Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಸ್ ನಿಲ್ದಾಣ ಶೌಚಾಲಯದಲ್ಲಿ ಅಕ್ರಮ ವಸೂಲಿ

ಬಸ್ ನಿಲ್ದಾಣ ಶೌಚಾಲಯದಲ್ಲಿ ಅಕ್ರಮ ವಸೂಲಿ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ6 Sept 2025 2:38 PM IST
share
ಬಸ್ ನಿಲ್ದಾಣ ಶೌಚಾಲಯದಲ್ಲಿ ಅಕ್ರಮ ವಸೂಲಿ
3 ರೂ. ದರಕ್ಕೆ 10 ರೂ. ದಂಧೆ!

ಯಾದಗಿರಿ, ಸೆ5: ನಗರ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಅಧಿಕ ದರ ವಸೂಲಿ ನಡೆಯುತ್ತಿದ್ದು, ದಿನನಿತ್ಯ ಪ್ರಯಾಣಿಕರಿಂದ 3 ರೂಪಾಯಿಯ ಬದಲು 10 ರೂಪಾಯಿ ವಸೂಲಿ ಮಾಡುತ್ತಿರುವುದು ದಿನದಿಂದ ದಿನಕ್ಕೆ ವಸೂಲಿ ಜೋರಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.

ಜಿಲ್ಲೆಯ ಬಸ್ ನಿಲ್ದಾಣ ಶೌಚಾಲಯದಲ್ಲಿ ನಡೆಯುತ್ತಿರುವ ಶೌಚಾಲಯದ ದರದಲ್ಲಿ ಗೋಲ್ ಮಾಲ್ ನಡೆಯುತ್ತಿದ್ದು, ಸರಕಾರ ನಿಗದಿಪಡಿಸಿದ ಶುಲ್ಕ 3 ರೂ. ಇದ್ದರೂ, ಸಾರ್ವಜನಿಕರಿಂದ 10 ರೂ.ವರೆಗೆ ಬಲವಂತವಾಗಿ ವಸೂಲಿ ಮಾಡಲಾಗುತ್ತಿದೆ. ಈ ಅಕ್ರಮದ ಬಗ್ಗೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಇದಕ್ಕೆ ಜಿಲ್ಲಾಡಳಿತದ ಮೌನ ಪ್ರಶ್ನೆಗೆ ಗುರಿಯಾಗಿದೆ.

ಪ್ರಯಾಣಿಕರ ಸೌಕರ್ಯಕ್ಕಾಗಿ ಸರಕಾರ ಶೌಚಾಲಯದ ದರವನ್ನು ಕೇವಲ 3 ರೂಪಾಯಿಯಷ್ಟೇ ನಿಗದಿ ಪಡಿಸಿದೆ. ಆದರೆ ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ಯಾವುದೇ ರಸೀದಿ ನೀಡದೇ 10 ರೂಪಾಯಿ ವಸೂಲಿ ಮಾಡುತ್ತಿರುವುದರಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಾರಿಗೆ ಇಲಾಖೆಯ ನಿರ್ಲಕ್ಷ್ಯವನ್ನು ಜನರು ತೀವ್ರವಾಗಿ ಟೀಕಿಸಿದ್ದು ಶೌಚಾಲಯವನ್ನು ಗುತ್ತಿಗೆಯ ಆಧಾರದ ಮೇಲೆ ಕೊಟ್ಟವರ ಮೇಲೆ ಯಾವುದೇ ರೀತಿಯು ಕಾನೂನು ಕ್ರಮವಿಲ್ಲ ಎಂದು ದೂರುತ್ತಿದ್ದಾರೆ.

