Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ...

ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ

ವಾರ್ತಾಭಾರತಿವಾರ್ತಾಭಾರತಿ16 Sept 2025 9:21 PM IST
share
ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ

ಉಡುಪಿ, ಸೆ.16: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಮಾಡುತ್ತಿರುವ ಜಾತಿ ಮತ್ತು ಆರ್ಥಿಕ-ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದೂ ಧರ್ಮದ ವಿವಿಧ ಜಾತಿ ಗುರುತಿಸುವಿಕೆಯಲ್ಲಿ ಕ್ರಿಶ್ಚನ್ ಪದ ಬಳಕೆಗೆ ಅವಕಾಶ ಕೊಟ್ಟು ಮತಾಂತರಕ್ಕೆ ಕಾಂಗ್ರೆಸ್ ಸರಕಾರ ಬೆಂಬಲ ನೀಡುತ್ತಿರುವುದನ್ನು ಖಂಡಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಇಂದು ಪತ್ರ ಬರೆದಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಕೋರಿದ್ದಾರೆ.

ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಗೆ ಜಾತಿಗಣತಿಯೂ ನಡೆಯುತ್ತಿದೆ. ಇದರಲ್ಲಿ ಹಿಂದೂ ಧರ್ಮವೆಂದು ಪರಿಗಣಿಸಲ್ಪಟ್ಟ ಬಹುತೇಕ ಜಾತಿಗಳನ್ನು ಆಯಾಯ ಜಾತಿಗಳೊಂದಿಗೆ ಕ್ರೈಸ್ತರೆಂದು ಗುರುತಿಸಲು ಸರಕಾರ ಅವಕಾಶ ಮಾಡಿದೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ತಮ್ಮ ಆಡಳಿತದಲ್ಲಿ ಲಿಂಗಾಯಿತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಕುರುಬ ಕ್ರೈಸ್ತ, ನೇಕಾರ ಕ್ರೈಸ್ತ, ಮಡಿವಾಳ ಕ್ರೈಸ್ತ, ಬಿಲ್ಲವ ಕ್ರೈಸ್ತ, ಕುಂಬಾರ ಕ್ರೈಸ್ತ, ಬಂಜಾರ ಕ್ರೈಸ್ತ ಎಂದು ಗುರುತಿಸುವ ಹಿಂದಿರುವ ಉದ್ದೇಶ ಇಡೀ ಹಿಂದೂ ಧರ್ಮ ವನ್ನು ವಿವಿಧ ಜಾತಿಗಳನ್ನು ಉಲ್ಲೇಖಿಸಿ ಕ್ರೈಸ್ತರೆಂದು ಗುರುತಿಸುವ ಮೂಲಕ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ ಆಯೋಗದ ಮೂಲಕ ಸರಕಾರ ಕೈಹಾಕಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಮೂಲಕ ವಂಚನೆಯಿಂದ ಮತಾಂತರಗೊಂಡ ಸಣ್ಣ ಸಣ್ಣ ಸಮುದಾಯಗಳಲ್ಲಿರುವ ಅಮಾಯಕರ ಮತಾಂತ ರಕ್ಕೆ ಸಂಚು ರೂಪಿಸಲು ಇನ್ನಷ್ಟು ಅವಕಾಶವನ್ನು ಸರಕಾರ ನೀಡಿದೆ ಎಂದವರು ಹೇಳಿದ್ದಾರೆ. ಇದರಿಂದ ಮೂಲ ಸಮುದಾಯದ ಮೀಸಲಾತಿ ಸೌಲಭ್ಯಗಳನ್ನು ಅವರು ಪಡೆದು ದುರ್ಬಲ ಜಾತಿಗಳನ್ನು ವಂಚಿಸಲು ಅವಕಾಶವಾ ಗಲಿದೆ ಎಂದು ದೂರಿದ್ದಾರೆ.

ಒಂದು ಜಾತಿಯಿಂದ ಬೇರ್ಪಟ್ಟ ನಂತರ ಮೂಲ ಜಾತಿಯೊಂದಿಗೆ ಕ್ರೈಸ್ತ ಹೆಸರಿನ ನಮೂದಿಸುವಿಕೆ ವಿವಿಧ ಜಾತಿ ಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಇದು ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ಎಂದವರು ಪತ್ರದಲ್ಲಿ ಆರೋಪಿಸಿದ್ದಾರೆ.

ಆದ್ದರಿಂದ ಸುಮಾರು 50ಕ್ಕೂ ಅಧಿಕ ವಿವಿಧ ಜಾತಿಗಳ ಮುಂದೆ ನಮೂದಿಸಿರುವ ಕ್ರೈಸ್ತ ಎಂಬ ಉಲ್ಲೇಖ ಕೈಬಿಡುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X