Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿರುವ...

ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ; ನೆಲಕ್ಕುರುಳಿದ ನೂರಾರು ವಿದ್ಯುತ್ ಕಂಬಗಳು

ಹಲವು ಮನೆಗಳಿಗೆ ಹಾನಿ : ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ25 May 2025 7:45 PM IST
share
ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ; ನೆಲಕ್ಕುರುಳಿದ ನೂರಾರು ವಿದ್ಯುತ್ ಕಂಬಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ನೂರಾರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ಮರಗಳು ಬಿದ್ದ ಪರಿಣಾಮ ಹಲವು ಮನೆಗಳು ಹಾನಿಗೀಡಾಗಿವೆ.

ಜಿಲ್ಲೆಯಲ್ಲಿ ಗಂಟೆ ಗಂಟೆಗೂ ಗಾಳಿ ಮಳೆಯ ಆರ್ಭಟ ಜೋರಾಗುತ್ತಿದೆ. ತಲಕಾವೇರಿ, ಭಾಗಮಂಡಲ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನೀರು ರಸ್ತೆಗಳನ್ನು ಆವರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಮೇ ತಿಂಗಳಿನಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿರುವುದು ಇದೇ ಮೊದಲು. ನಾಪೋಕ್ಲು ಮತ್ತು ಮಡಿಕೇರಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಹತ್ತಾರು ಮರಗಳು ಹಾಗೂ ನೂರಾರು ವಿದ್ಯುತ್ ಕಂಬಗಳು ಬಿದ್ದಿವೆ. ಗ್ರಾಮೀಣ ಭಾಗದಲ್ಲಿ ನದಿ ತೊರೆಗಳು ತುಂಬಿ ಹರಿಯುತ್ತಿವೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಕಷ್ಟವಾಗಿದೆ. ಗಾಳಿ, ಮಹಾಮಳೆ ಹೀಗೇ ಮುಂದುವರಿದರೆ ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಅಪಾಯ ಎದುರಾಗಬಹುದೆನ್ನುವ ಆತಂಕ ಗ್ರಾಮಸ್ಥರಲ್ಲಿ ಮೂಡಿದೆ.

ಸೆಸ್ಕ್ ಮಡಿಕೇರಿ ವಿಭಾಗದಲ್ಲಿ ಗಾಳಿ ಮಳೆಗೆ 200ಕ್ಕೂ ಅಧಿಕ ವಿದ್ಯುತ್ ಕಂಬಗಳು ಬಿದ್ದಿವೆ. ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಹಾಗೂ ಶಾಖಾಧಿಕಾರಿಗಳು ಸಾರ್ವಜನಿಕರ ಸಹಕಾರದಿಂದ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಹಕರಿಗೆ ವಿದ್ಯುತ್ ಮರು ಸಂಪರ್ಕ ಒದಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಎಂ.ರಾಮಚಂದ್ರ ಅವರು ತಿಳಿಸಿದ್ದಾರೆ.

ಗಾಳಿ ಮಳೆಯಿಂದ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ಕಲ್ಲುಬಾಣೆಯಲ್ಲಿ ಕೆ.ಕೆ.ಮಜೀದ ಎಂಬುವವರ ವಾಸದ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕುಶಾಲನಗರ ತಾಲ್ಲೂಕಿನ ವಾಲ್ನೂರು- ತ್ಯಾಗತ್ತೂರು ಗ್ರಾಮದ ನಿವಾಸಿ ಬೀರನ್ ಎಂಬುವವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ವಿರಾಜಪೇಟೆ ಪಟ್ಟಣದ ಮುಖ್ಯ ರಸ್ತೆಗಳು ಜಲಾವೃತಗೊಂಡು ವ್ಯಾಪಾರ ವಹಿವಾಟು, ಜನಜೀವನ ಅಸ್ತವ್ಯಸ್ತಗೊಂಡಿತು. ಮಡಿಕೇರಿ ನಗರದಲ್ಲೂ ರಸ್ತೆಗಳಲ್ಲಿ ನೀರು ತುಂಬಿ ತೊಂದರೆ ಎದುರಾಯಿತು. ಕಾವೇರಿ ಹಾಲ್ ಗೆ ನೀರು ನುಗ್ಗಿ ವಿವಾಹ ಸಮಾರಂಭಕ್ಕೆ ಅಡಚಣೆ ಉಂಟಾಯಿತು.

ಮಡಿಕೇರಿ- ಸಂಪಾಜೆ ಹೆದ್ದಾರಿಯ ಕಾಟಕೇರಿ ಬಳಿ ಬೃಹತ್ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ತೆರವು ಕಾರ್ಯಾಚರಣೆ ನಡೆಯಿತು. ಸಿದ್ದಾಪುರ, ಚೆಟ್ಟಳ್ಳಿ, ಸೋಮವಾರಪೇಟೆ, ಕುಶಾಲನರ, ನಾಪೋಕ್ಲು, ಬೆಟ್ಟಗೇರಿ ಭಾಗದಲ್ಲೂ ರಸ್ತೆಗೆ ಮರಗಳು ಬಿದ್ದಿವೆ.

ಕಳೆದ 24 ಗಂಟೆಗಳಲ್ಲಿ ತಲಕಾವೇರಿ- ಭಾಗಮಂಡಲದಲ್ಲಿ ದಾಖಲೆಯ 8 ಇಂಚು ಮಳೆಯಾಗಿದೆ. ಹುದಿಕೇರಿ 125 ಮಿ.ಮೀ, ಶಾಂತಳ್ಳಿ 100 ಮಿ.ಮೀ, ಪೊನ್ನಂಪೇಟೆ 93 ಮಿ.ಮೀ, ನಾಪೋಕ್ಲು 72 ಮಿ.ಮೀ, ಮಡಿಕೇರಿ ತಾಲ್ಲೂಕು ಸರಾಸರಿ 85.67 ಮಿ.ಮೀ, ವಿರಾಜಪೇಟೆ 109.6 ಮಿ.ಮೀ, ಸೋಮವಾರಪೇಟೆ 55 ಮಿ.ಮೀ, ಪೊನ್ನಂಪೇಟೆ ತಾಲ್ಲೂಕು 81.44 ಮಿ.ಮೀ ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 38.5 ಮಿ.ಮೀ ಮಳೆಯಾಗಿದೆ.

ಮುಂದಿನ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 26 ರಿಂದ ಆರಂಭಗೊಳ್ಳಬೇಕಿದ್ದ ಜಿಲ್ಲೆಯ ಖಾಸಗಿ ಶಾಲೆಗಳು ಮಳೆಯ ಕಾರಣದಿಂದ ಮೇ 29ಕ್ಕೆ ಆರಂಭಗೊಳ್ಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X