Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಒಡೆಯರ್ ಪಾಳ್ಯ ಬಳಿ ರಾಜ್ಯದಲ್ಲೇ ಅತೀ...

ಒಡೆಯರ್ ಪಾಳ್ಯ ಬಳಿ ರಾಜ್ಯದಲ್ಲೇ ಅತೀ ಎತ್ತರದ ಬುದ್ಧನ ಪ್ರತಿಮೆ ನಿರ್ಮಾಣ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್11 Nov 2024 11:11 AM IST
share
ಒಡೆಯರ್ ಪಾಳ್ಯ ಬಳಿ ರಾಜ್ಯದಲ್ಲೇ ಅತೀ ಎತ್ತರದ ಬುದ್ಧನ ಪ್ರತಿಮೆ ನಿರ್ಮಾಣ

ಚಾಮರಾಜನಗರ: ಸುತ್ತಲೂ ಹಚ್ಚ ಹಸಿರಿನಿಂದ ಕೂಡಿದ ಅರಣ್ಯ ಸಂಪತ್ತು, ಎರಡು ಹುಲಿ ಸಂರಕ್ಷಿತ ಪ್ರದೇಶದ ನಡುವೆ ಇರುವ ಪ್ರಾಕೃತಿಕ ನೈಸರ್ಗಿಕ ಸಂಪತ್ಬರಿತ ಪ್ರದೇಶದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ 113 ಅಡಿ ಎತ್ತರದ ಬೃಹತ್ ಬುದ್ಧನ ವಿಗ್ರಹ ಪ್ರತಿಮೆ ನಿರ್ಮಾಣವಾಗುತ್ತಿದೆ.

ಕರ್ನಾಟಕ, ತಮಿಳುನಾಡು ನಡುವೆ ಇರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪವಿರುವ ಟಿಬೆಟಿಯನ್ನರ ನಿರಾಶ್ರಿತರ ಶಿಬಿರ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ಹಾಗೂ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇದ್ದು, ಉಭಯ ರಾಜ್ಯಗಳ ಬೆಸೆಯುವ ಅರಣ್ಯವಾಗಿದೆ.

ಚಾಮರಾಜನಗರ ಜಿಲ್ಲೆಯ ಒಡೆಯರ್ ಪಾಳ್ಯದ ಟಿಬೆಟಿಯನ್ ಶಿಬಿರದಲ್ಲಿ ಬುದ್ಧ ಮಂದಿರದ ಬಳಿ ಟಿಬೆಟಿಯನ್ ಸಮುದಾಯದವರೇ 113 ಅಡಿ ಎತ್ತರದ ಬೃಹತ್ ಎತ್ತರದ ಹಸನ್ಮುಖಿ ಧ್ಯಾನಸ್ಥ ಬುದ್ಧನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದು, ಕಾಮಗಾರಿ ಬರದಿಂದ ಸಾಗುತ್ತಿದೆ.

ಪ್ರತಿಮೆ ಪ್ರತಿಷ್ಠಾಪಿಸುವ ಸಲುವಾಗಿ ಈಗಾಗಲೇ ಕಮಲದ ಹೂವಿನ ಆಕಾರದ ವೇದಿಕೆ ನಿರ್ಮಾಣ ಮಾಡಲಾಗಿದೆ. ಪ್ರಾಥಮಿಕ ಹಂತದ ಕಾಮಗಾರಿ ಮುಗಿಯುತ್ತಿದ್ದಂತೆ ಪಕ್ಕದ ಭೂತಾನ್ ದೇಶದಲ್ಲಿ ತಯಾರಿಸಲಾಗಿರುವ ಹಸನ್ಮುಖಿ ಧ್ಯಾನಸ್ಥ ಬುದ್ಧನ ಪ್ರತಿಮೆಯನ್ನು ತಂದು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ತಾಮ್ರದಿಂದ ಪ್ರತಿಮೆಯನ್ನು ತಯಾರಿಸಿ ಬಳಿಕ ಚಿನ್ನದ ಬಣ್ಣದ ಲೇಪನ ಮಾಡಲಾಗುತ್ತದೆ. ಪ್ರತಿಮೆ ನಿರ್ಮಾಣಕ್ಕೆ ಅಂದಾಜು 6 ಕೋಟಿ ರೂ.ವೆಚ್ಚವಾಗಲಿದೆ ಎನ್ನಲಾಗುತ್ತಿದೆ.

