Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ :...

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ : ಕೆ.ಎನ್.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ3 Sept 2025 7:55 PM IST
share
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ : ಕೆ.ಎನ್.ರಾಜಣ್ಣ
"ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ಯಾವುದೇ ತೊಂದರೆ ಇಲ್ಲ"

ಕೊಡಿಗೇನಹಳ್ಳಿ : ನಾನು ಮಾಜಿ ಸಚಿವನಾಗಿ ಕೆಲಸ ಮಾಡುತಿದ್ದೇನೆ, ನನಗೆ ಇದರಿಂದ ಬೇಜಾರಿಲ್ಲ. 35 ಸಾವಿರ ಅಂತರದಿಂದ ಗೆದ್ದಿದ್ದೇನೆ. ಈಗ ಚುನಾವಣೆ ನಡೆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ ಎಂದು ಸಹಕಾರ ಇಲಾಖೆ ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಮಧುಗಿರಿ ತಾಲೂಕು ಕೊಡಿಗೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ನಾನು ಭ್ರಷ್ಟಾಚಾರ ಮಾಡಿಲ್ಲ, ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ನನಗೆ ಪಕ್ಷ ಏನು ಮೋಸ ಮಾಡಿಲ್ಲ. ನಾನು ಏಕೆ ಬಿಜೆಪಿಗೆ ಸೇರಲಿ?, ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡಲ್ಲ. ಜನತೆ ನನಗೆ ಕಾಂಗ್ರೆಸ್, ಬಿಜೆಪಿ, ಪಕ್ಷೇತರನಾಗಿ ನಿಂತರೂ ಮತ ಹಾಕುತ್ತಾರೆ. ರಾಹುಲ್ ಗಾಂಧಿ ಮತಗಳ್ಳತನ ಹೋರಾಟಕ್ಕೆ ನಾನು ಬೆಂಬಲಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಪುನರುಚ್ಚರಿಸಿದರು.

ರಾಜಕೀಯದಲ್ಲಿ ಬೆಳೆಯಬೇಕಾದರೆ ಹಣ ಮತ್ತು ಜಾತಿ ಬಲ ಇರಬೇಕು. ನನ್ನ ಬಳಿ ಎರಡು ಇಲ್ಲ. ಆದರೂ ಕ್ಷೇತ್ರದ ಜನತೆಯ ಪ್ರೀತಿ ಮತ್ತು ವಿಶ್ವಾಸ ನನ್ನ ಮೇಲೆ ಇದೆ. ರಾಜಕೀಯವಾಗಿ ಬೇನ್ನು ತೋರಿಸುವವನಲ್ಲ. ಎದೆಕೊಟ್ಟು ನಿಲ್ಲುತ್ತೇನೆ. ಸಚಿವ ಸ್ಥಾನಕ್ಕಾಗಿ ನಮ್ಮ ಕಾರ್ಯಕರ್ತರು ದೆಹಲಿಗೆ ಹೋಗುವ ಅಗತ್ಯವಿಲ್ಲ ಎಂದು ಕೆ.ಎನ್.ರಾಜಣ್ಣ ನುಡಿದರು.

ಮತದಾರರ ಋಣ ನನ್ನ ಮೇಲಿದೆ. ಇದೀಗ ಚುನಾವಣೆ ನಡೆದರೂ ಬಹುಮತದಿಂದ ಗೆಲ್ಲಿಸುತ್ತೀರಿ ಎಂಬ ವಿಶ್ವಾಸವಿದೆ. ಅಪಪ್ರಚಾರಗಹಳಿಗೆ ಕಿವಿಕೊಡಬೇಡಿ. ಸಚಿವನಾದರೂ ಶಾಸಕನಾಗಿದ್ದರೂ ಕ್ಷೇತ್ರದ ಅಭಿವೃಧ್ಧಿ ಮಾಡುತ್ತೇನೆ. ನಾನು ಬಿಜೆಪಿ ಸೇರುತ್ತೇನೆ ಎಂದು ಯಾವನಾದರೂ ಹೇಳಿಕೊಳ್ಳಲಿ, ಅವನು ಬೇಕಾದರೆ ಬ್ರೈನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಶಾಸಕ ಮಾಗಡಿ ಬಾಲಕೃಷ್ಣ ಹೇಳಿಕೆಗೆ ರಾಜಣ್ಣ ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X