Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರವಾಸಿಗರನ್ನು ಸೆಳೆಯುತ್ತಿದೆ...

ಪ್ರವಾಸಿಗರನ್ನು ಸೆಳೆಯುತ್ತಿದೆ ಚಿತ್ತಾಪುರದ ಲುಂಬಿನಿ ಉದ್ಯಾನವನ

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ1 Sept 2025 8:39 AM IST
share
ಪ್ರವಾಸಿಗರನ್ನು ಸೆಳೆಯುತ್ತಿದೆ ಚಿತ್ತಾಪುರದ ಲುಂಬಿನಿ ಉದ್ಯಾನವನ
► 17 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ಪಾರ್ಕ್ ► ಆಕರ್ಷಕ ಚಿಟ್ಟೆ ಪಾರ್ಕ್, ಗ್ರಂಥಾಲಯ, ಬಯಲು ರಂಗಮಂದಿರ

ಕಲಬುರಗಿ: ಇಲ್ಲಿನ ಚಿಂಚೋಳಿ ವನ್ಯಜೀವಿ ಧಾಮ, ಜಲಪಾತಗಳು, ದೇವಸ್ಥಾನ, ದರ್ಗಾ, ಜಾಮಿಯಾ ಮಸೀದಿ, ಬೌದ್ಧ ವಿಹಾರ, ಐತಿಹಾಸಿಕ ಕಟ್ಟಡಗಳು ಸೇರಿದಂತೆ ವಿವಿಧ ಪ್ರವಾಸಿ ತಾಣಗಳು ರಾಜ್ಯದ, ಹೊರ ರಾಜ್ಯ, ವಿದೇಶಿ ಪ್ರವಾಸಿಗರಿಗೆ ‘ಹಾಟ್ ಸ್ಪಾಟ್’ ಕೇಂದ್ರಗಳಾಗಿ ಆಕರ್ಷಿಸುತ್ತಿವೆ. ಅದರ ಜೊತೆಗೆ ಇತ್ತೀಚೆಗೆ ಕಣ್ಮನ ಸೆಳೆಯುತ್ತಿರುವ ಚಿತ್ತಾಪುರದ ಲುಂಬಿನಿ ಉದ್ಯಾನವನ ಕೂಡ ಪ್ರವಾಸಿಗರನ್ನು ಸೆಳೆಯುತ್ತಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಸಮೀಪ ನಿರ್ಮಾಣಗೊಂಡಿರುವ ಲುಂಬಿನಿ ಪಾರ್ಕ್ ಪ್ರವಾಸಿಗರು, ಸಾರ್ವಜನಿಕರು, ಕಲಾವಿದರನ್ನು ಸೇರಿದಂತೆ ಮಕ್ಕಳನ್ನೂ ಕೈ ಬೀಸಿ ಕರೆಯುತ್ತಿದೆ. ಸುಮಾರು 17 ಎಕರೆ ವಿಸ್ತಾರದ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಆಕರ್ಷಕ ಲುಂಬಿನಿ ಉದ್ಯಾನವನ ತನ್ನ ಚಿತ್ತಾಕರ್ಷಕ ಮರಗಿಡಗಳಿಂದ, ಹೂ ಬಳ್ಳಿಗಳಿಂದ, ಸಣ್ಣಗೆ ಹರಿಯುವ ಝರಿಯಿಂದಾಗಿ ಪರಿಸರ ಪ್ರೇಮಿಗಳನ್ನೂ ಸ್ವಾಗತಿಸುತ್ತಿದೆ.