ಸ್ಥಳೀಯರು ಹೇಳುವಂತೆ, ಬಸ್ ನಿಲ್ದಾಣದಲ್ಲಿ ಪ್ರತಿದಿನ ಸಾವಿರಾರು ಮಂದಿ ಓಡಾಟ ಮಾಡುತ್ತಾರೆ. ಇಷ್ಟೊಂದು ಜನರಿಗೆ ಮೂಲಸೌಕರ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರಿಸುತ್ತಿರುವುದು ವಿಷಾದನೀಯ.

ಮಹಿಳೆಯರು ಹಾಗೂ ವಯೋವೃದ್ಧರಿಗೆ ಇದು ಮತ್ತಷ್ಟು ತೊಂದರೆಯಾಗಿದೆ. ಪ್ರತೀ ಬಾರಿ 10 ರೂಪಾಯಿ ಕಟ್ಟುವುದು ಅವರಿಗೆ ಭಾರವಾಗುತ್ತಿದೆ. ‘‘ಸರಕಾರಿ ದರದಲ್ಲಿ ಸೌಲಭ್ಯ ದೊರೆಯಬೇಕಾದರೆ, ನಾವೇಕೆ ಹೆಚ್ಚಾಗಿ ಹಣ ಕೊಡಬೇಕು?’’ ಎಂಬುದಾಗಿ ಪ್ರಶ್ನಿಸುತಿದ್ದಾರೆ.

ಇನ್ನು ಕೆಲವರು ಈ ಅಕ್ರಮದ ಹಿಂದೆ ಪ್ರಭಾವಿ ಜನರ ಬೆಂಬಲ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ‘‘ಅಧಿಕಾರಿಗಳ ಆಶ್ರಯ ಇಲ್ಲದೆ ಅಕ್ರಮದಂಧೆ ನಡೆಯುವುದು ಅಸಾಧ್ಯ’’ ಎಂದು ಪ್ರಯಾಣಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚುವರಿ ಹಣ ವಸೂಲು ಮಾಡುತ್ತಿರುವುದನ್ನು ಕೆಲವರು ಮೊಬೈಲ್‌ನಲ್ಲಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿರುವುದು ವರದಿಯಾಗಿದ್ದು, ಇದರಿಂದ ವಿಷಯ ಹೆಚ್ಚು ಜನರ ಗಮನ ಸೆಳೆದಿದೆ.

ಸರಕಾರದ ದರ 3 ರೂ. ಇದೆ. 10 ರೂ. ತೆಗೆದುಕೊಳ್ಳುವುದು ನಮ್ಮ ಗಮನಕ್ಕೆ ಬಂದಿದೆ. ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ನೋಟಿಸ್ ಕಳುಹಿಸಿದ್ದರೂ ಮತ್ತೆ ಅದೇ ರೀತಿ ಮುಂದುವರಿಸಿದ್ದಾರೆ. ಈ ಪ್ರಕರಣವನ್ನು ನಾನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವೆ.

-ಶಶಾಂಕ್, ಬಸ್ ಡಿಪೊ ವ್ಯವಸ್ಥಾಪಕ

ಪ್ರತಿ ದಿನ ನಮ್ಮ ಬಳಿ ಹೆಚ್ಚುವರಿ ದರ ತೆಗೆದುಕೊಳ್ಳುವುದು ದೊಡ್ಡ ವಸೂಲಿ ದಂಧೆಯಾಗಿದೆ. ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಮೌನ ವಹಿಸಿರುವುದು ಬೇಸರದ ಸಂಗತಿ. ಅಧಿಕಾರಿಗಳು ಬಂದು ನೋಡಿದಾಗ ಮಾತ್ರ ನಿಗದಿತ ದರ ಪಾಲನೆ ಮಾಡುತ್ತಾರೆ. ಆದರೆ ಅವರು ಹಿಂದಿರುಗಿದ ತಕ್ಷಣ ಮತ್ತೆ ಗೋಲ್ ಮಾಲ್ ಆರಂಭವಾಗುತ್ತದೆ.

-ರಾಹುಲ್, ಸಾರ್ವಜನಿಕ

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X