Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ನಿತ್ಯ ಹರಿದ್ವರ್ಣದ ಕಾಡಿನೊಳಗೊಂದು ರೈಲು...

ನಿತ್ಯ ಹರಿದ್ವರ್ಣದ ಕಾಡಿನೊಳಗೊಂದು ರೈಲು ಪಯಣ

►ಸಕಲೇಶಪುರ - ಸುಬ್ರಹ್ಮಣ್ಯ ಟೂರ್ ► 57 ಸುರಂಗ, 225ಕ್ಕೂ ಹೆಚ್ಚಿನ ಸೇತುವೆಗಳ ಮೇಲೆ ವರ್ಣನಾತೀತ ಅನುಭವ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್27 Nov 2023 10:52 AM IST
share
ನಿತ್ಯ ಹರಿದ್ವರ್ಣದ ಕಾಡಿನೊಳಗೊಂದು ರೈಲು ಪಯಣ

ಹಾಸನ: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೈಲು ಸಂಚಾರ ನಿಜಕ್ಕೂ ಒಂದು ರೋಮಾಂಚಕಾರಿ ಅನುಭವ. ಪಶ್ಚಿಮ ಘಟ್ಟಗಳ ಸುಂದರ ಪ್ರಕೃತಿಯನ್ನು ದಾಟಿ ರೈಲು ಹೋಗುತ್ತಿರುವಾಗ ಅಕ್ಕ ಪಕ್ಕದ ರಮಣೀಯ ದೃಶ್ಯಗಳನ್ನು ನೋಡಲು ಎರಡು ಕಣ್ಣುಗಳು ಸಾಲದು.

ರೈಲು ಕೆಲವೊಂದು ಎತ್ತರದ ಪ್ರದೇಶಗಳಲ್ಲಿ ಹೋಗುತ್ತಿದ್ದಾಗ ಕೆಳಗೆ ಬಗ್ಗಿ ಪ್ರಪಾತವನ್ನು ನೋಡಿದರೆ ಎದೆ ಝಲ್ ಅನಿಸುತ್ತದೆ. ಸುಬ್ರಹ್ಮಣ್ಯದಿಂದ ದೋಣಿಗಲ್‌ವರೆಗಿನ ಸುಮಾರು 60 ಕಿಲೋಮೀಟರ್ ಪ್ರಯಾಣ ಮಜಾ ತರಿಸುತ್ತದೆ. ಈ ನಿಗದಿತ ಪ್ರದೇಶ ಪ್ರಕೃತಿಯ ಸೌಂದರ್ಯದ ದರ್ಶನವನ್ನು ಮಾಡಿಸುತ್ತದೆ. ಸುಮಾರು 57 ಸುರಂಗಗಳು ಮತ್ತು 225ಕ್ಕೂ ಹೆಚ್ಚಿನ ಸಣ್ಣ-ಪುಟ್ಟ ಹಾಗೂ ಉದ್ದದ ಸೇತುವೆಗಳ ಮೇಲೆ ರೈಲು ಹೋಗುವಾಗ ಸುತ್ತಮುತ್ತಲಿನ ಪ್ರಕೃತಿಯ ರಮಣೀಯ ಸೌಂದರ್ಯವನ್ನು ವರ್ಣಿಸುವುದಕ್ಕಿಂತಲೂ ಅನುಭವಿಸಿದರೇನೇ ಚೆಂದ. ಮಳೆಗಾಲದಲ್ಲಿ ಹರಿಯುವ ಸಣ್ಣ ಸಣ್ಣದ ಝರಿ ತೊರೆ ಗಿರಿಗಳು ಪಶ್ಚಿಮ ಘಟ್ಟದ ರುದ್ರ ರಮಣೀಯತೆಯನ್ನು ಮನ ಮುಟ್ಟಿಸುತ್ತವೆ. ಇಲ್ಲೊಂದು ಷರತ್ತು ಮಾತ್ರ ಕಡ್ಡಾಯವಾಗಿ ಅನ್ವಯಿಸುತ್ತದೆ; ಅದೇನೆಂದರೆ ಪ್ರಕೃತಿಯನ್ನು ಪ್ರೀತಿಸುವ ಮನಸ್ಸು ನಿಮ್ಮದಾಗಿರಬೇಕು, ಜಗತ್ತನ್ನು ಸುಂದರವಾಗಿ ನೋಡುವ ದೃಷ್ಟಿ ನಿಮ್ಮಲ್ಲಿರಬೇಕು, ಸೌಂದರ್ಯವನ್ನು ಅನುಭವಿಸುವ ಕನಿಷ್ಟ ಗ್ರಹಿಕೆ, ಜೊತೆಗೆ ಮಾನವೀಯ ಮೌಲ್ಯಗಳನ್ನು ಗೌರವಿಸುವ ವ್ಯಕ್ತಿ ನೀವಾಗಿದ್ದರೆ ಮಾತ್ರ ಈ ಪರಿಸರ ನಿಮಗೆ ತಲ್ಲಣಗೊಳಿಸುತ್ತದೆ. ನೀವು ಯಾಂತ್ರಿಕ ಮನಸ್ಸಿನ ವ್ಯಕ್ತಿಯಾಗಿದ್ದರೆ. ಖಂಡಿತ ಈ ಪ್ರಯಾಣ ಮನಸ್ಸಿಗೆ ನಾಟುವುದಿಲ್ಲ.

ವಿಸ್ಟಾಡೋಮ್ ಕೋಚ್

ಈ ಸುಂದರ ಪ್ರಯಾಣದ ಅನುಭವವನ್ನು ನೋಡಲು ವಿಸ್ಟಾಡೋಮ್ ಕೋಚ್ ಸೇವೆಯನ್ನು ರೈಲ್ವೆ ಇಲಾಖೆ ಪ್ರಾರಂಬಿಸಿದೆ. ವಿಸ್ಟಾಡೋಮ್ ಕೋಚ್‌ನಲ್ಲಿ ಪ್ರಯಾಣಿಸಿದವರು ಇದೊಂದು ಅದ್ಭುತ ಮರೆಯಲಾಗದ ಅನುಭವ ಎನ್ನುತ್ತಾರೆ. ಬೆಟ್ಟ ಗುಡ್ಡಗಳ ಮಧ್ಯೆ ಗುಹೆಗಳನ್ನು ದಾಟುತ್ತಾ ರೈಲು ಸಾಗುತ್ತಿದ್ದರೆ ಸ್ವರ್ಗದಲ್ಲಿ ಇದ್ದೆವೇನೋ ಎನ್ನುವಂತಹ ಅನುಭವ ನೀಡುವ ಈ ಸುಂದರ ಪ್ರಯಾಣ ನಿಜಕ್ಕೂ ರಮಣೀಯವಾಗಿರುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಪ್ರಯಾಣ ಇನ್ನಷ್ಟು ರಂಗು ನೀಡುತ್ತದೆ ಎನ್ನುತ್ತಾರೆ ಪ್ರಯಾಣಿಕರು.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X