Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ʼಅಗತ್ಯ ಬಿದ್ದರೆ ನಾವು ತೊಡೆನೂ...

ʼಅಗತ್ಯ ಬಿದ್ದರೆ ನಾವು ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆʼ : ಮದ್ದೂರಿನಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ10 Sept 2025 9:19 PM IST
share
ʼಅಗತ್ಯ ಬಿದ್ದರೆ ನಾವು ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆʼ : ಮದ್ದೂರಿನಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಸಿ.ಟಿ.ರವಿ

ಮಂಡ್ಯ, ಸೆ.10: ಗಣಪತಿಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಸಹಜ ಸ್ಥಿತಿಯತ್ತ ಮರುಳುತ್ತಿರುವ ಬೆನ್ನಲ್ಲೇ, ಸಿ.ಟಿ.ರವಿ ಸೇರಿದಂತೆ ಕೆಲವು ಬಿಜೆಪಿ ನಾಯಕರ ಪ್ರಚೋದನಾಕಾರಿ ಭಾಷಣ ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕಳೆದ ರವಿವಾರ ರಾತ್ರಿ ಮದ್ದೂರಿನ ರಾಮ್‌ ರಹೀಂ ನಗರದ ಮಸೀದಿ ಬಳಿ ಗಣಪತಿಮೂರ್ತಿ ಮೇಲೆ ಕಲ್ಲು ತೂರಾಟ ನಡೆದು ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮರುದಿನ ಸೋಮವಾರ ಬಿಜೆಪಿ, ಜೆಡಿಎಸ್, ಹಿಂದುತ್ವ ಸಂಘಟನೆಗಳ ನೂರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಲಘು ಲಾಠಿ ಪ್ರಹಾರವೂ ಆಗಿತ್ತು.

ಎಚ್ಚೆತ್ತ ಸರಕಾರ ಪಟ್ಟಣದಲ್ಲಿ ಸರ್ಪಗಾವಲು ಹಾಕಿದೆ. ಮಂಗಳವಾರ ಪಟ್ಟಣದಲ್ಲಿ ಬಂದ್ ಕರೆಕೊಡಲಾಗಿತ್ತು. ಪರಿಸ್ಥಿತಿ ಸಹಜ ಸ್ಥಿತಿಯತ್ತ ಬರುತ್ತಿದೆ. ಆದರೆ, ಬುಧವಾರ ಸಾಮೂಹಿಕ ಗಣಪತಿಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ನಾಯಕರು ಮುಸ್ಲಿಮರು, ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷವನ್ನು ಕಾರಿದರು.

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ತನ್ನ ಭಾಷಣದುದ್ದಕ್ಕೂ ಇಸ್ಲಾಂ ಧರ್ಮ, ಮುಸ್ಲಿಮರು, ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಸಿ.ಟಿ.ರವಿಗೆ ತಾವೇನೂ ಕಡಿಮೆ ಎಂಬಂತೆ ಅಬ್ಬರಿಸಿದರು.

‘ಟಿಪ್ಪು ಮತ್ತು ಅವರ ಅಪ್ಪನನ್ನೇ ಬಿಟ್ಟಿಲ್ಲ ನಾವು. ಇನ್ನು ನಿಮ್ಮನ್ನು ಬಿಡುತ್ತೀವಾ? ನಮಗೆ ತೊಡೆ ತಟ್ಟುವ ಕೆಲಸ ಮಾಡಬೇಡಿ. ಅಗತ್ಯ ಬಿದ್ದರೆ ನಾವೂ ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆ. ಅಣ್ಣ ಅಂದವರನ್ನು ನಾವು ಅಣ್ಣ ಅಂತೀವಿ. ನೀವು ಏನ್ಲ ಅಂದ್ರೆ ನಿಮ್ ತಲೆ ತೆಗಯುತ್ತೇವೆ. ನಮ್ಮಲ್ಲಿ ಉರೀಗೌಡ, ನಂಜೇಗೌಡರು ಇದ್ದಾರೆ’ ಎಂದು ಸಿ.ಟಿ.ರವಿ ಸವಾಲು ಹಾಕಿದರು.

