Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಕಣ್ಣೀರು, ಕಿಡಿ ಮತ್ತು ಅಕ್ಷರ...

ಕಣ್ಣೀರು, ಕಿಡಿ ಮತ್ತು ಅಕ್ಷರ...

ಭಾರತಿದೇವಿ ಪಿ.ಭಾರತಿದೇವಿ ಪಿ.13 Jun 2025 5:53 PM IST
share
ಕಣ್ಣೀರು, ಕಿಡಿ ಮತ್ತು ಅಕ್ಷರ...
ಕೃತಿ: ಕುದಿವ ಕಣ್ಣೀರು ಲೇಖಕರು: ವಿಕಾಸ್ ಆರ್. ಮೌರ‌್ಯ ಮುಖಬೆಲೆ: 110 ರೂ. ಪ್ರಕಾಶಕರು: ಅಹರ್ನಿಶಿ ಪ್ರಕಾಶನ, ಜ್ಞಾನವಿಹಾರ ಬಡಾವಣೆ, ಕಂಟ್ರಿ ಕ್ಲಬ್ ಎದುರು, ವಿದ್ಯಾನಗರ, ಶಿವಮೊಗ್ಗ-577203 ಮೊ: 9449174662

ಇಲ್ಲಿನ ಕವಿತೆಗಳು ತರತಮದ ಪರಂಪರೆಯನ್ನು ಹೆಜ್ಜೆ ಹೆಜ್ಜೆಗೂ ಪ್ರಶ್ನಿಸುವ, ಅದರೊಳಗಿನ ಅಸಂಗತತೆಯನ್ನು ತೋರುವ ಬಗೆಯನ್ನು ಗಮನಿಸಬೇಕು. ಎದುರಿಗೆ ರಾಚುವಂತಿದ್ದರೂ ಕಾಣದ ಕುರುಡು, ಕೇಳದ ಕಿವುಡು, ಅಹಿಂಸೆಯ ಮರೆಯಲ್ಲಿ ಅಡಗಿರುವ ಹಿಂಸೆ ದಿಗ್ಭ್ರಾಂತಿಗೊಳಿಸುತ್ತದೆ. ಈ ಕಾರಣಕ್ಕೇ ಇಲ್ಲಿನ ಹಲವು ಕವಿತೆಗಳು ಎದುರಿಗಿರುವವರಿಗೆ ಪ್ರಶ್ನೆಗಳನ್ನು ಹಾಕುತ್ತವೆ. ತಮಗೇ ಹಾಕಿಕೊಳ್ಳುತ್ತವೆ. ‘ನಾವು ತಿನ್ನೋದು ಅನ್ನ, ನೀವು?’ ‘ನಾವು ಮನುಷ್ಯರು, ನೀವು?’ ‘ನಮ್ಮದು ನಾಲಿಗೆ, ನಿಮ್ಮದು?’... ಒಂದು ಕವಿತೆಯಂತೂ ‘ಮನುಷ್ಯರಾ ನೀವು?’ ಎಂದು ಕೊರಳಪಟ್ಟಿ ಹಿಡಿದು ಕೇಳುತ್ತದೆ. ‘ಯೋನಿ ನಮ್ಮ ಜನ್ಮಸ್ಥಳ’, ‘ಅವ್ವನೊಂದಿಗೆ ಉಸಿರಾಡಿ ಉಳಿದವರು’, ಹೀಗೆನ್ನುವುದರ ಮೂಲಕ ಕಟ್ಟಿಕೊಡಲಾದ ಜಾತಿವಾದಿ, ಪಿತೃಸಂಸ್ಕೃತಿಯ ಮಿಥ್‌ಗಳನ್ನು ಒಡೆಯುತ್ತಾ ಕವಿ ಮುಂದುವರಿದು ನೀವು ‘ನಮ್ಮ ಮುಟ್ಟಿ ಮನುಷ್ಯರಾಗಬಹುದು’ ಎನ್ನುತ್ತಾರೆ. ಮೈಲಿಗೆಯೆಂದು ದೂರ ಮಾಡಿ ಮನುಷ್ಯತ್ವವನ್ನೇ ಕಳೆದುಕೊಂಡವರು ಮರಳಿ ಮನುಷ್ಯರಾಗಬೇಕಾದರೆ ಮುಟ್ಟಬೇಕು ಎನ್ನುವ ಸಾಲು ಕಣ್ಣುತೆರೆಸುವಂಥದ್ದು.

