Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾದಕವಸ್ತುಗಳ ದಾಸರಾಗುತ್ತಿರುವ ಯುವಜನತೆ

ಮಾದಕವಸ್ತುಗಳ ದಾಸರಾಗುತ್ತಿರುವ ಯುವಜನತೆ

ಇಂದು ವಿಶ್ವ ಮಾದಕ ವಸ್ತು ವಿರೋಧಿ ದಿನ

ಡಾ. ಮುರಲಿ ಮೋಹನ್ ಚೂಂತಾರು.ಡಾ. ಮುರಲಿ ಮೋಹನ್ ಚೂಂತಾರು.26 Jun 2024 4:16 PM IST
share
ಮಾದಕವಸ್ತುಗಳ ದಾಸರಾಗುತ್ತಿರುವ ಯುವಜನತೆ

ಇಂದು ನಾವು ಜೀವಿಸುತ್ತಿರುವ ಕಾಲಘಟ್ಟದಲ್ಲಿ ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ, ಧಾವಂತದ ವೇಗಕ್ಕೆ ಹೊಂದಿಕೆಯಾಗಲು ಕಷ್ಟವಾಗಿ ಯುವ ಜನತೆ ತಪ್ಪುದಾರಿ ಹಿಡಿಯುತ್ತಾರೆ. ನಮ್ಮ ಇಂದಿನ ನಾಗರಿಕ ಜೀವನಶೈಲಿಯಲ್ಲಿ ಮೋಜು, ಮಸ್ತಿ ತಡ ರಾತ್ರಿಯ ಪಾರ್ಟಿ ಇತ್ಯಾದಿಗಳು ಮಾಮೂಲಿಯಾಗಿವೆ. ಈ ಹಂತದಲ್ಲಿ ಹದಿ ಹರೆಯದ ಯುವ ಜನತೆ ದಾರಿ ತಪ್ಪುವುದು ಸಾಮಾನ್ಯ. ಈ ದಿಸೆಯಲ್ಲಿ ತಂದೆ ತಾಯಂದಿರ ಆಸರೆ, ಮಾರ್ಗದರ್ಶನ ಅತೀ ಅಗತ್ಯ. ಹದಿ ಹರೆಯದಲ್ಲಿ ಮಕ್ಕಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯದಿದ್ದಲ್ಲಿ ಅನಾಹುತವಾಗುವ ಸಾಧ್ಯತೆಯಿದೆ.

ಜೂನ್ 26ರಂದು ವಿಶ್ವದಾದ್ಯಂತ ‘ಮಾದಕವಸ್ತು ವಿರೋಧಿ ದಿನ’ ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ.

ಅಪೀಮು, ಗಾಂಜಾ, ಕೊಕೇನ್, ಮಾರಿಜುವಾನಾ ಇವೆಲ್ಲಾ ಮಾದಕ ವಸ್ತುಗಳ ಸೇವನೆ ನಮ್ಮ ದೇಶಗಳಲ್ಲಿ ಶತಶತಮಾನಗಳಿಂದ ಇದೆ. ಒಮ್ಮೆ ಇದರ ಚಟಕ್ಕೆ ಬಿದ್ದಲ್ಲಿ ಮತ್ತೆ ಹೊರಬರುವುದು ಬಹಳ ಕಷ್ಟ. ಆ ವ್ಯಕ್ತಿಗೆ ದುಶ್ಚಟವೆಂದು ಗೊತ್ತಿದ್ದರೂ ಅದನ್ನು ಮತ್ತೆ ಮತ್ತೆ ಮಾಡುತ್ತಿರುತ್ತಾನೆ. ಇದಕ್ಕೆ ಮುಖ್ಯ ಕಾರಣ, ಅದನ್ನು ನಿಲ್ಲಿಸಿದರೆ ಆತನಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಹಿಂಸೆಯಾಗುತ್ತದೆ. ಹೀಗಾಗಿ ಹೇಗೋ ಆತನಿಗೆ ಅಂಟಿಕೊಂಡ ಚಟಗಳು ಅವನನ್ನು ಬಿಡದೆ ಆವರಿಸಿಕೊಂಡಿರುತ್ತದೆ.

