Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಾಳುಬಿದ್ದಿರುವ 14ನೇ ಶತಮಾನದ ಕಂಚಿನ...

ಪಾಳುಬಿದ್ದಿರುವ 14ನೇ ಶತಮಾನದ ಕಂಚಿನ ಮಹಲ್

ಬಹಮನಿ ಸಾಮ್ರಾಜ್ಯದ ಸಂಗೀತ, ನೃತ್ಯದ ಅರಮನೆಗೆ ಬೇಕಿದೆ ಮರು ಜೀವ

ಸಾಜಿದ್‌ ಅಲಿಸಾಜಿದ್‌ ಅಲಿ10 Feb 2025 12:48 PM IST
share
ಪಾಳುಬಿದ್ದಿರುವ 14ನೇ ಶತಮಾನದ ಕಂಚಿನ ಮಹಲ್

ಕಲಬುರಗಿ: ಬಹಮನಿ ಸಾಮ್ರಾಜ್ಯದ ಕಾಲದಲ್ಲಿ ರಾಜರು ಮತ್ತು ಅತಿಥಿಗಳಿಗೆ ನೃತ್ಯ ಮತ್ತು ಸಂಗೀತದಿಂದ ಮನೋರಂಜನೆ ನೀಡುತ್ತಿದ್ದ ನಗರದ ಹೊರವಲಯದ ಸುಲ್ತಾನಪುರ ಹತ್ತಿರದ ಕಂಚಿನಿ ಮಹಲ್ (ಅರಮನೆ) ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ.

14ನೇ ಶತಮಾನದಲ್ಲಿ ಗುಲಬರ್ಗಾ ಬಹಮನಿ ಸಾಮ್ರಾಜ್ಯ ದಕ್ಷಿಣ ಭಾರತದ ಮೊದಲ ಮುಸ್ಲಿಮ್ ರಾಜಧಾನಿ ಆಗಿತ್ತು. ಅಂದು ರಾಜರನ್ನು ಭೇಟಿಯಾಗಲು ಬರುವ ರಾಜ ಮತ್ತು ಆಸ್ಥಾನದ ಮಂತ್ರಿಗಳಿಗೆ, ರಾಜದೂತರಿಗೆ ಮನೋರಂಜನೆಗಾಗಿ ಎರಡು ಅಂತಸ್ತಿನ ಕಂಚಿನಿ ಮಹಲ್ ನಿರ್ಮಿಸಲಾಗಿತ್ತು.

ಕಂಚಿನಿ ಮಹಲ್ ಅನ್ನು ಸ್ಟೂಕ್ ವರ್ಕ್ ಮತ್ತು ಗಚ್ಚಿ ಕಲಾಕೃತಿ ಮತ್ತು ಒಳ ಗೋಡೆಗಳ ಮೇಲೆ ವಿವಿಧ ಶೈಲಿಯಲ್ಲಿ ಅದ್ಭುತದ ಹೂವಿನ ಕೆತ್ತನೆಗಳಿದೆ. ಬೃಹತ್ ಪ್ರವೇಶ ದ್ವಾರ ಹೊಂದಿರುವ ಪ್ಯಾಲೇಸ್ ಹತ್ತಿರ ಬಾವಿಯೂ ಇದೆ. ಇಂದಿಗೂ ಈ ಬಾವಿಯ ನೀರು ಕೃಷಿಗಾಗಿ ಬಳಕೆಯಾಗುತ್ತಿದೆ.

ಅಂದು ಅಧಿಪತಿಗಳ ಗಮನ ಸೆಳೆಯುತ್ತಿದ್ದ ಕಂಚಿನಿ ಮಹಲ್ ಇಂದು ಪಾಳು ಬಿದಿದ್ದು, ಗೋಡೆಗಳ ಮೇಲೆ ಜಾಲಿ ಬೇಲಿಗಳು ಬೆಳೆದು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. 700 ವರ್ಷಗಳ ಹಳೆಯ ಇತಿಹಾಸ ಸಾರುವ ಈ ಭವ್ಯ ಅರಮನೆ ಸದ್ಯದ ಅಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ತುತ್ತಾಗಿ ಗೋಡೆಗಳು ಮತ್ತು ಕಂಬಗಳು ಕುಸಿಯುತ್ತಿವೆ. ಎರಡನೇ ಅಂತಸ್ತಿನ ಮೆಟ್ಟಿಲುಗಳ ಮೇಲೆ ಕಲ್ಲು ಗುಡ್ಡೆಬಿದ್ದು ಮುಚ್ಚಿ ಹೋಗಿದೆ. ನಗರದ ಹೊರವಲಯದಲ್ಲಿ, ಪ್ರಶಾಂತ ಪ್ರಕೃತಿಯ ಮಡಿಲಲ್ಲಿದೆ ಈ ಅರಮನೆ. ಜಿಲ್ಲಾಡಳಿತ ಮನಸ್ಸು ಮಾಡಿದರೆ ಕಲ್ಯಾಣ ಕರ್ನಾಟಕದ ಐತಿಹಾಸಿಕ ಪ್ರವಾಸಿ ತಾಣವಾಗಿ ಪುನರುಜ್ಜೀವ ನೀಡುವ ಮೂಲಕ ರಾಷ್ಟ್ರೀಯ ಮತ್ತು ಅಂತರ್‌ರಾಷ್ಟ್ರೀಯ ಪ್ರವಾಸಿಗರನ್ನು ಇತ್ತ ಆಕರ್ಷಿಸಬಹುದು ಎಂದು ಹಿರಿಯ ಕಲಾವಿದ, ಸಂಶೋಧಕ ಅಯಾಝ್ ಪಟೇಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯನ್ನು ಪ್ರವಾಸಿ ತಾಣವಾಗಿಸುವ ಕನಸು ಹೊಂದಿರುವ ಅಧಿಕಾರಿಗಳು, ಜನ ಪ್ರತಿನಿಧಿ ಹಾಗೂ ರಾಜ್ಯ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಕಂಚಿನಿ ಮಹಲ್‌ನತ್ತ ದೃಷ್ಟಿ ಹಾಯಿಸಬೇಕಿದೆ.

