ವಿಜಯಪುರ | ಕೆನರಾ ಬ್ಯಾಂಕ್ಗೆ ನುಗ್ಗಿ ಕಳ್ಳತನ

ವಿಜಯಪುರ : ಬ್ಯಾಂಕ್ಗೆ ನುಗ್ಗಿ ಕಳ್ಳತನ ಮಾಡಿರುವಂತಹ ಘಟನೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಶನಿವಾರ (ಮೇ.24) ತಡರಾತ್ರಿ ಘಟನೆ ನಡೆದಿದ್ದು, ರವಿವಾರ ರಜೆ ಇದ್ದ ಹಿನ್ನೆಲೆಯಲ್ಲಿ ಬೆಳಿಗ್ಗೆ ಸಿಬ್ಬಂದಿ ಬ್ಯಾಂಕ್ಗೆ ಬಂದಿರಲಿಲ್ಲ. ದುಷ್ಕರ್ಮಿಗಳು ಕೆನರಾ ಬ್ಯಾಂಕ್ನ ಮುಂಭಾಗದ ಬಾಗಿಲಿನ ಕೀ ಮುರಿದು ಒಳ ಹೋಗಿದ್ದರು. ಒಳ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇನ್ನು, ಕಳ್ಳತನವಾದ ಸುದ್ದಿ ತಿಳಿದು ಬ್ಯಾಂಕ್ ಸಿಬ್ಬಂದಿ, ಶ್ವಾನದಳ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
Next Story