ಲುಂಬಿನಿ ಉದ್ಯಾನವನದಲ್ಲೇನಿವೆ? :

ಅಂದಾಜು 2.14 ಕೋಟಿ ರೂ. ವೆಚ್ಚದಲ್ಲಿ ಸುಮಾರು 17 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಪಾರ್ಕ್‌ನಲ್ಲಿ ಸಾಂಸ್ಕೃತಿಕ, ಕಲೆ, ಸಾಹಿತ್ಯ ಹಾಗೂ ರಂಗಚಟುವಟಿಕೆಗಳಿಗಾಗಿ ಬಯಲು ರಂಗಮಂದಿರ ನಿರ್ಮಾಣ ಮಾಡಲಾಗಿದೆ, ಪುಟ್ಟ ಗ್ರಂಥಾಲಯ, ಚಿಟ್ಟೆ ಪಾರ್ಕ್, 50 ಸ್ಥಳೀಯ ಜಾತಿಯ 2,000ಕ್ಕೂ ಅಧಿಕ ಸಸಿ ನೆಟ್ಟು ಮಿಯಾವಾಕಿ ಅರಣ್ಯ ನಿರ್ಮಾಣ, ವನ್ಯಜೀವಿ ಮೂರ್ತಿಗಳು, ಮಕ್ಕಳಿಗೆ ಆಟವಾಡಲು ಬೇಕಾಗುವ ಜೋಕಾಲಿ, ಜಾರುಬಂಡಿ ಮುಂತಾದ ಆಟೋಪಕರಣಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಶುದ್ಧ ಕುಡಿಯುವ ನೀರು, ಶೌಚಾಲಯ ಇತ್ಯಾದಿ ಸೌಲಭ್ಯ ಒದಗಿಸಲಾಗಿದೆ. ಕಲಬುರಗಿ ನಗರದಿಂದ ಸೇಡಂ ಪಟ್ಟಣಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಸುಮಾರು 25 ಕಿ.ಮೀ. ಸಾಗಿದರೆ ಗುಂಡಗುರ್ತಿ ಗ್ರಾಮದ ಸಮೀಪ ಈ ಉದ್ಯಾನವನ ನೋಡಬಹುದು.

ಚಿಟ್ಟೆ ಪಾರ್ಕ್ ಪ್ರಮುಖ ಆಕರ್ಷಣೆ :

ಚಿಟ್ಟೆ ವನ ಈ ಲುಂಬಿನಿ ಉದ್ಯಾನದವನ ಪ್ರಮುಖ ಆಕರ್ಷಣೆಯಾಗಿದೆ. ಇದು ಕೂಡಾ ಚಿಟ್ಟೆ ಆಕಾರದಲ್ಲಿಯೇ ನಿರ್ಮಾಣ ಮಾಡಲಾಗಿದೆ. 51 ವಿಭಿನ್ನ ಪ್ರಭೇದದ ಚಿಟ್ಟೆಗಳನ್ನು ತಂದು ಇಲ್ಲಿ ಬಿಡಲಾಗಿದೆ. ಇಲ್ಲಿನ ಚಿಟ್ಟೆಗಳಿಗೆ ಆಹಾರ ಒದಗಿಸಲು ಹಾಗೂ ಸಂತಾನೋತ್ಪತ್ತಿಗೆ ಸಹಕಾರಿಯಾಗಲು ಅನುಕೂಲವಾಗುವಂತ ಹೋಸ್ಟ್ ಹಾಗೂ ನೆಕ್ಟರ್ ಜಾತಿಯ ಗಿಡಗಳನ್ನು ಆಂಧ್ರಪ್ರದೇಶದ ರಾಜಮಂಡ್ರಿಯಿಂದ ತರಿಸಿ ನೆಡಲಾಗಿದೆ. ಉದ್ಯಾನವನಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಮೃಗಾಲಯದಲ್ಲಿ ಲಭ್ಯವಿರುವ ವನ್ಯಜೀವಿಗಳ ಪರಿಕಲ್ಪನೆ ಮೂಡಿಸಲು ಅದೇ ಮಾದರಿಯ ಚಿರತೆ, ಜಿಂಕೆ, ನವಿಲು, ಕರಡಿ, ಕೃಷ್ಣಮೃಗ ಸೇರಿದಂತೆ ಬೇರೆ ಬೇರೆ ಪ್ರಾಣಿಗಳ ಮೂರ್ತಿಗಳನ್ನು ನಿರ್ಮಾಣ ಮಾಡಲಾಗಿದೆ. ಇದು ವನ್ಯಜೀವಿಗಳ ಬಗ್ಗೆ ಪ್ರವಾಸಿಗರಿಗೆ ಅರಿವು ಮೂಡಿಸುವುದರ ಜೊತೆಗೆ ಅವುಗಳ ಸಂರಕ್ಷಣೆಯ ಮಹತ್ವವನ್ನು ತಿಳಿಸುವ ಉದ್ದೇಶ ಹೊಂದಲಾಗಿದೆ.

