Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು | ಅಯೋಧ್ಯೆಯ ರಾಮಲಲ್ಲಾ ಮೂರ್ತಿಗೆ...

ಮೈಸೂರು | ಅಯೋಧ್ಯೆಯ ರಾಮಲಲ್ಲಾ ಮೂರ್ತಿಗೆ ಕಲ್ಲು ಸಿಕ್ಕಿದ ಜಮೀನಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಸಂಸ ಆಕ್ಷೇಪ

ಅಂಬೇಡ್ಕರ್, ಬೌದ್ಧ ನಳಂದ ವಿವಿ ಸ್ಥಾಪನೆಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ24 May 2025 12:21 AM IST
share
ಮೈಸೂರು | ಅಯೋಧ್ಯೆಯ ರಾಮಲಲ್ಲಾ ಮೂರ್ತಿಗೆ ಕಲ್ಲು ಸಿಕ್ಕಿದ ಜಮೀನಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಸಂಸ ಆಕ್ಷೇಪ

ಮೈಸೂರು : ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಿರುವ ರಾಮಲಲ್ಲಾ ವಿಗ್ರಹದ ಶಿಲೆ ಮೈಸೂರಿನ ಹಾರೋಹಳ್ಳಿ ಗ್ರಾಮದ ದಲಿತ ಸಮುದಾಯದ ರಾಮದಾಸ್ ಎಂಬವರ ಜಮೀನಿನಲ್ಲಿ ಸಿಕ್ಕಿರುವ ಹಿನ್ನೆಲೆಯಲ್ಲಿ ಈ ಸ್ಥಳದಲ್ಲಿ ದಕ್ಷಿಣ ಅಯೋಧ್ಯೆ ರಾಮಮಂದಿರ ಕಟ್ಟಬೇಕು ಎಂದು ಮುಂದಾಗಿದ್ದವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಸಂಘರ್ಷ ಸಮಿತಿ ಮುಖಂಡರು ತಡೆಯೊಡ್ಡಿದ್ದು, ಪಕ್ಕದಲ್ಲೇ ಅಂಬೇಡ್ಕರ್, ಬೌದ್ಧ ನಳಂದ ವಿವಿ ಸ್ಥಾಪನೆ ಮಾಡಲು ಶಪಥ ಮಾಡಿದ್ದಾರೆ.

ಮೈಸೂರು ಜಿಲ್ಲೆ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದ ರಾಮದಾಸ್ ಎಂಬವರ ಜಮೀನಿನಲ್ಲಿ ಅಯೋಧ್ಯೆ ರಾಮದಿರದಲ್ಲಿ ಪ್ರತಿಷ್ಠಾಪನೆ ಮಾಡಿರುವ ರಾಮಲಲ್ಲಾ ವಿಗ್ರಹದ ಕಲ್ಲು ಸಿಕ್ಕಿತ್ತು. ಈ ವೇಳೆ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅಂದಿನ ಸಂಸದ ಪ್ರತಾಪ್ ಸಿಂಹ ಈ ಜಾಗದಲ್ಲಿ ರಾಮಮಂದಿರ ಕಟ್ಟುವುದಾಗಿ ಘೋಷಣೆ ಮಾಡಿದ್ದರು. ಈ ವೇಳೆ ಜಮೀನು ಮಾಲೀಕ ರಾಮದಾಸ್ ಅವರ ಮನವೊಲಿಸಿ ರಾಮಮಂದಿರ ಕಟ್ಟಲು ಜಮೀನು ನೀಡುವಂತೆ ಮನವಿ ಮಾಡಿದ್ದರು.

