ವಿಜಯನಗರ | ಮೇ 28ರಂದು ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ
ವಿಜಯನಗರ(ಹೊಸಪೇಟೆ) : ನಗರದ ಟಿಎಂಎಇ ಸಂಸ್ಥೆಯ ಸ್ಕೂಲ್ ಮತ್ತು ಕಾಲೇಜ್ ಅಫ್ ನರ್ಸಿಂಗ್ ನಲ್ಲಿ ಮೇ 28 ರಂದು, ಬೆಳಗ್ಗೆ 10 ಗಂಟೆಗೆ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಅನಿಲ್ ಕುಮಾರ್ ಜಿ. ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಟಿಎಂಎಇ ಸಂಸ್ಥೆಯ ಸ್ಕೂಲ್ ಮತ್ತು ಕಾಲೇಜ್ ಅಫ್ ನರ್ಸಿಂಗ್ ನಡೆಯಲಿರುವ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ ಉದ್ಘಾಟಿಸಲಿದ್ದಾರೆ.
ಟಿಎಂಎಇ ಸಂಸ್ಥೆ ನಿರ್ದೇಶಕ ಡಾ.ಟಿ.ಎಂ.ಶಿವಶಂಕರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತಾವಿಕ ನುಡಿ ಹಾಗೂ ಮನೋವೈದ್ಯರಾದ ಡಾ.ಅನಿಲ್ ಕುಮಾರ್ ಜಿ. ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಟಿಎಂಎಇ ಸಂಸ್ಥೆಯ ಪ್ರಾಂಶುಪಾಲ ಡಾ.ಸೋಮಶೇಖರ್ ಎನ್., ಆರ್ ಸಿ ಹೆಚ್ ಅಧಿಕಾರಿ ಡಾ.ಜಂಬಯ್ಯ, ಡಾ.ಸತೀಶ್ ಚಂದ್ರ, ಡಾ.ವಿನಯ್, ಡಾ.ಭಾಸ್ಕರ್ ಡಿ., ಡಾ.ಷಣ್ಮುಖ ನಾಯ್ಕ, ಟಿಹೆಚ್ ಒ ಡಾ.ವಿನೋದ್ ಆಗಮಿಸಲಿದ್ದಾರೆ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡಮನಿ.ಎಂ.ಪಿ, ಸಾಮಾಜಿಕ ಕಾರ್ಯಕರ್ತ ಮಾರೇಶ್.ಜಿ ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.