ಇಂದು ನಮ್ಮ ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಮೂಡಿಬರುತ್ತಿರುವ ದಲಿತ ಸಾಹಿತ್ಯ, ಚಿಂತನೆ ಮತ್ತು ಕಲೆ ಹೊಸ ಆಯಾಮಗಳನ್ನು ಪಡೆದು ಸೃಜನಶೀಲವಾಗಿ ಹೊರಹೊಮ್ಮುತ್ತಿವೆ. ದಲಿತ ಬದುಕಿನ ಸಂಕಟ, ಅಸಹಾಯಕತೆಗಳ ಜೊತೆಗೆ ಗಾಢ ಜೀವನಪ್ರೀತಿ, ಎಲ್ಲರನ್ನೂ ಆತುಕೊಳ್ಳುವ ಗುಣ, ಸೃಜನಶೀಲತೆಯ ಬಗ್ಗೆ ಮಾತಾಡುತ್ತಿವೆ. ತಾರತಮ್ಯ ಬಿಟ್ಟು ‘ಮನುಷ್ಯರಾಗಲು ಒಳಬನ್ನಿ’ ಎನ್ನುವ ‘ಹೊಲೆ ಮಾದಿಗರ ಹೋಟೆಲ್’ ಅಂತಹದ್ದನ್ನು ಕಾಣಿಸುವ ಕವಿತೆ. ನೈಜ ಪ್ರೀತಿಗೆ ತೋಳು ಚಾಚಿದ್ದು ಹೌದು, ಆದರೆ ಬೂಟಾಟಿಕೆ ಬೇಡ ಎನ್ನುವ ಇನ್ನೊಂದು ಕವಿತೆ ‘ಹೋಗಿ... ಮತ್ತೆ ಬರಬೇಡಿ’. ಇವುಗಳ ಜೊತೆಗೆ ಇಂದಿನ ಪೀಳಿಗೆ ಹಳೆ ತಲೆಮಾರಿಗೆ ಹಾಕುತ್ತಿರುವ ಪ್ರಶ್ನೆ ಎಂಥದ್ದು, ಸಾಗಿ ಬಂದ ದಾರಿಯನ್ನು ಪರಿಭಾವಿಸುತ್ತಿರುವ ರೀತಿ ಯಾವ ಬಗೆಯದು ಎಂಬುದೂ ಬಹಳ ಮುಖ್ಯ.

ಮೊದಲನೇ ಮತ್ತು ಎರಡನೇ ತಲೆಮಾರಿನ ದಲಿತ ಕಾವ್ಯದ ಕೇಂದ್ರ ಆಕ್ರೋಶ ಎಂದು ಗುರುತಿಸಲಾಗುತ್ತದೆ. ಈ ಹೊತ್ತಿಗೂ ಆಕ್ರೋಶವೇ ಕೇಂದ್ರಭಾವವಾಗಿರುವುದು ಹೆಚ್ಚೇನೂ ಬದಲಾಗದ ವಾಸ್ತವವನ್ನು ತೋರಿಸುತ್ತದೆ. ಕೋಮುವಾದ, ಬಂಡವಾಳಶಾಹಿಯ ನಂಟು ಶೋಷಣೆಯನ್ನು ಬಹುರೂಪಿಯಾಗಿಸಿದೆ. ಇದನ್ನು ಗುರುತಿಸುವುದು, ತೆರೆದು ತೋರುವುದು ತುಂಬಾ ಮುಖ್ಯವಾಗಿ ಮಾಡಬೇಕಾದ ಕೆಲಸವಾಗಿದೆ. ಇಲ್ಲಿನ ಕವಿತೆಗಳು ಒಡಲೊಳಗಿನ ನೋವು, ಆಕ್ರೋಶವನ್ನು ಹೊರಗೆ ಹಾಕದೇ ಬಿಡುಗಡೆಯಿಲ್ಲ ಎಂಬ ಒತ್ತಡದಲ್ಲಿ ಮೂಡಿವೆ. ಈ ಒತ್ತಡ ಕೆಲವೊಮ್ಮೆ ಅಭಿವ್ಯಕ್ತಿಯನ್ನು ಸರಳೀಕರಿಸುತ್ತದೆ. ಜೊತೆಗೆ ಈ ತುರ್ತಿನಲ್ಲಿ ಭಾವಕೋಶದ ಇತರ ಸಂಗತಿಗಳು ನುಸುಳಿ ಹೋಗಿಬಿಡಬಹುದಾದ ಅಪಾಯವಿದೆ. ಅಸಹನೀಯ ನೋವು, ಸಂಘರ್ಷಗಳ ಜೊತೆಗೇ ಬದುಕಿನ ಆರ್ದ್ರತೆ, ಸಂಕೀರ್ಣತೆ, ಸಂದಿಗ್ಧತೆ, ಸೊಗಸುಗಳಿಗೆ ನಾವು ಒಡ್ಡಿಕೊಳ್ಳುತ್ತಲೇ ಇರುತ್ತೇವೆ. ಆದರೆ ಇವು ಇಲ್ಲಿ ಕೇವಲ ಮಿಂಚಿ ಮಾಯವಾಗುತ್ತವೆ. ಈ ಕವಿತೆಗಳು ‘ಓದು ಕವಿತೆ’ಗಳು ಎನ್ನುವುದಕ್ಕಿಂತ ಹೆಚ್ಚಾಗಿ ‘ಕೇಳು’ ಕವಿತೆಗಳಾಗಿ ವಿಶೇಷ ಪರಿಣಾಮ ಉಂಟುಮಾಡುತ್ತವೆ.

(ಮುನ್ನುಡಿಯಿಂದ)

share
ಭಾರತಿದೇವಿ ಪಿ.
ಭಾರತಿದೇವಿ ಪಿ.
Next Story
X