ಇದೀಗ ಶಾಸಕ ಜಿ.ಟಿ.ದೇವೇಗೌಡ ಮತ್ತು ಉಡುಪಿ ಪೇಜಾವರ ಮಠದ ಪ್ರಸನ್ನಾನಂದಾತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಕೆಲವು ಹಿಂದೂ ಸಂಘಟನೆಗಳವರು ಶುಕ್ರವಾರ ರಾಮಮಂದಿರ ಕಟ್ಟಲು ಭೂಮಿ ಪೂಜೆ ಆಯೋಜನೆ ಮಾಡಿದ್ದರು. ವಿಷಯ ತಿಳಿದ ದಸಂಸ ಮುಖಂಡರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಮಮಂದಿರ ಕಟ್ಟುವುದು ಬೇಡ ಎಂದು ಹೇಳಿಕೆ ನೀಡಿದ್ದರು.

ಇದರಿಂದ ಗೊಂದಲಕ್ಕೊಳಗಾದ ರಾಮ ಮಂದಿರ ಆಚರಣಾ ಸಮಿತಿಯವರು ತಮ್ಮ ನಿಗದಿತ ಕಾರ್ಯಕ್ರಮವನ್ನು ಮುಂದೂಡಿದ್ದಾರೆ.

ಅಂಬೇಡ್ಕರ್, ಬೌದ್ಧ ನಳಂದ ವಿವಿ ಸ್ಥಾಪನೆಗೆ ಸಿದ್ಧತೆ: ಹಾರೋಹಳ್ಳಿ ಗ್ರಾಮದ ದಲಿತ ಸಮುದಾಯದ ರಾಮದಾಸ್ ಅವರ ಜಮೀನು ಸೇರಿದಂತೆ ಪಕ್ಕದ ಜಮೀನಿನಲ್ಲಿ ಅಂಬೇಡ್ಕರ್, ಬೌದ್ಧ ನಳಂದ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಲು ದಲಿತ ಸಂಘಟನೆಗಳ ಮುಖಂಡರು ಸಿದ್ಧತೆ ನಡೆಸಿದ್ದು, ಅಂಬೇಡ್ಕರ್ ಮತ್ತು ಬೌದ್ಧ ವಿಗ್ರಹ ತಂದು ಪೂಜೆ ಸಲ್ಲಿಸಿದರು.

ದಲಿತ ಮುಖಂಡ ಹಾಗೂ ಮಾಜಿ ಮೇಯರ್ ಪುರುಷೋತ್ತಮ್ ನೇತೃತ್ವದಲ್ಲಿ ಹಾರೋಹಳ್ಳಿ ಗ್ರಾಮದ ರಾಮಲಲ್ಲಾ ವಿಗ್ರಹ ಸಿಕ್ಕಿರುವ ಜಮೀನಿನ ಪಕ್ಕದ ರಾಮದಾಸ್ ಅವರ ಸಹೋದರರ ಜಮೀನಿನಲ್ಲಿ ಜಮಾಯಿಸಿದ ಗ್ರಾಮಸ್ಥರು ಮತ್ತು ಅಕ್ಕಪಕ್ಕದ ಗ್ರಾಮದವರು ಸೇರಿದಂತೆ 500 ಕ್ಕೂ ಹೆಚ್ಚು ದಲಿತರು ರಾಮಮಂದಿರ ಕಟ್ಟುವುದಕ್ಕೆ ವಿರೋಧ ವ್ಯಕ್ತಪಡಿಸಿ, ರಾಮಮಂದಿರ ನಿರ್ಮಾಣ ಮಾಡಲು ಮುಂದಾದವರಿಗೆ ಧಿಕ್ಕಾರ ಕೂಗಿದರು.

ಈ ಸಂದರ್ಭದಲ್ಲಿತಾಪಂ ಮಾಜಿ ಸದಸ್ಯ ಹಾರೋಹಳ್ಳಿ ಸುರೇಶ್, ಗ್ರಾಪಂ ಸದಸ್ಯ ಹಾರೋಹಳ್ಳಿ ನಟರಾಜ್, ದಸಂಸ ಮುಖಂಡರಾದ ಶಂಭುಲಿಂಗಸ್ವಾಮಿ, ಚೋರನಹಳ್ಳಿ ಶಿವಣ್ಣ, ಎಡದೊರೆ ಮಹದೇವಯ್ಯ, ಕಲ್ಲಹಳ್ಳಿ ಕುಮಾರ್, ಚಲುವರಾಜು, ದೇವರಾಜು, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್, ವಕೀಲರಾದ ತಿಮ್ಮಯ್ಯ, ಪುಟ್ಟರಸ, ದೂರ ಪುಟ್ಟಸ್ವಾಮಿ, ಅರಸಿನಕೆರೆ ಶಿವರಾಜು, ಮಾವಿನಹಳ್ಳಿ ನಾಗೇಶ್, ಪ್ರಸನ್ನ ತಳೂರು ಮತ್ತಿತರರು ಇದ್ದರು.