ಪ್ರಿಯಾಂಕ್ ಖರ್ಗೆ ಕನಸಿನ ಪುಟ್ಟ ಗ್ರಂಥಾಲಯ :

ವಿದ್ಯೆ, ಓದಿಗೆ ಹಾಗೂ ಜ್ಞಾನಾರ್ಜನೆಗೆ ಪುಸ್ತಕಗಳು ಅತ್ಯವಶ್ಯ ಎಂದು ಬಲವಾಗಿ ಪ್ರತಿಪಾದಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಕನಸಿನಂತೆ ಉದ್ಯಾನವನದಲ್ಲಿ ಪುಟ್ಟ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿ ಎಲ್ಲ ತರದ ಪುಸ್ತಕಗಳನ್ನು ಇರಿಸಲಾಗಿದ್ದು, ಪ್ರವಾಸಿಗರು ಸುಂದರ ಪರಿಸರದ ಸವಿಯ ಜೊತೆಗೆ ಜ್ಞಾನದ ಹಸಿವನ್ನು ನೀಗಿಸಿಕೊಳ್ಳುಲು ಅನುಕೂಲವಾಗುವಂತೆ ಈ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ. ಸಚಿವರು ತಮ್ಮ ಭೇಟಿಗೆ ಬರುವವರಿಂದ ಉಡುಗೊರೆಯಾಗಿ ಪಡೆದ ಪುಸ್ತಕಗಳನ್ನು ಇಲ್ಲಿಗೆ ನೀಡಿದ್ದಾರೆ.

ಲುಂಬಿನಿ ಉದ್ಯಾನವನದಲ್ಲಿ ಚಿಟ್ಟೆ ಪಾರ್ಕ್, ಗ್ರಂಥಾಲಯ, ವಿಭಿನ್ನ ಬಗೆಯ ಮರಗಿಡಗಳು, ಹೂವುಗಳು ಇತ್ಯಾದಿ ಪ್ರವಾಸಿಗರ ಮನಸೆಳೆಯುತ್ತವೆ. ಸುಸಜ್ಜಿತ ಹಾಗೂ ಸುಂದರ ಉದ್ಯಾನವನ ನಿರ್ಮಾಣದ ಕನಸು ನನಸಾಗಿದೆ.

-ಪ್ರಿಯಾಂಕ್ ಖರ್ಗೆ, ಕಲಬುರಗಿ ಉಸ್ತುವಾರಿ ಸಚಿವ

ಲುಂಬಿನಿ ಉದ್ಯಾನವನಕ್ಕೆ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಜಿಲ್ಲಾಡಳಿತ ಮತ್ತಷ್ಟು ಸೌಲಭ್ಯಗಳನ್ನು ಬೇಡಿಕೆಗೆ ಅನುಗುಣವಾಗಿ ಒದಗಿಸಲಿದೆ.

-ಫೌಝಿಯಾ ತರನ್ನುಮ್, ಜಿಲ್ಲಾಧಿಕಾರಿ

ಲುಂಬಿನಿ ಉದ್ಯಾನವನಕ್ಕೆ ಪ್ರತಿನಿತ್ಯ ಸುಮಾರು 100ಕ್ಕೂ ಅಧಿಕ ಪ್ರವಾಸಿಗರು, ವೀಕ್ಷಕರು ಆಗಮಿಸಿ ಇಲ್ಲಿನ ಪರಿಸರವನ್ನು ಆಸ್ವಾದಿಸುತ್ತಿದ್ದಾರೆ. ರಜಾ ದಿನಗಳಲ್ಲಿ ಹಾಗೂ ವಾರದ ಕೊನೆಯಲ್ಲಿ ಈ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

-ಸುಮೀತ್ ಪಾಟೀಲ್, ಡಿಎಫ್‌ಒ, ಕಲಬುರಗಿ

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X