ವಿಜಯನಗರ | ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕಾರ್ಯಾವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ | PC: Grok
ವಿಜಯನಗರ(ಹೊಸಪೇಟೆ) : ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿನ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ ಮನೆ-ಮನೆ ಸಮೀಕ್ಷೆ ಮೇ 29ರವರೆಗೆ, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆಯನ್ನು ಮೇ30 ರಿಂದ ಜೂ1ರವರೆಗೆ ಹಾಗೂ ಸ್ವಯಂ ಘೋಷಣೆ ಜೂ1 ರವರೆಗೆ ಅವಧಿಯನ್ನು ಮರು ನಿಗಧಿಪಡಿಸಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ವಿಜಯನಗರ ಹಾಗೂ ವಿಧಾನಸಭಾ ಕ್ಷೇತ್ರವಾರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ. ಸಮೀಕ್ಷೆಯ ಕುರಿತು ಯಾವುದೇ ಮಾಹಿತಿ ಪಡೆಯಲು ವಿಜಯನಗರ ಜಿಲ್ಲೆಯ ನೋಡಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ಮೊ.9141827465, ವಿಜಯನಗರ ರಮೇಶ್ 8095002829, ಹೊಸಪೇಟೆ ನಜೀಮಾ ಭಾನು 9108777499, ಹಗರಿಬೊಮ್ಮನಹಳ್ಳಿ ಆನಂದ.ವೈ.ಡೊಳ್ಳಿನ 9901980762, ಕೂಡ್ಲಿಗಿ ಶಾಹೇಖಾ ಅಹ್ಮದಿ 8105909630, ಹಡಗಲಿಯ ಜ್ಯೋತಿ 9482608061, ಹರಪನಹಳ್ಳಿ ಗಂಗಪ್ಪ.ಎಸ್.ಆರ್ 9739094433 ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.