ಬಹಮನಿ ಕಾಲದ ಬಹಳಷ್ಟು ಅವಶೇಷಗಳು ಜಿಲ್ಲೆಯಲ್ಲಿದ್ದು, ಅವುಗಳನ್ನು ಗುರುತಿಸಿ ಸಂರಕ್ಷಿಸಿ ಇತಿಹಾಸ ತಿಳಿಸುವ ಕೆಲಸವಾಗಬೇಕು. ಇದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕದ ಪ್ರತಿಷ್ಠೆ ಬೆಳೆಸುವತ್ತ ಜಿಲ್ಲಾಡಳಿತ ಗಮನ ಹರಿಸಬೇಕು ಎಂದು ಸ್ಥಳೀಯ ಇತಿಹಾಸಕಾರರು ಮತ್ತು ಸಂಶೋಧಕರು ಒತ್ತಾಯಿಸಿದ್ದಾರೆ.

ಸುಲ್ತಾನಪುರ ಗ್ರಾಮದ ಕಂಚಿನಿ ಮಹಲ್ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿಲ್ಲ. ಈ ಕುರಿತು ನೋಂದಣಿಯೂ ಇಲಾಖೆಯಲ್ಲಿಲ್ಲ. ರಿಂಗ್ ರೋಡ್ ಪ್ರದೇಶದ ಲಂಗರ್ ಕಿ ಮಸೀದಿಯನ್ನು ಕಂಚಿನಿ ಮಹಲ್ ಎಂದು ಪುರಾತತ್ವ ಇಲಾಖೆ ಸಂರಕ್ಷಣೆೆ ಮಾಡುತ್ತಿದೆ.

-ರಾಜಾ ರಾಮ್, ಸಹಾಯಕ ಉಪ ನಿರ್ದೇಶಕರು, ಪುರಾತತ್ವ ಇಲಾಖೆ ಕಲಬುರಗಿ

ಸುಲ್ತಾನಪುರ ಗ್ರಾಮದಿಂದ ಒಂದು ಕಿ.ಮೀ. ದೂರದ ಕೃಷಿ ಜಮೀನಲ್ಲಿರುವ 3,000 ಮೀಟರ್ ವಿಸ್ತೀರ್ಣದ ಕಂಚಿನಿ ಮಹಲ್‌ಅನ್ನು ಹಂತ ಹಂತವಾಗಿ ಕುಸಿಯುತ್ತಿದೆ. ಅಲ್ಲದೇ ಸ್ಥಳೀಯರು ಒತ್ತವರಿ ಮಾಡುತ್ತಿದ್ದಾರೆ. ರಾಜ್ಯ ಪುರಾತತ್ವ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಇದರ ಸಂರಕ್ಷಣೆ ಮಾಡಿ ಅಭಿವೃದ್ಧಿಪಡಿಸಬೇಕು. ಬೀದರ್‌ನ ಕೆಲವು ಐತಿಹಾಸಿಕ ಸ್ಥಳಗಳನ್ನು ಖಾಸಗಿ ಸಂಘ, ಸಂಸ್ಥೆಗಳ ಮೂಲಕ ಅಭಿವೃದ್ಧಿಪಡಿಸಿದಂತೆ ಕಲಬುರಗಿಯ ಐತಿಹಾಸಿಕ ಸ್ಥಳಗಳನ್ನೂ ಸಂರಕ್ಷಿಸಿ ಬಹುದೊಡ್ಡ ಪ್ರವಾಸಿ ತಾಣವಾಗಿಸಬಹುದು.

-ಅಯಾಝ್ ಪಟೇಲ್, ಸಂಶೋಧಕ ಮತ್ತು ಹಿರಿಯ ಕಲಾವಿದ

share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X