Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. "ಆರೆಸ್ಸೆಸ್‌ನವರಷ್ಟು ಭ್ರಷ್ಟರು ಯಾರೂ...

"ಆರೆಸ್ಸೆಸ್‌ನವರಷ್ಟು ಭ್ರಷ್ಟರು ಯಾರೂ ಇಲ್ಲ"; ಬಿಜೆಪಿ ಶಾಸಕ ಸುರೇಶ್‌ ಗೌಡ ಹಳೇ ವಿಡಿಯೋ ಮತ್ತೆ ವೈರಲ್‌

ಆರೆಸ್ಸೆಸ್‌ನ ಗುಪ್ತಸೂಚಿಗಳ ಬಗ್ಗೆ ಬಾಯ್ತೆರೆದು ಮಾತಾಡಿದ ಶಾಸಕ ಎಂದ ಬಿ.ಕೆ.ಹರಿಪ್ರಸಾದ್‌

ವಾರ್ತಾಭಾರತಿವಾರ್ತಾಭಾರತಿ6 April 2025 4:12 PM IST
share
ಆರೆಸ್ಸೆಸ್‌ನವರಷ್ಟು ಭ್ರಷ್ಟರು ಯಾರೂ ಇಲ್ಲ; ಬಿಜೆಪಿ ಶಾಸಕ ಸುರೇಶ್‌ ಗೌಡ ಹಳೇ ವಿಡಿಯೋ ಮತ್ತೆ ವೈರಲ್‌

ಬೆಂಗಳೂರು : ಬಿಜೆಪಿ ಶಾಸಕ ಸುರೇಶ್ ಗೌಡ ಅವರು "ಆರೆಸ್ಸೆಸ್‌ನವರಷ್ಟು ಭ್ರಷ್ಟರು ಯಾರೂ ಇಲ್ಲ. ಸುಮ್ ಸುಮ್ನೆ ದೇಶಪ್ರೇಮ ಎಂದು ಹೇಳ್ತಾರೆ" ಎಂದು ಹೇಳಿದ್ದಾರೆನ್ನಲಾದ ಹಳೇ ವಿಡಿಯೋವೊಂದು ಈಗ ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಮತ್ತೆ ಮುನ್ನಲೆಗೆ ಬಂದಿದೆ.

ಈ ಕುರಿತ ವಿಡಿಯೋವನ್ನು ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, "ಇಡೀ ಜಗತ್ತಿನಲ್ಲೇ ಶ್ರೀಮಂತ ಸಂಘವಾಗಲು ಆರೆಸ್ಸೆಸ್‌ ತಾನು ಮಾಡುವ ಭ್ರಷ್ಟಾಚಾರಗಳಿಗೆ ಎಲ್ಲೇ ಇಲ್ಲ. ಬಿಜೆಪಿ ಪಕ್ಷದ ನಾಯಕರೇ ಸಂಘ ಪರಿವಾರದ ಅಸಲಿ ಮುಖವಾಡಗಳನ್ನು ಬಿಚ್ಚಿಡಬೇಕು. ಸತ್ಯ ಕಹಿ ಆಗಿರುತ್ತೆ, ಸ್ವಲ್ಪ ಅರಗಿಸಿಕೊಳ್ಳಬೇಕು. ಬಿಜೆಪಿ ಶಾಸಕ ಸುರೇಶ್‌ ಗೌಡ ಅವರು ಆರೆಸ್ಸೆಸ್‌ನ ಗುಪ್ತಸೂಚಿಗಳ ಬಗ್ಗೆ ಬಾಯ್ತಪ್ಪಿ ಆಡಿದ ಮಾತುಗಳಲ್ಲ, ಬಾಯ್ತೆರೆದು ಮಾತಾಡಿದ್ದಾರೆ. ಸಂಘ ಪರಿವಾರದ ಕರ್ಮಕಾಂಡದ ಯಶೋಗಾಥೆಯ ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಒಂದೊಂದು ಆಣಿಮುತ್ತುಗಳನ್ನು ಉದುರಿಸಿದ್ದಾರೆ. ಶೂದ್ರರು, ಹಿಂದುಳಿದವರು, ಶೋಷಿತ ಸಮುದಾಯದ ಬಿಜೆಪಿ ಪಕ್ಷದ್ದೇ ರಾಜಕೀಯ ನಾಯಕರನ್ನು ಬುಡಮೇಲು ಮಾಡಿದ ಕುತಂತ್ರಗಾರಿಕೆಯ ಪರಂಪರೆಯನ್ನು ಹಾಡಿ ಹೊಗಳಿದ್ದಾರೆ" ಎಂದು ಬರೆದುಕೊಂಡಿದ್ದಾರೆ.

