Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪೀಣ್ಯ ಕೊಳೆಗೇರಿ ನೆಲಸಮ: 60 ಕುಟುಂಬಗಳು...

ಪೀಣ್ಯ ಕೊಳೆಗೇರಿ ನೆಲಸಮ: 60 ಕುಟುಂಬಗಳು ಬೀದಿಪಾಲು!

ಇಬ್ರಾಹಿಂ ಖಲೀಲ್ ಬನ್ನೂರುಇಬ್ರಾಹಿಂ ಖಲೀಲ್ ಬನ್ನೂರು23 Jan 2025 11:52 AM IST
share
ಪೀಣ್ಯ ಕೊಳೆಗೇರಿ ನೆಲಸಮ: 60 ಕುಟುಂಬಗಳು ಬೀದಿಪಾಲು!

ಬೆಂಗಳೂರು: ಪೀಣ್ಯದ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಬಂದಿದ್ದ 60 ಕುಟುಂಬಗಳು ಗುಡಿಸಲು ಹಾಕಿಕೊಂಡು ನೆಲೆಸಿದ್ದವು. ಎಲ್ಲರೂ ದಿನಗೂಲಿ ಕೆಲಸ ಮಾಡುತ್ತಿದ್ದರು. ಏಕಾಏಕಿ ಸ್ಥಳೀಯ ಬಿಜೆಪಿ ಶಾಸಕ ಮುನಿರತ್ನ ನೇತೃತ್ವದಲ್ಲಿ ಸ್ಥಳಕ್ಕೆ ಬಂದಿದ್ದ ತಂಡವು ಜೆಸಿಬಿ ಯಂತ್ರ ಬಳಸಿ ಗುಡಿಸಲುಗಳನ್ನು ನೆಲಸಮಗೊಳಿಸಿದ್ದು, 300ಕ್ಕೂ ಅಧಿಕ ಮಂದಿ ಬೀದಿಗೆ ಬಿದ್ದಿದ್ದಾರೆ. ಗುಡಿಸಲುಗಳಲ್ಲಿ ಇಡಲಾಗಿದ್ದ ಸಾವಿರಾರು ರೂ. ನಗದು ಹಾಗೂ ಚಿನ್ನಾಭರಣ ಮಣ್ಣುಪಾಲಾಗಿದೆ. ಇಲ್ಲಿ ವಾಸಿಸುವ ಜನರ ಬದುಕು ಅತಂತ್ರವಾಗಿದೆ. ಈ ಕುರಿತು ಕೊಳೆಗೇರಿಯ ನೊಂದ ಸಂತ್ರಸ್ತರು ಪತ್ರಿಕೆಯೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.

20 ವರ್ಷಗಳಿಂದ ಇಲ್ಲೇ ಇದ್ದೇವೆ

ನಾವು ಪಾಕಿಸ್ತಾನ, ಬಾಂಗ್ಲಾ ದೇಶದಿಂದ ಓಡಿ ಬಂದವರಲ್ಲ, ನಾವು ಇದೇ ರಾಜ್ಯದ ನಾನಾ ಜಿಲ್ಲೆಯವರು. 20 ವರ್ಷಗಳಿಂದ ಈ ಸ್ಲಂನಲ್ಲಿ ಹೊಟ್ಟೆಪಾಡಿಗಾಗಿ ಬಂದು ಜೀವನ ನಡೆಸುತ್ತಿದ್ದೇವೆ. ಯಾವುದೇ ಸೂಚನೆ ನೀಡದೇ ನಮ್ಮ ಎಲ್ಲಾ ಗುಡಿಸಲುಗಳನ್ನು ಧ್ವಂಸ ಮಾಡಿದ್ದಾರೆ. ತಲೆಯ ಮೇಲೆ ಸೂರಿಲ್ಲದೆ, ನೀರು, ಆಹಾರವಿಲ್ಲದೆ ನಮ್ಮನ್ನು ಬೀದಿಪಾಲು ಮಾಡಲಾಗಿದೆ ಎಂದು ಕೊಳೆಗೇರಿ ನಿವಾಸಿಗಳು ನೋವು ವ್ಯಕ್ತಪಡಿಸಿದ್ದಾರೆ.

