Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ಲಾಸ್ಟಿಕ್ ಬಳೆ ಮಾರುಕಟ್ಟೆಗೆ ಲಗ್ಗೆ:...

ಪ್ಲಾಸ್ಟಿಕ್ ಬಳೆ ಮಾರುಕಟ್ಟೆಗೆ ಲಗ್ಗೆ: ಸಂಕಷ್ಟದಲ್ಲಿ ಗಾಜಿನ ಬಳೆ ವ್ಯಾಪಾರಿಗಳು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.11 Aug 2025 8:15 AM IST
share
ಪ್ಲಾಸ್ಟಿಕ್ ಬಳೆ ಮಾರುಕಟ್ಟೆಗೆ ಲಗ್ಗೆ: ಸಂಕಷ್ಟದಲ್ಲಿ ಗಾಜಿನ ಬಳೆ ವ್ಯಾಪಾರಿಗಳು

ಹೊಸಕೋಟೆ: ದೇಶದ ಮಹಿಳೆಯರ ಸಾಂಪ್ರದಾಯಿಕ ಆಭರಣ ಗಾಜಿನ ಬಳೆಗಳು ಇಂದು ಮಾರುಕಟ್ಟೆಯಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳುತ್ತಿವೆ. ಲೋಹ, ಪ್ಲಾಸ್ಟಿಕ್ ಹಾಗೂ ಇತರ ವಸ್ತುಗಳಿಂದ ತಯಾರಿಸಿದ ಬಳೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿರುವುದರಿಂದ ಗಾಜಿನ ಬಳೆಗಳ ವ್ಯಾಪಾರ ತೀವ್ರ ಕುಸಿತ ಕಂಡಿದೆ.

ಗಾಜಿನ ಬಳೆ ತಯಾರಿಕೆ ಮತ್ತು ಮಾರಾಟವು ಬಳೆಬಣಜಿಗರಿಗೆ ಶತಮಾನಗಳಿಂದ ಕುಲಕಸುಬಾಗಿದ್ದು, ಅವರ ಜೀವನೋಪಾಯಕ್ಕೆ ಆಧಾರವಾಗಿತ್ತು. ಆದರೆ, ಇತ್ತೀಚೆಗೆ ಇತರ ವರ್ಗದವರೂ ಈ ವ್ಯಾಪಾರಕ್ಕೆ ಪ್ರವೇಶಿಸಿರುವುದು ಸಾಂಪ್ರದಾಯಿಕ ವ್ಯಾಪಾರಿಗಳಿಗೆ ಭಾರೀ ಹೊಡೆತ ನೀಡಿದೆ. ವ್ಯಾಪಾರ ಕುಸಿತದಿಂದಾಗಿ ಇವರ ಬದುಕು ಕಷ್ಟಕರವಾಗಿದೆ.

ಕೆಲವು ಕಾರ್ಖಾನೆಗಳು, ಹೋಟೆಲ್‌ಗಳು ಸಹಿತ ಇತರೆಡೆಗಳಲ್ಲಿ ಗಾಜಿನ ಬಳೆಗಳಿಗೆ ನಿಷೇಧವಿರುವುದು ಅವುಗಳ ಬೇಡಿಕೆಯನ್ನು ಕಡಿಮೆ ಮಾಡಿದೆ. ಜೊತೆಗೆ, ಪ್ಲಾಸ್ಟಿಕ್ ಮತ್ತು ಲೋಹದ ಬಳೆಗಳೊಂದಿಗೆ ಬೆಲೆ, ವೈವಿಧ್ಯಮಯ ವಿನ್ಯಾಸ ಮತ್ತು ಬಾಳಿಕೆಯ ವಿಷಯದಲ್ಲಿ ಸ್ಪರ್ಧಿಸಲು ಗಾಜಿನ ಬಳೆಗಳು ವಿಫಲವಾಗಿವೆ. ಹೊಲಗದ್ದೆಗಳಲ್ಲಿ ದುಡಿಯುವ ರೈತ ಮಹಿಳೆಯರೂ ಗಾಜಿನ ಬಳೆಗಳು ಒಡೆಯುವ ಭೀತಿಯಿಂದ ಅವುಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಮದುವೆ, ಹಬ್ಬ, ಹರಿದಿನಗಳಂತಹ ಶುಭ ಸಮಾರಂಭಗಳಲ್ಲಿ ಮಾತ್ರ ಶಾಸ್ತ್ರ ಮತ್ತು ಸಂಪ್ರದಾಯಕ್ಕಾಗಿ ಗಾಜಿನ ಬಳೆಗಳನ್ನು ಧರಿಸುತ್ತಿದ್ದಾರೆ.