ಒಡೆಯರಪಾಳ್ಯ ಬಳಿ ಇರುವ ನಿರಾಶ್ರಿತರ ಶಿಬಿರವು ಮೈಸೂರು ಜಿಲ್ಲೆಯ ಬೈಲುಗುಪ್ಪೆ, ಮುಂಡಗೋಡು ಮಾದರಿಯಲ್ಲಿ ಪ್ರವಾಸಿಸ್ಥಳವಾಗಿ ರೂಪುಗೊಂಡಿದೆ. ಚಾಮರಾಜನಗರ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಜನರನ್ನೂ ಇದು ಆಕರ್ಷಿಸುತ್ತಿದೆ. ಇಲ್ಲಿರುವ ಬುದ್ಧ ಮಂದಿರಗಳಲ್ಲಿ ಬಾಲ ಬೌದ್ಧ ಬಿಕ್ಕುಗಳು ಗಮನ ಸೆಳೆಯುತ್ತಾರೆ. ಒಡೆಯರ ಪಾಳ್ಯದಲ್ಲಿ ಐದು ಬೌದ್ಧ ದೇವಾಲಯಗಳಿದ್ದು ಪ್ರತಿ ಮಂದಿರದಲ್ಲೂ ಬುದ್ಧನ ಮೂರ್ತಿಗಳಿವೆ.

ವಾರಾಂತ್ಯದಲ್ಲಿ ಕುಟುಂಬ ಸಮೇತ ಭೇಟಿ ನೀಡುವ ಪ್ರವಾಸಿಗರು ದಿನವಿಡಿ ಶಿಬಿರದಲ್ಲಿರುವ ಬುದ್ಧ ಮಂದಿರಗಳಿಗೆ ಭೇಟಿ ನೀಡುತ್ತಾರೆ. ಒಂದು ದಿನದ ಪ್ರವಾಸಕ್ಕೆ ಇದು ಯೋಗ್ಯವಾದ ಸ್ಥಳ ಎನಿಸಿದೆ. ದಿನದಿಂದ ದಿನಕ್ಕೆ ಇಲ್ಲಿಗೆ ಆಗಮಿಸುತ್ತಿರುವವರ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ಪ್ರವಾಸಿ ತಾಣವಾಗಿ ಹೊರಹೊಮ್ಮುತ್ತಿರುವ ಈ ಶಿಬಿರದಲ್ಲಿ ಬುದ್ಧನ ಮೂರ್ತಿ ಪ್ರತಿಷ್ಠಾಪನೆಯಾದರೆ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ. ರಾಜ್ಯದಲ್ಲೇ ಅತೀ ಎತ್ತರದ ಬುದ್ಧನ ಪ್ರತಿಮೆ ಹೊಂದಿರುವ ಸ್ಥಳ ಎಂಬ ಹೆಗ್ಗಳಿಕೆಗೂ ಒಡೆಯರಪಾಳ್ಯದ ಶಿಬಿರ ಪಾತ್ರವಾಗಲಿದೆ.

ಟಿಬೆಟ್‌ನಿಂದ ಕಳೆದ ಐದು ದಶಕಗಳ ಹಿಂದೆ ನಿರಾಶ್ರಿತರಾಗಿ ಭಾರತಕ್ಕೆ ಬಂದ ಟಿಬೆಟಿಯನ್ನರಿಗೆ ಕರ್ನಾಟಕದ ರಾಜ್ಯದ ಮುಂಡಗೋಡು, ಬೈಲುಗುಪ್ಪೆ ಹಾಗೂ ಒಡೆಯರಪಾಳ್ಯ ಬಳಿ ಸ್ಥಳ ನೀಡಿ ಶಿಬಿರ ನಿರ್ಮಿಸಿಕೊಡಲಾಯಿತು. ಅಂದಿನಿಂದ ಟಿಬೆಟಿಯನ್ ಸಂಸ್ಕೃತಿಯ ಜತೆಗೆ ಆಯಾ ಜಿಲ್ಲೆಗಳ ಆಚಾರ ವಿಚಾರಗಳಲ್ಲೂ ಭಾಗಿಯಾಗುವ ಮೂಲಕ ಟಿಬೆಟಿಯನ್ನರು ಸ್ಥಳೀಯರೊಂದಿಗೆ ಸೌರ್ಹಾರ್ದವಾಗಿ ಬದುಕು ಸಾಗಿಸುತ್ತಿದ್ದಾರೆ.

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X