Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ರಾಮನಗರ ಜಿಲ್ಲೆಗೆ ಕುಡಿಯುವ ನೀರು:...

ರಾಮನಗರ ಜಿಲ್ಲೆಗೆ ಕುಡಿಯುವ ನೀರು: ಕಾಮಗಾರಿ ಪ್ರಗತಿ ಪರಿಶೀಲನೆ ನೆಡೆಸಿದ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ5 May 2025 8:55 PM IST
share
ರಾಮನಗರ ಜಿಲ್ಲೆಗೆ ಕುಡಿಯುವ ನೀರು: ಕಾಮಗಾರಿ ಪ್ರಗತಿ ಪರಿಶೀಲನೆ ನೆಡೆಸಿದ ಡಿ.ಕೆ.ಶಿವಕುಮಾರ್

ಮಂಡ್ಯ : ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದ ಸಮೀಪ ಕಾವೇರಿ ನದಿಯ ಸತ್ತೇಗಾಲ ಅಣೆಕಟ್ಟೆಯಿಂದ ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ತಾಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಪ್ರಗತಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಪರಿಶೀಲಿಸಿದರು.

ಸತ್ತೇಗಾಲ ಸಮೀಪದ ಅಣೆಕಟ್ಟೆಯಿಂದ ಗುರುತ್ವಾಕರ್ಷಣೆ ಮೂಲಕ ಇಗ್ಗಲೂರಿನ ಎಚ್.ಡಿ.ದೇವೇಗೌಡ ಬ್ಯಾರೇಜಿಗೆ ನೀರನ್ನು ಹರಿಸಿ ಅಲ್ಲಿಂದ ನೀರನ್ನು ಎತ್ತಿ(ಪಂಪಿಂಗ್) ಕಣ್ವಾ, ಮಂಚನಬೆಲೆ ಮತ್ತು ವೈ.ಜಿ.ಗುಡ್ಡ ಜಲಾಶಯಗಳ ಮೂಲಕ ರಾಮನಗರ ಜಿಲ್ಲೆಯ ನಾಲ್ಕು ತಾಲೂಕುಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇಗ್ಗಲೂರು ಬ್ಯಾರೇಜ್‍ನಿಂದ 1.10 ಟಿಎಂಸಿ ನೀರನ್ನು ಶಿಂಷಾ ನದಿಯ ಮೂಲಕ ಹರಿಸಿ ಕನಕಪುರ ತಾಲೂಕಿಗೆ ಹಾಗೂ ಇಗ್ಗಲೂರು ಬ್ಯಾರೇಜ್‍ನಿಂದ ನೀರನ್ನು ಎತ್ತಿ ಚನ್ನಪಟ್ಟಣ ತಾಲೂಕಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು ಹಾಗೂ ಕಣ್ವ ಜಲಾಶಯ ತುಂಬಿಸಲಾಗುವುದು.

ಈ ಯೋಜನೆಗೆ ಬೇಕಾಗಿರುವ 3.3 ಟಿಎಂಸಿ ನೀರನ್ನು ರಾಷ್ಟ್ರೀಯ ಜಲ ನೀತಿಯ ಅನ್ವಯ ಕುಡಿಯುವ ನೀರಿಗೆ ಆದ್ಯತೆ ನೀಡಿ ಕಾವೇರಿ ಜಲ ವಿವಾದ ನ್ಯಾಯ ಮಂಡಳಿಯ ಆದೇಶದ ಪ್ರಕಾರ ಹಂಚಿಕೆಯಾಗಿರುವ ನೀರಿನಲ್ಲಿ ಉಪಯೋಗಿಸಿಕೊಳ್ಳಲು ಸರಕಾರದ ಆದೇಶವಾಗಿದೆ. ಯೋಜನೆಯ ಒಟ್ಟು ಯೋಜನಾ ವೆಚ್ಚ 540 ಕೋಟಿ ರೂ. ಆಗಿದೆ.

26 ಕಿ.ಮೀ. ಉದ್ದದ ಪೈಪ್‍ಲೈನ್ ಅಳವಡಿಸುವ ಜಾಗದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಮಾರು 12 ಗ್ರಾಮಗಳ 32 ಎಕರೆ ಜಮೀನಿಗೆ ದಿನಾಂಕ: 10.01.2024ರ ಕರ್ನಾಟಕ ರಾಜ್ಯ ಪತ್ರದಲ್ಲಿ 11(1) ಅಧಿಸೂಚನೆ ಹೊರಡಿಸಲಾಗಿರುತ್ತದೆ. ಮುಂದುವರೆದು ಸದರಿ ಜಮೀನುಗಳ ಜಂಟಿ ಅಳತೆಯು ಪೂರ್ಣಗೊಂಡಿದ್ದು, 19(1) ಅಧಿಸೂಚನೆಯನ್ನು ಹೊರಡಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಪ್ರಗತಿ ವರದಿಯಲ್ಲಿ ತಿಳಿಸಿಲಾಗಿದೆ.

ಕಾಮಗಾರಿ ಪರಿಶೀಲನೆ ನಂತರ ಮಾಧ್ಯಮಗಳ ಜತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದಲ್ಲೇ ವಿಶೇಷವಾದ ಯೋಜನೆ ಇದಾಗಿದೆ. ಸದರಿ ಯೋಜನೆಯ ಬಹುತೇಕ ಕಾಮಾಗಾರಿ ಮುಗಿದಿದ್ದು, ಡಿಸೆಂಬರ್‍ಗೆ ಲೋಕಾರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.

26 ಕಿ.ಮೀ. ನಾಲೆಯಲ್ಲಿ ಒಟ್ಟು ಸುರಂಗದ ಉದ್ದ 12 ಕಿ.ಮೀ. ಸುರಂಗ ಬರುತ್ತದೆ. ಸುರಂಗ ಕೊರೆಯುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕೇವಲ ಅರ್ಧ ಕಿ.ಮೀ. ಕಾಮಗಾರಿ ಉಳಿದಿದೆ. ಲೈನಿಂಗ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.

ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ ಒಂದೂವರೆ ಎಕರೆ ಸ್ವಾಧೀನ ಸಮಸ್ಯೆ ಇತ್ತು. ಇದೀಗ ಭೂಮಿಯನ್ನು ನೀಡಲು ರೈತರು ಒಪ್ಪಿದ್ದಾರೆ. ಆ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದ್ದು, ಸೂಕ್ತ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.

ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಸಿ.ಪಿ.ಯೋಗೇಶ್ವರ್, ಕೆ.ಎಂ.ಉದಯ, ವಿಧಾನಪರಿಷತ್ ಸದಸ್ಯರಾದ ಎಸ್.ರವಿ, ಸುಧಾಮ್ ದಾಸ್, ಮಾಜಿ ಶಾಸಕ ಅಶ್ವಥ್, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇತರೆ ಗಣ್ಯರು ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X