ಅಪೀಮು ಎನ್ನುವುದು ಗಸಗಸೆಯಿಂದ ತಯಾರು ಮಾಡಲಾದ, ಔಷಧಿಯ ಗುಣವುಳ್ಳ ವಸ್ತು. ಅಪೀಮುನಿಂದ ತಯಾರಾದ ಮಾರ್ಪಿನ್ ಎನ್ನುವ ಶುದ್ಧ ರಾಸಾಯನಿಕ ವಸ್ತುವನ್ನು, ಇಂದಿಗೂ ವೈದಕೀಯ ಶಾಸ್ತ್ರದಲ್ಲಿ ನೋವು ನಿವಾರಕ ಚುಚ್ಚುಮದ್ದಿನ ರೂಪದಲ್ಲಿ ಬಳಸಲಾಗುತ್ತದೆ. ಅಪಘಾತದಲ್ಲಿ ಪೆಟ್ಟುಬಿದ್ದು ತೀವ್ರ ಸ್ಪರೂಪದ ನೋವಿರುವಾಗ, ಹೃದಯಘಾತವಾಗಿ ಅತಿಯಾದ ಎದೆನೋವು ಇದ್ದಲ್ಲಿ ನೋವುನಿವಾರಕವಾಗಿ ಇಂದಿಗೂ ಬಳಸಲಾಗುತ್ತದೆ. ಇದರಿಂದ ಸಣ್ಣ ಪ್ರಮಾಣದಲ್ಲಿ ನಿದ್ದೆಬರಬಹುದು. ಅಪೀಮುನಿಂದ ತಯಾರಿಸಲಾದ ಹೆರಾಯಿನ್ ಎಂಬ ಮಾದಕವಸ್ತು ಕೂಡಾ ಪಾಶ್ಚಾತ್ಯ ದೇಶಗಳಲ್ಲಿ ಹೇರಳವಾಗಿ ಬಳಕೆಯಲ್ಲಿದೆ. ಇದರಿಂದ ಶರೀರದ ನೋವು, ಬಳಲಿಕೆ, ಮಾನಸಿಕ ದುಗುಡ ಕಡಿಮೆಯಾಗಿ ಕ್ಷಣಿಕವಾಗಿ ಖುಷಿ ಸಿಗುತ್ತದೆ. ಮನಸ್ಸಿನ ಬೇಸರ, ನಿರಾಸೆ ಎಲ್ಲವೂ ತಗ್ಗಿ ನಿರಾಳವಾಗುತ್ತದೆ. ಈ ಕಾರಣದಿಂದಲೇ ಕೆಲವರು ಹೆರಾಯಿನ್ ಚುಚ್ಚುಮದ್ದನ್ನು ಮತ್ತೆ ಮತ್ತೆ ಬಳಸುತ್ತಾರೆ. ಕ್ರಮೇಣ ಅದು ಚಟವಾಗಿ ಮಾರ್ಪಾಡಾಗುತ್ತದೆ. ಮತ್ತೆ ಮತ್ತೆ ತೆಗೆದುಕೊಳ್ಳಬೇಕೆಂಬ ತುಡಿತ ಉಂಟಾಗುತ್ತದೆ. ತೆಗೆದುಕೊಳ್ಳದಿದ್ದಲ್ಲಿ ಮನುಷ್ಯ ಮಾನಸಿಕ ಸ್ಥಿಮಿತ ಕಳಕೊಂಡು ಹುಚ್ಚನಂತಾಗುತ್ತಾನೆ. ಹೆರಾಯಿನ್ ಬಳಕೆಯಿಂದ ಲೈಂಗಿಕ ಆಸೆ ಹೆಚ್ಚಾಗುತ್ತದೆ. ಆದರೆ ಲೈಂಗಿಕ ಸಾಮರ್ಥ್ಯ ಕುಗ್ಗುತ್ತದೆ. ನಮ್ಮ ದೇಶದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಮಾದಕ ವಸ್ತುಗಳ ಬಳಕೆ ಕಾರಣ ಎಂದರೂ ತಪ್ಪಲ್ಲ. ಒಟ್ಟಿನಲ್ಲಿ ಅಫೀಮು ಚಟಕ್ಕೆ ಹದಿಹರೆಯದ ಯುವಕರು ಬಿದ್ದಲ್ಲಿ ಮತ್ತೆ ಹೊರ ಬರುವುದು ಬಹಳ ಕಷ್ಟ.

