Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಸಂಖ್ಯ ಅನುಭವಗಳಿಗೆ ಅಕ್ಷರದ ರೂಪ

ಅಸಂಖ್ಯ ಅನುಭವಗಳಿಗೆ ಅಕ್ಷರದ ರೂಪ

ಈ ಹೊತ್ತಿನ ಹೊತ್ತಿಗೆ

ವಾರ್ತಾಭಾರತಿವಾರ್ತಾಭಾರತಿ23 July 2023 9:17 AM IST
share
ಅಸಂಖ್ಯ ಅನುಭವಗಳಿಗೆ ಅಕ್ಷರದ ರೂಪ

- ಮೀನಾಕ್ಷಿ ಬಾಳಿ, ಕಲಬುರಗಿ

ಸುರಯ್ಯಾ ಬೇಗಂ ಎಲ್. ಹಾದಿಮನಿಯವರು ವೃತ್ತಿಯಿಂದ ಶಿಕ್ಷಕಿಯಾದರೂ ಪ್ರವೃತ್ತಿಯಿಂದ ಕವಯಿತ್ರಿ, ಕನ್ನಡ ಭಾಷೆಯ ಮೇಲೆ ಹಿಡಿತ ಹೊಂದಿರುವ ಅವರಿಗೆ ಕವಿತೆ ಅಂದರೆ ಜೀವ ಸಖ್ಯದ ನಂಟು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರಾಗಿ ಹಾಗೂ ಯಾದಗಿರಿ ಜಿಲ್ಲಾ ಸಮನ್ವಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಧಾವಂತದಲ್ಲಿಯೂ ಕಾವ್ಯವನ್ನು ಕಾಪಿಟ್ಟುಕೊಂಡು ಬಂದಿದ್ದಾರೆ ಎಂಬುದೇ ಖುಷಿಯ ಸಂಗತಿ.

ಸಂಸಾರ ಮತ್ತು ನೌಕರಿ ಎರಡೂ ತೂಗಿಸಿಕೊಂಡು ಹೋಗುವ ಅನಿವಾರ್ಯತೆಯಲ್ಲಿ ಅಸಂಖ್ಯ ಮಹಿಳೆಯರ ಸುಪ್ತ ಪ್ರತಿಭೆಯು ವ್ಯಕ್ತವಾಗುವ ಅವಕಾಶವಿಲ್ಲದೆ ಒಳಗೊಳಗೆ ಮುರುಟಿಯೇ ಹೋದದ್ದು ಉಂಟು. ಕೆಲವೊಂದು ಮಹಿಳೆಯರು ಮಾತ್ರ ಇಂಥ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಛಲ ಬಿಡದೆ ತಮ್ಮ ಪ್ರತಿಭೆಯನ್ನು ಸಾಯಲು ಬಿಡದೆ ಪೋಷಿಸಿಕೊಂಡು ಬರುತ್ತಿದ್ದಾರೆ. ಅಂಥವರ ಸಾಲಿನಲ್ಲಿ ಸುರಯ್ಯಾ ಎದ್ದು ಕಾಣಿಸುತ್ತಿದ್ದಾರೆ.

ಉತ್ತರ ಕರ್ನಾಟಕದ ಜೀವನದಿ ಭೀಮೆಯ ಒಡಲಲ್ಲಿ ಹರಡಿಕೊಂಡಿರುವ ದೇವಣಗಾಂವದ ಮಸಾರಿ ಮಣ್ಣಿನ ಘಮಲು ಅವರ ಕಾವ್ಯಗಳಲ್ಲಿ ಹರಡಿಕೊಂಡಿದೆ. ಬಾಳ ಬಟ್ಟೆಯಲ್ಲಿ ಎದುರಾಗುವ ಅಸಂಖ್ಯ ಅನುಭವಗಳಿಗೆ ಅಕ್ಷರದ ಆಕಾರ ಕೊಟ್ಟು ಕಾವ್ಯವಾಗಿಸುವ ಪ್ರಯತ್ನ ಮಾಡಿದ್ದಾರೆ. ಹೀಗೆ ಸಾಂದರ್ಭಿಕವಾಗಿ ಬರೆದ ಕವನಗಳನ್ನು ಸಂಕಲನದಲ್ಲಿ ಪೋಣಿಸಿ ಪ್ರಕಟಿಸುತ್ತಿದ್ದಾರೆ. ಹಲವಾರು ವಿಷಯಗಳು ಇಲ್ಲಿ ಎಡೆ ಪಡೆದುಕೊಂಡಿವೆ. ಜೀವನವನ್ನು ಅರ್ಥಪೂರ್ಣವಾಗಿಸುವ ಪ್ರೀತಿ, ಒಲವು, ಪ್ರಾಮಾಣಿಕತೆ, ಅಂತರಂಗ, ಬಹಿರಂಗ ಶುದ್ಧಿ, ಆತ್ಮಾವಲೋಕನ, ಭರವಸೆ ಇತ್ಯಾದಿಗಳನ್ನು ಕುರಿತು ತಮ್ಮದೇ ನಂಬಿಕೆಗಳನ್ನು ವ್ಯಕ್ತಿಸಿದ್ದಾರೆ. ಸುರಯ್ಯಾ ಅವರದು ಸಮದೃಷ್ಟಿ. ಹೀಗಾಗಿ ಎಲ್ಲೆಲ್ಲೂ ರುಜುಮಾರ್ಗವನ್ನು ಪುರಷ್ಕರಿಸುತ್ತಾರೆ. ಒಟ್ಟಾರೆಯಾಗಿ ಬರೆಯಬೇಕೆಂಬ ಅವರ ವಾಂಛೆೆಯು ಸಕಾರಾತ್ಮಕವಾದುದೇ. ಕಾವ್ಯ ಮನುಷ್ಯರನ್ನು ಮೃದುವಾಗಿಸುತ್ತದೆ. ಭಾವಜೀವಿಯಾಗಿಸುತ್ತದೆ. ಜೀವ ಪ್ರೀತಿ ಉಕ್ಕಿಸುತ್ತದೆ. ಈ ಎಲ್ಲವುಗಳು ಆವಿರ್ಭವಿಸದಿದ್ದರೆ ಕಾವ್ಯ ಕೇವಲ ಅಕ್ಷರದ ಸರ್ಕಸ್ ಆದೀತು. ಸುರಯ್ಯಾ ಅವರು ಭಾವಜೀವಿಯೂ ಹೌದು, ಹೀಗಾಗಿ ಅವರ ಕವಿತೆಗಳಲ್ಲಿ ಭಾವದೀಪ್ತಿ ಪ್ರತಿಫಲಿಸಿದೆ. ಮುಂದಿನ ದಿನಗಳಲ್ಲಿ ಅವರಿಂದ ಇನ್ನೂ ಉತ್ಕೃಷ್ಟವಾದ ಮತ್ತು ಸಮೃದ್ಧವಾದ ಕಾವ್ಯಭೀಮೆ ಹರಿದು ಬರಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X