ದುಡಿದ 60 ಸಾವಿರ ರೂ. ಮಣ್ಣುಪಾಲು!

ಇಲ್ಲಿರುವವರು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ, ನಾನು ದುಡಿದು ಕೂಡಿಟ್ಟು ಕೊಂಡಿದ್ದ ಸುಮಾರು 60ರಿಂದ 70 ಸಾವಿರ ಗಳಷ್ಟು ಹಣ ಮತ್ತು 5 ಗ್ರಾಂ ನಷ್ಟು ಚಿನ್ನ ಗುಡಿಸಲು ನೆಲಸಮ ಮಾಡುವ ಹೊತ್ತಲ್ಲಿ ಮಣ್ಣುಪಾಲಾಗಿದೆ. ನಾವೆಲ್ಲರೂ ಬದುಕುವ ಆಸೆಯನ್ನೇ ಕಳೆದುಕೊಂಡಿದ್ದೇವೆ ಎಂದು ನೊಂದ ಲಕ್ಷ್ಮಣ ಹೇಳುತ್ತಾರೆ.

ನಾವೂ ಹಿಂದೂಗಳೇ!

ಜೆಸಿಬಿಯಲ್ಲಿ ನಮ್ಮ ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ. ಇಲ್ಲಿರುವವರೆಲ್ಲರೂ ಶಾಸಕ ಮುನಿರತ್ನ ಅವರಿಗೆ ಮತ ಹಾಕಿದ್ದಾರೆ. ‘ನಾವೂ ಹಿಂದೂಗಳೇ, ಬಿಜೆಪಿಯ ಶಾಸಕನೇ ನಮಗೆ ಈ ರೀತಿ ತೊಂದರೆ ಕೊಟ್ಟಿರುವುದು ಹೇಗೆ ಸರಿ? ಇದೇನಾ ಸಂಸ್ಕೃತಿ? ನಮಗೆ ಯಾವುದೇ ನೋಟಿಸ್ ಕೊಡದೇ ಖುದ್ದಾಗಿ ಜ.20ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಶಾಸಕರೇ ಬಂದು ನಮ್ಮ ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ. ನಮಗೆ ನ್ಯಾಯ ಒದಗಿಸಬೇಕು ಎಂದು ಮಹಿಳೆಯೊಬ್ಬರು ಆಗ್ರಹಿಸಿದ್ದಾರೆ.

ಗುಡಿಸಲಲ್ಲೇ ಬೆಳೆದ ಶಾಸಕ!

ಗಡಿಪಾರಾಗಿ ಚಿತ್ತೂರಿನಿಂದ ಬಂದ ಮುನಿರತ್ನ, ಅಂದು ಇಲ್ಲೇ ಗುಡಿಸಲಲ್ಲಿ ವಾಸವಾಗಿ ಬೆಳೆದವರು. ಈಗ ಗೂಂಡಾಗಿರಿ ಮಾಡುತ್ತಿದ್ದಾರೆ. ತಾನು ಬೆಳೆದ ಗುಡಿಸಲುಗಳ ಮೇಲೆಯೇ ಅವರು ಬುಲ್ಡೋಜರ್ ಹರಿಸಿದ್ದಾರೆ. ಈಗ ಬಡವರ ಮೇಲೆ ಅಧಿಕಾರ, ದರ್ಪ ತೋರಿಸುತ್ತಿದ್ದಾರೆ ಎಂದು ಸಂತ್ರಸ್ತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನಕ್ಕೆ 200 ರೂ. ಕೂಲಿ

