ಹಂಪಿಯಿಂದ ಬೆಂಗಳೂರಿಗೆ ಬೈಕ್ ರ್ಯಾಲಿ

ಹೊಸಪೇಟೆ: ಅಂತಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಪರಂಪರೆ ತಾಣವಾದ ಹಂಪೆಯ ವಿಜಯ ವಿಠಲ ದೇವಸ್ಥಾನದಿಂದ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು.
ಹಂಪಿಯ ವಿಜಯ ವಿಠಲ ದೇವಸ್ಥಾನದಿಂದ ಆರಂಭಗೊಂಡು ಕಮಲಾಪುರ, ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನ, ಕಡ್ಡಿರಾಂಪುರ, ಮಲಪನಗುಡಿ, ಕನಕದಾಸವೃತ್ತ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ವೃತ್ತ, ಅಂಬೇಡ್ಕರ್ ವೃತ್ತ, ವಿಎನ್ಸಿ ಕಾಲೇಜು, ಸಾಯಿಬಾಬಾ ಸರ್ಕಲ್, ಗುರು ಪಿಯು ಕಾಲೇಜು, ರಾಷ್ಡ್ರೀಯ ಹೆದ್ದಾರಿ ಮೂಲಕ ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರು ವಿಧಾನಸೌಧ ತಲುಪಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ತಿಳಿಸಿದ್ದಾರೆ.
Next Story