Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ...

ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ದಂಪತಿ

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ4 Nov 2024 2:23 PM IST
share
ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ದಂಪತಿ

ಮಂಡ್ಯ: ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಮಾಚಳ್ಳಿ ಗ್ರಾಮವು ಮದ್ದೂರು-ತುಮಕೂರು ಹೆದ್ದಾರಿಯ ಕೆಸ್ತೂರು ಬಳಿಯಿಂದ ಬಲಗಡೆಗೆ ಕೆಲವೇ ಕಿ.ಮೀ. ದೂರದಲ್ಲಿದೆ. ಈ ಗ್ರಾಮದ ಹಿರಿಯ ದಂಪತಿ ರಾಧಾ-ವೆಂಕಟೇಶ್ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ಹೊರಬಂದು ಇತ್ತೀಚೆಗೆ ಲಾಭದಾಯಕವಾಗಿರುವ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಯಶಸ್ವಿಯಾಗಿ ಸುತ್ತಮುತ್ತಲ ಗ್ರಾಮಗಳ ರೈತರಿಗೆ ಮಾದರಿಯಾಗಿದ್ದಾರೆ.

ಆರು ವರ್ಷಗಳ ಹಿಂದೆ ಇವರಿಗೆ ಸೇರಿದ ಜಮೀನು ನೀಲಗಿರಿ ಮರಗಳ ತೋಪಾಗಿತ್ತು. ಆ ಜಮೀನಿನ ಕೆಲವು ಭಾಗದಲ್ಲಿ ಮಳೆಗಾಲದಲ್ಲಿ ರಾಗಿ, ನೆಲಗಡಲೆಯಂತಹ ಬೆಳೆಗಳನ್ನು ಬೆಳೆದುಕೊಂಡು ಜೀವನ ಸಾಗಿಸುತ್ತಿದ್ದರು. ನೀಲಗಿರಿ ತೋಪನ್ನು ಕೃಷಿ ಭೂಮಿಯಾಗಿ ಪರಿವರ್ತಿಸಲು ತೀರ್ಮಾನಿಸಿದ ದಂಪತಿ, ಮರಗಳನ್ನು ಮಾರಾಟ ಮಾಡಿ ಭೂಮಿಯನ್ನು ಕೃಷಿಗಾಗಿ ಹದಗೊಳಿಸಿದರು. ರೇಷ್ಮೆ ಬೇಸಾಯ ಕೈಗೊಂಡರು. ನಂತರ ಕೃಷಿ ಇಲಾಖೆಯ ನೆರವು ಪಡೆದು ಭೂಮಿಯಲ್ಲಿ ವಿವಿಧ ರೀತಿಯ ಬೆಳೆಗಳನ್ನು ಬೆಳೆದಿದ್ದಾರೆ. ಈ ಸಮಗ್ರ ಕೃಷಿಯು ದಂಪತಿಗೆ ಲಾಭ ತಂದುಕೊಡುತ್ತಿದೆ.

ಸುಮಾರು 8 ಎಕರೆ ಪೈಕಿ ಮೂರೂವರೆ ಎಕರೆಯಲ್ಲಿ ರೇಷ್ಮೆ, ಎರಡು ಎಕರೆಯಲ್ಲಿ ರಾಗಿ ಬೆಳೆಯುತ್ತಾರೆ. ಉಳಿದ ಭೂಮಿಯಲ್ಲಿ ಮೆಣಸು, ಹಲಸು, ಬಾಳೆ, ಒಂದೊಂದು ಡ್ರ್ಯಾಗನ್, ಸೇಬು, ಚಕ್ಕೋತ, ಎರಡು ಮೂಸಂಬಿ, 12 ಸಪೋಟ, 10 ಸೀಬೆ, ಶ್ರೀಗಂಧದ ಮರ, 5 ಪರಂಗಿ ಮರಗಳನ್ನು ಬೆಳೆಸಿದ್ದಾರೆ. ಜಮೀನಿನ ಸುತ್ತ, ಬದುಗಳ ಮೇಲೆ ಮತ್ತು ಬೆಳೆಗಳ ಮಧ್ಯೆ 600 ತೆಂಗಿನ ಮರಗಳು ಕೈತುಂಬಾ ಫಲ ಕೊಡುತ್ತಿವೆ. ಇದಲ್ಲದೆ ಮನೆಗೆ ಬೇಕಾದ ಸೊಪ್ಪು, ತರಕಾರಿ ಬೆಳೆದುಕೊಳ್ಳುತ್ತಿದ್ದಾರೆ. ನಾಟಿ ಕೋಳಿ, ಬಾತುಕೋಳಿ, ಎಮ್ಮೆ, ಒಂದು ಜೊತೆ ಹಳ್ಳಿಕಾರ್ ಎತ್ತುಗಳನ್ನು ಸಾಕಿದ್ದಾರೆ. ಈ ಎತ್ತುಗಳಿಂದ ಜಮೀನಿನ ಉಳುಮೆ ಮಾಡುತ್ತಾರೆ. ಹೆಚ್ಚಾಗಿ ಕೃಷಿಗೆ ಕೊಟ್ಟಿಗೆ ಗೊಬ್ಬರ ಬಳಸುತ್ತಿರುವುದರಿಂದ ಉತ್ತಮ ಫಸಲು ಬರುತ್ತಿದೆ. ಐದು ಕೊಳವೆ ಬಾವಿಗಳನ್ನು ಕೊರೆಸಿದ್ದು, ಕೃಷಿಗೆ ನೀರಿನ ಸಮಸ್ಯೆ ಇಲ್ಲ.