ಇನ್ನು ‘ಗಾಂಜಾ’ ಕೂಡಾ ಸಸ್ಯ ಮೂಲದಿಂದಲೇ ಬಂದಂತಹ ಇನ್ನೊಂದು ಮಾದಕವಸ್ತು. ಈಗೀಗ ಹಳ್ಳಿ ಹಳ್ಳಿಗಳಲ್ಲೂ ಇದನ್ನು ಅಕ್ರಮವಾಗಿ ಬೆಳೆಸುತ್ತಿದ್ದಾರೆ. ಸರಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೂ, ಜನರು ಅಕ್ರಮವಾಗಿ ಬೆಳೆದು, ಹಣಮಾಡುವ ದಂಧೆಯಲ್ಲಿ ತೊಡಗಿದ್ದಾರೆ. ಅದೇ ರೀತಿ ಸಸ್ಯಮೂಲದಿಂದ ಬಂದಿರುವ ಕೊಕೇನ್, ಮಾರಿಜುವಾನಾ ಮತ್ತು ಹಷೀಷ್ ಕೂಡಾ ಮಾದಕ ದ್ರವ್ಯಗಳೇ. ಈ ಮೇಲೆ ತಿಳಿಸಿದ ಎಲ್ಲಾ ವಸ್ತುಗಳ ಬಳಕೆಯಿಂದ ಮನಸ್ಸು ಉತ್ತೇಜಿತಗೊಳ್ಳುತ್ತದೆ. ಜೊತೆಗೆ ಒತ್ತಡದಿಂದ ಬಳಲಿದ ದೇಹ ಮತ್ತು ಮನಸ್ಸಿಗೆ ಭ್ರಮೆ ಮತ್ತು ಭ್ರಾಂತಿಗಳನ್ನು ಮಾಡಿಸುತ್ತದೆ. ಈ ಕಾರಣದಿಂದಲೇ ಅತೀವ ಒತ್ತಡ, ಹತಾಶೆ ಮತ್ತು ನಿರಾಶೆಯಿಂದ ಕೂಡಿದ ಯುವ ಜನರು, ಸ್ಪರ್ಧಾತ್ಮಕ ಜಗತ್ತಿನ ವೇಗಕ್ಕೆ ಹೊಂದಿಕೊಳ್ಳಲಾಗದೆ ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಾರೆ. ಮೊದಮೊದಲು ಒಂದು ಮಾದಕ ದ್ರವ್ಯದ ಬಳಕೆ, ಬಳಿಕ ಎರಡು ಮೂರು ವಸ್ತುಗಳನ್ನು ಬಳಸತೊಡಗುತ್ತಾರೆ. ಇದನ್ನು Polydrug abuse ಎಂದು ಹೇಳುತ್ತಾರೆ.

ಕಾಲಕ್ರಮೇಣ ಮಾದಕ ವಸ್ತುಗಳ ಬಳಕೆ ಜಾಸ್ತಿಯಾದಂತೆ, ಶರೀರದ ಒಂದೊಂದು ಅಂಗಗಳನ್ನು ಆಪೋಶನ ತೆಗೆದುಕೊಳ್ಳುತ್ತದೆ. ಕೆಲಸ ಮಾಡಲು ಅಶಕ್ತರಾಗಿ, ಗಳಿಕೆ ಇಲ್ಲದಂತಾಗಿ, ಸಂಸಾರ, ಮನೆಮಠ ಕಳೆದುಕೊಂಡು ಬೀದಿ ಪಾಲಾಗುತ್ತಾರೆ. ಚಟಕ್ಕೆ ದಾಸರಾಗಿ, ಮಾದಕ ದ್ರವ್ಯ ಸಿಗದಾದಾಗ ಹಣದ ಅವಶ್ಯಕತೆಗಾಗಿ ಕೊಲೆ, ಸುಳಿಗೆ, ಕಳ್ಳತನ ಮಾಡಲೂ ಹೇಸದ ಮನೋಸ್ಥಿತಿಗೆ ಬಂದು ತಲುಪುತ್ತಾರೆ. ಒಟ್ಟಿನಲ್ಲಿ ಮಾದಕ ದ್ರವ್ಯಗಳ ದಾಸನಾದವನನ್ನು ಚಟ ಬಿಡಿಸಿ ಸಮಾಜದ ಮುಖ್ಯವಾಹಿನಿಗೆ ತರುವುದು ಒಂದು ದೊಡ್ಡ ಭಗೀರಥ ಪ್ರಯತ್ನವೆಂದರೂ ಸುಳ್ಳಲ್ಲ.

