Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು| ವಿದೇಶದಲ್ಲಿ ಉದ್ಯೋಗ...

ಕಾಪು| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ವಂಚನೆ ಆರೋಪ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ16 Sept 2025 8:39 PM IST
share
ಕಾಪು| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ವಂಚನೆ ಆರೋಪ: ಪ್ರಕರಣ ದಾಖಲು

ಕಾಪು, ಸೆ.16: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು.

ವಸಂತ್ 2024ರ ಎ.6ರಂದು ವಿಸಾದ ಬಗ್ಗೆ ತಿಳಿದುಕೊಳ್ಳಲು ಚಂಡಿಗಢಗೆ ಹೋಗಿದ್ದು, ಅಲ್ಲಿ ಜೋಬಿ, ವಿಜಯ್ ಸಿಂಗ್, ರಮನ್, ನಿರ್ವೈರ್ ಸಿಂಗ್ ಎಂಬವರನ್ನು ಪರಿಚಯಿಸಿದ್ದರು. ಬಳಿಕ ವಸಂತ್ ಪೂಜಾರಿ ಊರಿಗೆ ಬಂದು ಸೂರಜ್ ಹಾಗೂ ಮನೀಶ್ ಎಂಬವರನ್ನು ಅಜರಬೈಜಾನ್‌ಗೆ ಕಳುಹಿಸಿ ಕೊಡಲು ಕಂಪನಿಗೆ ತಿಳಿಸಿದ್ದು, ಕಂಪೆನಿಯವರು ಒಪ್ಪಿಕೊಂಡ ಮೇರೆಗೆ 2024ರ ಜುಲೈಯಲ್ಲಿ ಒಟ್ಟು 7,00,000ರೂ. ಹಣ ಪಾವತಿಸಿದ್ದರು.

ಬಳಿಕ ಕಂಪನಿಯವರು ಸೆ.22ರಂದು ಸೂರಜ್ ಮತ್ತು ಮನಿಶ್‌ಗೆ ಅಜರ ಬೈಜಾನ್‌ಗೆ ಕೆಲಸದ ಆಫರ್ ಮಾಡಿ ವಿಮಾನ ಟಿಕೆಟ್‌ನ್ನು ಮಾಡಿದ್ದು ಸ್ವಲ್ಪ ದಿನದ ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು. ಈ ಮಧ್ಯೆ 20 ಜನ ಪರಿಚಯದವರಿಗೂ ಕೆಲಸ ಕೊಡಿಸಲು ಒಟ್ಟು 56,91,824ರೂ. ಹಣವನ್ನು ಪಾವತಿಸಿದ್ದರು. 2025ರ ಜನವರಿ ಬಳಿಕ ಇವರೆಲ್ಲ ಹಲವು ಬಾರಿ ಚಂಡಿಗಡಕ್ಕೆ ಹೋಗಿ ಹಣ ವಾಪಾಸ್ಸು ನೀಡುವಂತೆ ಕೇಳಿದ್ದು, ಅದಕ್ಕೆ ಆರೋಪಿಗಳು 2025ರ ಜು.10 ಹಾಗೂ ಜು.30ಕ್ಕೆ ತಲಾ 6,00,000ರೂ. ಗಳ ಚೆಕ್‌ಗಳನ್ನು ನೀಡಿದ್ದು ಅವುಗಳನ್ನು ಬ್ಯಾಂಕಿನಲ್ಲಿ ಪರಿಶೀಲಿಸಿದಾಗ ಅವು ಕ್ಲೋಸ್ಡ್ ಅಕೌಂಟ್‌ನ ಚೆಕ್‌ಗಳು ಎಂಬುದು ತಿಳಿದುಬಂತು.

ಹೀಗೆ ಆರೋಪಿಗಳು 22 ಮಂದಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 63,91,824ರೂ. ಹಣವನ್ನು ಪಡೆದು ಕೊಂಡು ಕೆಲಸವನ್ನು ಕೋಡಿಸದೆ ಹಣವನ್ನು ವಾಪಾಸ್ಸು ನೀಡದೇ ಮೋಸ ಹಾಗೂ ವಂಚನೆ ಮಾಡಿರುವುದಾಗಿ ದೂರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X