‘ಭದ್ರಾವತಿ ಶಾಸಕ ಸಂಗಮೇಶ್ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತಾನಂತೆ. ನಿನ್ನ ಯಾವನಯ್ಯಾ ತಡೆಯುತ್ತಾನೆ. ಈ ಜನ್ಮದಲ್ಲೇ ಹೋಗು. ಮುಂದಿನ ಜನ್ಮದಲ್ಲಿ ನೀನು ದನ ತಿನ್ನುವವನಾಗಿಯೇ ಹುಟ್ಟುತ್ತೀಯಾ. ಕಾಂಗ್ರೆಸ್‌ನ ಇಡೀ ಸಚಿವ ಸಂಪುಟವೇ ಇಸ್ಲಾಂಗೆ ಕನ್ವರ್ಟ್ ಆಗಿಬಿಡಲಿ, ನೇರವಾಗಿ ಎದರಿಸುವ ಶಕ್ತಿ ನಮಗಿದೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರ ಓಲೈಕೆ ಹೇಳಿಕೆಯಿಂದಲೇ ಕೊಬ್ಬಿರುವುದು ಇವರು(ಮುಸ್ಲಿಮರು). ಇಸ್ಲಾಂನಲ್ಲಿ ಸಹಬಾಳ್ವೆಗೆ ಜಾಗವೇ ಇಲ್ಲ. ಈ ಜಗತ್ತನ್ನು ಎರಡಾಗಿ ನೋಡ್ತಾರೆ. ಒಂದು ಮಾಮಿನ್, ಮತ್ತೊಂದು ಕಾಫಿರ್. ಸಿದ್ದರಾಮಯ್ಯ ಏನ್ ಟೋಪಿ ಹಾಕಿದ್ದರು, ಡಿ.ಕೆ.ಶಿವಕುಮಾರ್ ಏನ್ ಬ್ರದರ್‌ ಎಂದರೂ ಅವರ(ಮುಸ್ಲಿಂರ) ದೃಷ್ಟಿಯಲ್ಲಿ ಅವರು ಕಾಫಿರೇ. ಇದೇ ಇಸ್ಲಾಂ ಹೆಸರಲ್ಲೇ ಜಗತ್ತಿನಲ್ಲಿ ಭಯೋತ್ಪಾದನೆ ನಡೆಯುತ್ತಿರುವುದು, ಎಲ್ಲಿವರೆಗೂ ಇಸ್ಲಾಂ ಬದಲಾಗಲ್ಲ, ಅಲ್ಲಿವರೆಗೂ ಜಗತ್ತಿನಲ್ಲಿ ಶಾಂತಿ ನೆಲಸಲು ಆಗಲ್ಲ’ ಎಂದು ಅವರು ಗುಡುಗಿದರು.

‘ನಾವು ಮದ್ದೂರಿಗೆ ರಾಜಕಾರಣ ಮಾಡಲು ಬಂದಿಲ್ಲ, ಹಿಂದೂ ಸಮಾಜದ ಕೇಸರಿ ಶಾಲು ಹಾಕಿಕೊಂಡು ಬಂದಿದ್ದೇವೆ. ಹಿಂದೂ ವಿಷಯದಲ್ಲಿ ರಾಜಕಾರಣವಿಲ್ಲ. ನೀವೇನು ಮಾಡುತ್ತೀರಿ ಎನ್ನುವುದು ನಮಗೆ ಗೊತ್ತಿದೆ. ಪಾಕಿಸ್ತಾನ ಝಿಂದಾಬಾದ್ ಎನ್ನುವವರನ್ನು ನಮ್ಮವರು ಎನ್ನುತ್ತೀರಿ. ಪಾಕಿಸ್ತಾನ ಮೇಲೆ ನಿಮಗೆ ಪ್ರೀತಿ ಇದ್ದರೆ ಅಲ್ಲಿಗೆ ಗಂಟು ಮೂಟೆ ಕಟ್ಟಿ ನಡೆಯಿರಿ’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X