ಹೊಸಪೇಟೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ

ಹೊಸಪೇಟೆ : ನಗರಸಭೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ನಗರದ ನಗರಸಭೆ ಕಾರ್ಯಾಲಯದ ಎದುರು ಪೌರಕಾರ್ಮಿಕರಿಂದ ಎರಡನೇ ದಿನವೂ ಪ್ರತಿಭಟನಾ ಧರಣಿ ನಡೆಯಿತು. ಈ ವೇಳೆ ರಾಜ್ಯದ ಮಹಾನಗರ ಪಾಲಿಕೆ ನಗರಸಭೆ ಮತ್ತು ಪುರಸಭೆ ಅಡಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕೆಂದು ಪೌರಕಾರ್ಮಿಕ ನೌಕರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ವಿಜಯನಗರ ಜಿಲ್ಲಾಧ್ಯಕ್ಷ ನಾಗೇಂದ್ರವರ್ಮ, ಸಲ್ಮಾನ್, ಕೆ.ಶೇಷಣ್ಣ, ಎಮ್.ರಾಘವೇಂದ್ರ, ಎಸ್.ಸುರೇಶ್ ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.
ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಪಾರವಾದದ್ದು, ಪೌರಕಾರ್ಮಿಕರಿಲ್ಲದೆ ನಗರದ ಸೌಂದರ್ಯೀಕರಣ ಅಸಾಧ್ಯ ಪೌರಕಾರ್ಮಿಕರ ಸರ್ವಾಂಗೀಣ ಅಭಿವೃದ್ದಿಗೆ ನಮ್ಮ ಸರಕಾರ ಬದ್ಧ. ಅವರು ಎದುರಿಸುತ್ತಿರುವ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಯತ್ನಿಸುತ್ತೇನೆ.
-ಹೆಚ್ ಆರ್ ಗವಿಯಪ್ಪ ( ಶಾಸಕರು ವಿಜಯನಗರ)