ವೈರಲ್‌ ಆದ ಹಳೆಯ ವಿಡಿಯೋದಲ್ಲೇನಿದೆ? :

"ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಹೊಡೆದಿದ್ದು ಯಾಕೆ?, ರಾಜ್ಯದಲ್ಲಿ ಬಲಿಷ್ಠರಾದ ತಕ್ಷಣ ಹೈಕಮಾಂಡ್‌ಗೆ ಗೌರವ ಕೊಡಲ್ಲ ಎಂದು ಹೊಡದೇ ಹೊಡೀತಾರೆ. ಮತ್ತು ಕೆಳಗೆ ಹಾಕ್ತಾರೆ. ಅದು ಒಂದು ಸಾಮಾನ್ಯ ವಿದ್ಯಾಮಾನ. ನಾನು ಅಂತ ಮೇಲೆ ಹೋದರೆ ಯಾರನ್ನೂ ಬಿಡಲ್ಲ. ಅಂತಹ ಅಡ್ವಾಣಿಯವರನ್ನೇ ಅರೆಸ್ಸೆಸ್‌ನವರು ಕೆಳಗೆ ಹಾಕಿದರು. ಅರೆಸ್ಸೆಸ್‌ನವರಷ್ಟು ಭ್ರಷ್ಟರು ಯಾರೂ ಇಲ್ಲ. ಕೇವಲ ಮಾತಿಗೆ ದೇಶಪ್ರೇಮ ಎಂದು ಹೇಳ್ತಾರೆ. ರಾಜ್ಯದಲ್ಲಿರುವ ಆರೆಸ್ಸೆಸ್‌ನವರ ಪಟ್ಟಿ ತೆಗೆದುಕೊಳ್ಳಿ. ಯಾರ್ಯಾರು ಎಷ್ಟೆಷ್ಟು ದುಡ್ಡು ಮಾಡಿದ್ದಾರೆ ಅಂತ. ಬೇಕಾದ್ರೆ ಯಡಿಯೂರಪ್ಪ ಅವರೇ ಪಟ್ಟಿ ಕೊಡ್ತಾರೆ. ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟೆ ಎಂದು ಅವರೇ ಹೇಳುತ್ತಾರೆ" ಎಂದು ಹೇಳಿರುವುದು ವೀಡಿಯೋದಲ್ಲಿದೆ.

ಈ ವಿಡಿಯೋ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದ್ದು ಎಂದು ಹೇಳಲಾಗುತ್ತಿದ್ದು, ರಹಸ್ಯ ಸಭೆಯೊಂದರಲ್ಲಿ ಸುರೇಶ್ ಗೌಡ ಮಾತನಾಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಗಿತ್ತು. ಇದೀಗ ಮತ್ತೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಶಾಸಕ ಸುರೇಶ ಗೌಡರು ಆರ್ ಎಸ್ ಎಸ್ ನ ಗುಪ್ತಸೂಚಿಗಳ ಬಗ್ಗೆ ಬಾಯ್ತಪ್ಪಿ ಆಡಿದ ಮಾತುಗಳಲ್ಲ, ಬಾಯ್ತೆರೆದು ಮಾತಾಡಿದ್ದಾರೆ.ಸಂಘ ಪರಿವಾರದ ಕರ್ಮಕಾಂಡದ ಯಶೋಗಾಥೆಯ ಬಗ್ಗೆ ಬಿಜೆಪಿ ಶಾಸಕ ಸುರೇಶ ಗೌಡ ಒಂದೊಂದು ಆಣಿಮುತ್ತುಗಳನ್ನು ಉದುರಿಸಿದ್ದಾರೆ.ಶೂದ್ರರು,ಹಿಂದುಳಿದವರು,ಶೋಷಿತ ಸಮುದಾಯದ ಬಿಜೆಪಿ ಪಕ್ಷದ್ದೇ ರಾಜಕೀಯ ನಾಯಕರನ್ನು… pic.twitter.com/TjSVngMmw4

— Hariprasad.B.K. (@HariprasadBK2) April 2, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X