ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿ ಏರ್ ಬ್ಲಾಸ್ಟ್ ಅವಘಡ: ಓರ್ವ ಕಾರ್ಮಿಕ ಮೃತ್ಯು, ಇನ್ನೋರ್ವ ಗಂಭೀರ

ರಾಯಚೂರು: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿ ಏರ್ ಬ್ಲಾಸ್ಟ್ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಶರಣಬಸವ ವೀರಾಪುರ(35) ಮೃತಪಟ್ಟ ಕಾರ್ಮಿಕ. ಹಟ್ಟಿ ಚಿನ್ನದ ಗಣಿ ಕಂಪೆನಿಯ ಸರ್ಕಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದು ಈ ಅವಘಡ ಸಂಭವಿಸಿದೆ. ಈ ವೇಳೆ ಅದರಡಿಯಲ್ಲಿ ಸಿಲುಕಿದ್ದ ಕಾರ್ಮಿಕರ ಪೈಕಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡಿರುವ ಕಾರ್ಮಿಕ ನಿರುಪಾದಿ ಪಾಮನಕಲ್ಲೂರು ಎಂಬವರನ್ನು ಹಟ್ಟಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಿದ್ದಾರೆ.
Next Story