Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿ...

ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ; ಕುವೆಂಪು ವಿವಿಯ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ ದಿಢೀರ್‌ ರದ್ದು

ವಾರ್ತಾಭಾರತಿವಾರ್ತಾಭಾರತಿ24 May 2025 11:28 AM IST
share
ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ; ಕುವೆಂಪು ವಿವಿಯ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ ದಿಢೀರ್‌ ರದ್ದು

ಶಿವಮೊಗ್ಗ:ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ ದಿಢೀರ್‌ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಿರುವ ಘಟನೆ ನಡೆದಿದೆ.

ಮೇ.24 ರಂದು ಬೆಳಗ್ಗೆ 9 ಗಂಟೆಯಿಂದ ಬಿ.ಎ. 6ನೇ ಸೆಮಿಸ್ಟರ್‌ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ.ಐಚ್ಛಿಕ ಕನ್ನಡ ವಿಷಯ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಲಕೋಟೆ ತೆರೆದಾಗ ಶಿರೋನಾಮ ಸರಿ ಇತ್ತು. ಆದರೆ ಪ್ರಶ್ನೆಗಳು ಬದಲಾಗಿದ್ದವು. ಇವತ್ತು ಪ್ರಶ್ನೆ ಪತ್ರಿಕೆ 14ರ ಪರೀಕ್ಷೆ ನಡೆಯಬೇಕಿತ್ತು. ಆದರೆ ಈ ಪ್ರಶ್ನೆ ಪತ್ರಿಕೆಯಲ್ಲಿ ಈಗಾಗಲೇ ಪರೀಕ್ಷೆ ನಡೆದಿರುವ ಪ್ರಶ್ನೆ ಪತ್ರಿಕೆ 12ರ ಪ್ರಶ್ನೆಗಳು ಇದ್ದವು ಎಂದು ತಿಳಿದು ಬಂದಿದೆ.

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಉತ್ತರ ಪತ್ರಿಕೆ ನೀಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಸೇರಿದಂತೆ ಅಗತ್ಯ ಮಾಹಿತಿ ಬರೆದಿದ್ದರು. ಆದರೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ ಎಂಬ ವಿಷಯ ತಿಳಿದು ಆತಂಕಗೊಂಡರು. ಇತ್ತ ಪರೀಕ್ಷೆ ರದ್ದುಪಡಿಸಬೇಕೆ, ಬೇರೆ ಪ್ರಶ್ನೆ ಪತ್ರಿಕೆ ಬರುತ್ತದೆಯೇ ಎಂಬುದು ಗೊತ್ತಾಗದೆ ಉಪನ್ಯಾಸಕರು, ಕಾಲೇಜು ಆಡಳಿತ ಮಂಡಳಿಗಳು ಗೊಂದಲಕ್ಕೀಡಾಗಿದ್ದವು.

ಸಮಸ್ಯೆಯ ಮಾಹಿತಿ ತಿಳಿಯುತ್ತಿದ್ದಂತೆ ಕುವೆಂಪು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಮುಂದೂಡಿದೆ. ಎಲ್ಲ ಕಾಲೇಜುಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ರವಾನಿಸಲಾಗಿದೆ. ತಾಂತ್ರಿಕ ಕಾರಣದಿಂದಾಗಿ ಇಂದು ನಿಗದಿಯಾಗಿದ್ದ ಐಚ್ಛಿಕ ಕನ್ನಡ ವಿಷಯದ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ. ವಿದ್ಯಾರ್ಥಿಗಳಿಂದ ಪ್ರಶ್ನೆ ಮತ್ತು ಉತ್ತರ ಪತ್ರಿಕೆ ಹಿಂಪಡೆಯುವಂತೆ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X