ಪುತ್ರ, ಪುತ್ರಿ, ಅಳಿಯ ಸಾಥ್

ಈ ದಂಪತಿಯ ಕೃಷಿಗೆ ಪುತ್ರ ಎಂ.ವಿ. ಭರತ್‌ಗೌಡ, ಪುತ್ರಿ ಶ್ವೇತಾ, ಅಳಿಯ ಶಿಕ್ಷಕ ನಾಗರಾಜು ಕೂಡ ಸಾಥ್ ನೀಡುತ್ತಿದ್ದಾರೆ. ಅಪ್ಪ ಅಮ್ಮನ ಕೃಷಿಗೆ ನೆರವಾಗುವುದರೊಂದಿಗೆ ಸಮೀಪದ ಕೆಸ್ತೂರು ಗ್ರಾಮದಲ್ಲಿ ಆಟೊ ಮೊಬೈಲ್ ಅಂಗಡಿಯನ್ನು ಇಟ್ಟುಕೊಂಡು ಭರತ್‌ಗೌಡ ಸ್ವಂತ ಉದ್ಯೋಗ ಕಂಡುಕೊಂಡಿದ್ದಾರೆ. ‘ನನ್ನ ಅಪ್ಪ ಅಮ್ಮ ಸಂಪ್ರದಾಯದಂತೆ ಕೃಷಿಯನ್ನೇ ಕಾಯಕ ಮಾಡಿಕೊಂಡು ಬರುತ್ತಿದ್ದು, ಅವರಿಗೆ ನೆರವಾಗುತ್ತಿದ್ದೇನೆ. ಮತ್ತಷ್ಟು ವಿಭಿನ್ನ ಬೆಳೆಗಳನ್ನು ಬೆಳೆಯುವ ಚಿಂತನೆ ಇದೆ’ ಎನ್ನುತ್ತಾರೆ ಭರತ್‌ಗೌಡ.

ನಮಗೆ ಕೃಷಿಯೇ ಬದುಕು. ಚಿಕ್ಕಂದಿನಿಂದಲೂ ಬೇಸಾಯ ಮಾಡಿಕೊಂಡು ಬರುತ್ತಿದ್ದೇನೆ. ಶ್ರಮಪಟ್ಟು ದುಡಿದರೆ ಕೃಷಿ ಕೈಬಿಡುವುದಿಲ್ಲ. ಈಗ ವಿವಿಧ ಬೆಳೆಗಳನ್ನು ಬೆಳೆಯುತ್ತಿರುವುದರಿಂದ ಲಾಭ ಬರುತ್ತಿದೆ. ಕೃಷಿ ಯಿಂದ ನೆಮ್ಮದಿ ಮತ್ತು ಆರೋಗ್ಯ ಭಾಗ್ಯ ಸಿಕ್ಕಿದೆ.

-ವೆಂಕಟೇಶ್, ಸಮಗ್ರ ಕೃಷಿಕ

ಪ್ರತೀದಿನ ಜಮೀನಿಗೆ ಬಂದು ಕೆಲಸ ಮಾಡುವುದರಿಂದ ಒಂದು ರೀತಿಯ ಆತ್ಮತೃಪ್ತಿ ಜತೆಗೆ ನೆಮ್ಮದಿ ಸಿಗುತ್ತದೆ. ಕೂಲಿ ಆಳುಗಳನ್ನು ಅವಲಂಬಿಸದೆ ನಾನು ಹಾಗೂ ನನ್ನ ಪತಿ ಸೇರಿ ಬೇಸಾಯ ಮಾಡುತ್ತಿದ್ದು, ನಮಗೆ ಇದರಲ್ಲಿ ಖುಷಿ ಇದೆ.

-ರಾಧಾ, ವೆಂಕಟೇಶ್ ಪತ್ನಿ

share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X