನ್ನಲ್ಲೇ ಸ್ಪೀಕರ್ ಯು.ಟಿ.ಖಾದರ್ ಅವರು ಭಾರತ ಸಂವಿಧಾನದ 191(1)(ಇ) ವಿಧಿಯ ನಿಬಂಧನೆಗಳ ಪ್ರಕಾರ ಶಾಸಕ ಜನಾರ್ಧನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿದ್ದಾರೆ.

ಸದ್ಯ ತೆರವುಗೊಂಡ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗದಿದ್ದರೂ, ಈ ಕ್ಷೇತ್ರಕ್ಕೆ ಚುನಾವಣೆ ನಡೆದರೆ ಯಾರು ಸ್ಪರ್ಧೆ ಮಾಡಬೇಕು ಎಂದು ರಾಜಕೀಯ ಮುಖಂಡರು ತಮ್ಮ ತಮ್ಮ ಪ್ರಯತ್ನದಲ್ಲಿ ತೊಡಗಿದ್ದಾರೆ. ಇನ್ನೂ ಇಲ್ಲೆ ಹನುಮನ ಜನ್ಮ ಸ್ಥಳವಾದ ಅಂಜನಾದ್ರಿ ಇದ್ದು, ಇದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಪ್ರತಿಷ್ಠೆಯ ಕ್ಷೇತ್ರವಾಗಿದೆ.

ಗಂಗಾವತಿ ಕ್ಷೇತ್ರದಲ್ಲಿ ಕಳೆದ ಬಾರಿ ಜನಾರ್ಧನ ರೆಡ್ಡಿ ಅವರು 66,213 ಮತಗಳನ್ನು ಪಡೆದು ಕೊಳ್ಳುವ ಮೂಲಕ ಶೇ.41.42ರಷ್ಟು ಮತ ಪ್ರಮಾಣವನ್ನು ಗಳಿಸಿ ಗೆದಿದ್ದರು. ಕಾಂಗ್ರೇಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಅವರು 57,947 ಮತಗಳ ಮೂಲಕ ಶೇ.36.35 ರಷ್ಟು ಮತಪ್ರಮಾಣ ಗಳಿಸಿ ಪರಭಾವಗೊಂಡಿದ್ದರು. ಇನ್ನು 2019ರ ಚುನಾವಣೆಯಲ್ಲಿ ಗೆದ್ದಿದ್ದ ಬಿಜೆಪಿಯ ಪರಣ್ಣ ಮುನವಳ್ಳಿಯವರು 2023ರ ಚುನಾವಣೆಯಲ್ಲಿ ಕೇವಲ 29,167 ಶೇ.18.25 ಮತಗಳಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿಕೊಂಡಿದ್ದರು.

ಈ ಕ್ಷೇತ್ರದಲ್ಲಿ ಸಂಘಪರಿವಾರವು ಬಿಜೆಪಿಯ ಪರಣ್ಣ ಮುನವಳ್ಳಿಯನ್ನು ಬಿಟ್ಟು ಜನಾರ್ಧನ ರೆಡ್ಡಿಯವರನ್ನು ಬೆಂಬಲಿಸಿದ್ದರು. ಇದರಿಂದ ರೆಡ್ಡಿ ಇಲ್ಲಿ ಗೆದಿದ್ದರು ಎಂಬ ಮಾತುಗಳು ಜಿಲ್ಲೆಯ ಜನರಿಂದ ಕೇಳಿಬರುತ್ತಿವೆ. ಇನ್ನು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಸೋಲಿಗೆ ಜಿಲ್ಲೆಯ ಕಾಂಗ್ರೇಸ್ ನಾಯಕರೇ ಕಾರಣ. ಅದರಲ್ಲೂ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್‌ ಅವರ ಕುಟುಂಬವೇ ಕಾರಣ ಎಂದು ಜನರು ಹೇಳುತಿದ್ದಾರೆ. ಗಂಗಾವತಿ ಕಾಂಗ್ರೇಸ್ ಮುಖಂಡ ಹಾಗೂ ಮಾಜಿ ಪರಿಷತ್ ಸದಸ್ಯ ಹೆಚ್. ಶ್ರೀನಾಥ್ ಅವರು ಬಹಿರಂಗವಾಗಿಯೇ ಜನಾರ್ಧನ ರೆಡ್ಡಿಯವರನ್ನು ಬೆಂಬಲಿಸಿದ್ದರು. ಇದರ ಜೊತೆಗೆ ಅನ್ಸಾರಿ ಹಾಗೂ ಅಲ್ಲಿನ ಇತರೆ ಕಾಂಗ್ರೇಸ್ ಮುಖಂಡರಾದ ಶಾಮಿದ್ ಮನಿಯಾರ್ ಮತ್ತು ಶೈಲಜ ಹಿರೇಮಠ ಅವರೊಂದಿಗಿನ ಸಂಭಂದ ಹದಗೆಟ್ಟಿತ್ತು, ಇನ್ನು ಅನ್ಸಾರಿ ಸರಿಯಾದ ಚುನಾವಣಾ ಪ್ರಚಾರವನ್ನು ಮಾಡದೇ ಇರುವುದು ಅವರ ಸೋಲಿಗೆ ಕಾರಣವಾಗಿತ್ತು ಎಂದು ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರು ಹೇಳುತ್ತಾರೆ.

ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಕುಟುಂಬ ನನಗೆ ಚುನಾವಣೆಯಲ್ಲಿ ಮೋಸಮಾಡಿದೆ ಎಂದು ಕಾಂಗ್ರೇಸ್ ಕಾರ್ಯಕರ್ತ ಸಭೆಯಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಮಾಜಿ ಸಚಿವ ಬಯ್ಯಪೂರ ಹಾಗೂ ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಅವರ ಮುಂದೆಯೇ ಅನ್ಸಾರಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೂ ನಂತರ ನಡೆದ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ರಾಘವೇಂದ್ರ ಹಿಟ್ನಾಳ್ ರವರ ಸಹೋದರ ರಾಜಶೇಖರ ಹಿಟ್ನಾಳ ಅವರು ಗೆಲುವು ಸಾಧಿಸುವಲ್ಲಿ ಅನ್ಸಾರಿ ಅವರು ಮುಖ್ಯ ಕಾರಣರಾದರು.

ಈ ಕ್ಷೇತ್ರಕ್ಕೆ ಬಿಜೆಪಿಯಿಂದ ಪರಣ್ಣ ಮುನವಳ್ಳಿ ಅವರು ಬಲವಾದ ಅಕಾಂಕ್ಷಿ ಆಗಿದ್ದು, ಇದರ ಜೊತೆಗೆ ನೆಕ್ಕಂಟಿ ಸೂರಿಬಾಬು ಅವರ ಹೆಸರು ಕೇಳಿಬರುತ್ತಿದೆ. ಇನ್ನೊಂದೆಡೆ ಜನಾರ್ಧನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಚುಣಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತಗಳು ಕೇಳಿಬರುತ್ತಿವೆ.

ಕಾಂಗ್ರೇಸ್‌ನಿಂದ ಇಕ್ಬಾಲ್ ಅನ್ಸಾರಿಯವರನ್ನು ಹೊರತುಪಡಿಸಿ, ಹೆಚ್.ಶ್ರೀನಾಥ್, ಮಾಜಿ ಸಂಸದ ಕರಡಿ ಸಂಗಣ್ಣನವರ ಹೆಸರು ಮುಂಚೂಣಿಯಲ್ಲಿದ್ದು, ಈಗ ಮತ್ತೋಂದು ಹೆಸರು ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ತಂದೆ ಮಾಜಿ ಶಾಸಕ ಬಸವರಾಜ್ ಹಿಟ್ನಾಳ್ ಅವರ ಹೆಸರು ಕೇಳಿಬರುತ್ತಿವೆ. ಒಂದು ವೇಳೆ ಹೀಗಾದರೆ ಇಕ್ಬಾಲ್ ಅನ್ಸಾರಿಯವರ ಸೋಲಿಗೆ ಕಾರಣರಾದ ಶಾಸಕ ರಾಘವೇಂದ್ರ ಹಿಟ್ನಾಳ್‌ರವರ ತಂದೆಯನ್ನು ಸೋಲಿಸುತ್ತೆವೆ ಎಂದು ಅಲ್ಲಿನ ಮುಸ್ಲಿಂ ಮತದಾರರು ಹೇಳುತ್ತಿದ್ದಾರೆ.

ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಅಂತರ :

ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಿಂದ ನಿರಂತರವಾಗಿ ಮುಸ್ಲಿಂ ಮುಖಂಡರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಮುಸ್ಲಿಂ ಮುಖಂಡರನ್ನು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಉಪಯೋಗಿಸಿಕೊಂಡು ನಂತರ ಅವರನ್ನು ಗಣನೆಗೆ ತೆಗೆದುಕೊಳ್ಳುವುದ್ದಿಲ್ಲ ಎಂಬ ಅಸಮಾಧಾನ ಎದ್ದು ಕಾಣುತ್ತಿದೆ. ಇಕ್ಬಾಲ್ ಅನ್ಸಾರಿ ಅವರನ್ನು ಗಂಗಾವತಿಯಲ್ಲಿ ಸೋಲಿಸಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಗುತ್ತಿಗೆ ಕಾಮಗಾರಿ ನೀಡುವ ಸಂದರ್ಭದಲ್ಲಿ ತಮ್ಮ ಸಮುದಾಯದವರನ್ನು ಮಾತ್ರ ಪರಿಗಣಿಸುತ್ತಾರೆ ಎನ್ನುವ ಅಸಮಾಧಾನದ ಹೊಗೆ ಮುಸ್ಲಿಂ ಮತದಾರರು ಮತ್ತು ಮುಖಂಡರಲ್ಲಿ ಕಾಣುತ್ತಿದೆ.

ಕಳೆದ ಚುನಾವಣೆಯಲ್ಲೆ ಶಾಸಕ ಹಿಟ್ನಾಳ್ ಅವರನ್ನು ಸೋಲಿಸುತ್ತಿದೆವು ನಮಗೆ ಬೇರೆ ಯಾರು ಉತ್ತಮ ಅಭ್ಯರ್ಥಿ ಇಲ್ಲದ ಕಾರಣ ಅವರನ್ನು ಗೆಲ್ಲಿಸಿದ್ದೇವೆ ಎಂದು ಜನರು ಅಕ್ರೋಶದ ಮಾತುಗಳು ಮುಸ್ಲಿಂ ಮತದಾರರಿಂದ ಕೇಳಿ ಬರುತಿದ್ದು, ಇದರ ಕಾವು ಗಂಗಾವತಿಯಲ್ಲಿ ಕಾಣಬಹುದು. ಕೇವಲ ರಾಘವೇಂದ್ರ ಹಿಟ್ನಾಳ್‌ ಅವರಿಗಾಗಿ ಇಡಿ ಜಿಲ್ಲೆಯ ಕಾಂಗ್ರೇಸ್ ನ ಭವಿಷ್ಯ ವನ್ನೇ ಬಲಿಕೊಡಲಾಗುತ್ತಿದೆ. ಹೀಗೆ ಮುಂದುವರೆದರೆ ಗಂಗಾವತಿಯಲ್ಲಿ ಚುಣಾವಣೆ ನಡೆದಾಗ ಕಾಂಗ್ರೇಸ್ ಪಕ್ಷ ಗೆಲ್ಲುವುದು ಕಷ್ಟವಾಗುತ್ತದೆ ಎಂದು ಕಾಂಗ್ರೇಸ್ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಇದೆಲ್ಲಾದರ ಮಧ್ಯ ಉಪಚುನಾವಣೆ ನಡೆದರೆ ರಾಜಕೀಯ ಪಲ್ಲಟ ಹೆಗಾಗುತ್ತದೆ ಎಂದು ಕಾದು ನೋಡಬೇಕಾಗಿದೆ.

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X