ಯುವಜನತೆ ಮಾದಕ ವಸ್ತು

ಚಟಕ್ಕೆ ಬೀಳದಂತೆ ತಡೆಗಟ್ಟುವುದು ಹೇಗೆ?

ಹದಿಹರೆಯದಲ್ಲಿ ಬೆಳೆಯುವ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು.

ಅತಿಯಾದ ಒತ್ತಡ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳನ್ನು ಅತಿಯಾದ ಮುದ್ದಿನಿಂದ ಬೆಳೆಸಬಾರದು. ನಮ್ಮ ನಿರೀಕ್ಷೆಗಳಿಗೆ ಕಡಿವಾಣ ಹಾಕಿ ಮಕ್ಕಳ ಮೇಲೆ ವಿಪರೀತ ಒತ್ತಡ ಬೀಳದಂತೆ ನೋಡಿಕೊಳ್ಳಬೇಕು.

ಹದಿಹರೆಯದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅನಗತ್ಯವಾಗಿ ಅವರಿಗೆ ಬೈದು, ಹೊಡೆದು, ಬುದ್ಧಿ ಹೇಳುವುದನ್ನು ಬಿಟ್ಟು, ಆಪ್ತಮಿತ್ರರಂತೆ ಅವರ ಕಷ್ಟ ಸುಖಗಳನ್ನು ವಿಚಾರಿಸುತ್ತಾ ಅವರಿಗೆ ಸೂಕ್ತ ಸಾಂತ್ವನ ಕೊಡಬೇಕು. ಇದು ತಂದೆ ತಾಯಂದಿರ ಆದ್ಯ ಧರ್ಮ.

ಮಕ್ಕಳನ್ನು ಅತಿಯಾಗಿ ಮುದ್ದುಮಾಡಿ, ಕೈತುಂಬಾ ಹಣ ನೀಡಿ, ಕೇಳಿದ್ದೆಲ್ಲಾ ನೀಡಿದ್ದಲ್ಲಿ ದಾರಿ ತಪ್ಪುವ ಎಲ್ಲಾ ಸಾಧ್ಯತೆ ಇರುತ್ತದೆ. ಮಾಹಿತಿ ತಂತ್ರಜ್ಞಾನ, ಅಂತರ್ಜಾಲದ ದುರ್ಬಳಕೆಯಿಂದ, ಹದಿಹರೆಯದ ಮಕ್ಕಳು ಬಹುಬೇಗ ದಾರಿ ತಪ್ಪುವ ಸಾಧ್ಯತೆ ಇರುತ್ತದೆ. ಈ ದಿಸೆಯಲ್ಲಿ ಹೆತ್ತವರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ನಮ್ಮ ಮಕ್ಕಳ ಸಾಮರ್ಥ್ಯದ ಅರಿವಿನ ಜೊತೆಗೆ, ಹೆತ್ತವರು ತಮ್ಮ ಸ್ಥಾನಮಾನದ ಬಗ್ಗೆ ಹೆಚ್ಚು ಪ್ರಾಶಸ್ತ್ಯ ಕೊಡದೆ ಮಕ್ಕಳನ್ನು ಮಕ್ಕಳ ರೀತಿಯಲ್ಲಿ ಬೆಳೆಸಿದ್ದಲ್ಲಿ ಅವರು ಮುಂದೆ ಸಮಾಜದ ಸತ್ಪ್ರಜೆ ಆಗಬಹುದು.

share
ಡಾ. ಮುರಲಿ ಮೋಹನ್ ಚೂಂತಾರು.
ಡಾ. ಮುರಲಿ ಮೋಹನ್ ಚೂಂತಾರು.
Next Story
X