ಮನುಸ್ಮತಿಯನ್ನು ಪ್ರೋತ್ಸಾಹಿಸುವ ಉಡುಪಿ ಮಠದ ಸ್ವಾಮೀಜಿ, ದಲಿತರ ಜಮೀನನಲ್ಲಿ ರಾಮಲಲ್ಲ ಮೂರ್ತಿ ಕಲ್ಲು ಸಿಕ್ಕಿತು ಎಂದು ರಾಮಮಂದಿರ ಕಟ್ಟುತ್ತೇವೆ ಎನ್ನುತ್ತಿದ್ದಾರೆ. ದಲಿತರ ಮೇಲೆ ನಿಜವಾದ ಕಾಳಜಿ ಇದ್ದರೆ ಅಯೋಧ್ಯೆ ರಾಮಮಂದಿರಕ್ಕೆ ರಾಮದಾಸ್ ಅವರನ್ನು ಟ್ರಸ್ಟಿ ಮಾಡಲಿ. ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಮೂರ್ತಿಗೆ ಪೂಜೆ ಮಾಡಿಸಲಿ ಅಥವಾ ಉಡುಪಿ ಮಠದ ಪೀಠಾಪತಿ ಮಾಡಲಿ.

- ಕಲ್ಲಹಳ್ಳಿ ಕುಮಾರ್, ದಸಂಸ ಮುಖಂಡ

ನಾವು ಭೀಮ ವಂಶಸ್ಥರು. ನಮಗೆ ರಾಮ ಏಕೆ ಬೇಕು? ವೈಜ್ಞಾನಿಕವಾಗಿ ಇಲ್ಲಿ ಶಿಕ್ಷಣ ನೀಡಬೇಕು. ಸಂವಿಧಾನ ಬದಲಾಯಿಸುತ್ತೇವೆ ಎಂದು ಹೊರಟಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ದಲಿತರನ್ನು ಮುಂದೆ ಬಿಟ್ಟುಕೊಂಡು ದಕ್ಷಿಣದಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಸಂಚನ್ನು ರೂಪಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ.

-ಪುರುಷೋತ್ತಮ್, ಮಾಜಿ ಮೇಯರ್

ದಕ್ಷಿಣ ಭಾಗದಲ್ಲಿ ಅದರಲ್ಲೂ ಮೈಸೂರು ಭಾಗದಲ್ಲಿ ಹೆಚ್ಚು ವೈಚಾರಿಕತೆ ಇದ್ದು, ಇಲ್ಲಿನ ಜನ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸ, ಪೆರಿಯಾರ್ ಸೇರಿದಂತೆ ಅನೇಕ ಮಹನೀಯರ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದಾರೆ. ಇಂತಹ ವೈಚಾರಿಕತೆಯನ್ನು ನಾಶಗೊಳಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರೆಸ್ಸೆಸ್ ಸಂಚು ರೂಪಿಸಿ ದಕ್ಷಿಣದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುತ್ತೇವೆ ಎಂದು ಇಲ್ಲಿನ ಸಾಮರಸ್ಯವನ್ನು ಹಾಳು ಮಾಡಲು ಹೊರಟಿದ್ದಾರೆ.

- ಚೋರನಹಳ್ಳಿ ಶಿವಣ್ಣ, ದಸಂಸ ಜಿಲ್ಲಾ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X