ಈ ಸ್ಲಂನಲ್ಲಿ ಇರುವವರು ಕೂಲಿ ಕಾರ್ಮಿಕರು. ಹಲವರು ಗಂಡಸರು 200 ರೂ.ಗೆ ಕೂಲಿ ಕೆಲಸ ಮಾಡು ವವರು. ಮಹಿಳೆಯರಲ್ಲಿ 100 ರೂ. ಪಡೆಯುವವರೂ ಇದ್ದಾರೆ. ಈ ಕಾಲದಲ್ಲಿ ಈ ಹಣ ಈ ದೊಡ್ಡ ನಗರದಲ್ಲಿ ಸಾಕಾಗುತ್ತಾ?, ಅದಕ್ಕೆ ನಾವು ಶಾಲೆಯ ರಜಾ ದಿನಗಳಲ್ಲಿ ಕೂಲಿ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದೇವೆ ಎಂದು ವಿದ್ಯಾರ್ಥಿನಿಯೊಬ್ಬಳು ಹೇಳುತ್ತಾಳೆ.

ಓಟು ಹಾಕಲೆಂದು ಈ ಜಾಗ ಕೊಟ್ರು!

ಯಾದಗಿರಿ, ಕಲಬುರಗಿ ಸಹಿತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಂದ ಬಂದಿರುವ ನಮಗೆ ಇಲ್ಲಿನ ಮತದಾನದ ಹಕ್ಕು ಕೊಟ್ಟರು. ಮುನಿರತ್ನಗೆ ಓಟು ಹಾಕುವಂತೆ ಹೇಳಿದರು. ನಾವೆಲ್ಲರೂ ಆತನಿಗೆ ಓಟು ಹಾಕಿದ್ದೆವು. ಈಗ ಗುಡಿಸಲುಗಳನ್ನು ನೆಲಸಮ ಮಾಡಿ ನಮ್ಮನ್ನು ಓಡಿಸುತ್ತಿದ್ದಾರೆ.

ಕಾನೂನು ಎಲ್ಲಿದೆ? ನ್ಯಾಯ ಎಲ್ಲಿದೆ? ನಮಗೆ ಸರಕಾರ ಬದುಕಲು ಅನುವು ಮಾಡಿಕೊಡಬೇಕು ಎಂದು ಸಂತ್ರಸ್ತ ಮಹಿಳೆಯೊಬ್ಬರು ಆಗ್ರಹಿಸಿದರು.

ಕಾಲೇಜಿನಿಂದ ಬರುವಾಗ ನನ್ನ ಗುಡಿಸಲು ಧ್ವಂಸವಾಗಿತ್ತು!

ಕಾಲೇಜು ಮುಗಿಸಿಕೊಂಡು ಬರುವಾಗ ನನ್ನ ಗುಡಿಸಲು ಧ್ವಂಸವಾಗಿತ್ತು. ನನಗೆ ಗಾಬರಿಯಾಯಿತು. ನನ್ನ ತಂದೆ-ತಾಯಿ ಗಾರೆ ಕೆಲಸ ಮಾಡಿ ಕಾಲೇಜು ಫೀಸು ಕಟ್ಟುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿರುವ ನಮ್ಮ ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ. ನನ್ನಂತಹ ಅನೇಕ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿದೆ. ಬಟ್ಟೆ, ಪುಸ್ತಕ, ಬ್ಯಾಗ್‌ಗಳೆಲ್ಲವೂ ಮಣ್ಣಿನಡಿಯಲ್ಲಿ ಸೇರಿಕೊಂಡಿವೆ ಎಂದು ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಅಳಲು ತೋಡಿಕೊಂಡಿದ್ದಾಳೆ.

share
ಇಬ್ರಾಹಿಂ ಖಲೀಲ್ ಬನ್ನೂರು
ಇಬ್ರಾಹಿಂ ಖಲೀಲ್ ಬನ್ನೂರು
Next Story
X