ಗಾಜಿನ ಬಳೆಗಳ ಬೆಲೆ ಹೆಚ್ಚಾಗಿದ್ದು, ಬೇಡಿಕೆ ಕುಸಿದಿರುವುದರಿಂದ ವ್ಯಾಪಾರ ಕಡಿಮೆ ಆಗಿದೆ. ಅಂಗಡಿಗಳಿಗೆ ದುಬಾರಿ ಬಾಡಿಗೆ ಭರಿಸಲು ಸಾಧ್ಯವಾಗದೆ, ಅನೇಕ ಗಾಜಿನ ಬಳೆ ವ್ಯಾಪಾರಿಗಳು ಬೀದಿಬದಿಯಲ್ಲೇ ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಆದರೆ, ಸ್ಥಳೀಯ ಆಡಳಿತ ಸಂಸ್ಥೆಗಳು ಮತ್ತು ಪೊಲೀಸರು ಆಗಾಗ್ಗೆ ಇವರನ್ನು ತೆರವುಗೊಳಿಸುವುದರಿಂದ ತೀವ್ರ ತೊಂದರೆಯಾಗುತ್ತಿದೆ ಎಂಬುದು ವ್ಯಾಪಾರಿಗಳ ಅಳಲಾಗಿದೆ.

ಗಾಜಿನ ಬಳೆ ಉತ್ಪಾದಕರಿಗೆ ಮತ್ತು ಮಾರಾಟಗಾರರಿಗೆ ಸರಕಾರದಿಂದ ಯಾವುದೇ ಪ್ರತ್ಯೇಕ ಸಾಲ ಸೌಲಭ್ಯ, ಪ್ರೋತ್ಸಾಹ ಧನ ಅಥವಾ ಇತರ ಸೌಲಭ್ಯಗಳು ಸಿಗದಿರುವುದು ವ್ಯಾಪಾರ ಕುಸಿತಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಗಾಜಿನ ಬಳೆ ಉದ್ಯಮ ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟದಲ್ಲಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ, ಮುಂದೊಂದು ದಿನ ಗಾಜಿನ ಬಳೆ ಉದ್ಯಮ ಸಂಪೂರ್ಣವಾಗಿ ನಶಿಸಿ ಹೋಗುವ ಸಾಧ್ಯತೆಯಿದೆ. ಆದ್ದರಿಂದ, ಸರಕಾರ ಈ ಉದ್ಯಮವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕದೆ.

ಬಳೆ ವ್ಯಾಪಾರ ನಮ್ಮ ಕುಲಕಸುಬು. ನನ್ನ ತಾತ, ತಂದೆ ಕೂಡ ಬಳೆ ವ್ಯಾಪಾರ ಮಾಡುತ್ತಿದ್ದರು. ನನಗೆ 80 ವರ್ಷ ಆಗಿದ್ದು ಈಗಲೂ ವ್ಯಾಪಾರ ಮಾಡುತ್ತಿದ್ದೇನೆ. ಆದರೆ, ಗ್ರಾಹಕರು ಕಡಿಮೆಯಾಗುತ್ತಿರುವ ಕಾರಣ ನಮ್ಮ ಮಕ್ಕಳು, ಮೊಮ್ಮಕ್ಕಳು ವ್ಯಾಪಾರ ಮಾಡುತ್ತಿಲ್ಲ.

-ಅಕ್ಕಯಮ್ಮ, ಬಳೆ ವ್ಯಾಪಾರಿ ಸೂಲಿಬೆಲೆ

ಗಾಜಿನ ಬಳೆಗಳು ಹೆಚ್ಚಾಗಿ ಗುಜರಾತ್, ಫಿರೋಝಾಬಾದ್‌ನಲ್ಲಿ ತಯಾರಾಗುತ್ತವೆ. ನಾವು ಹೋಲ್‌ಸೇಲ್ ದರದಲ್ಲಿ ಖರೀದಿಸಿದರೂ ಉತ್ಪಾದನಾ ಮತ್ತು ಸಾಗಾಟ ವೆಚ್ಚ ಹೆಚ್ಚಾಗುತ್ತದೆ. ಸಾಗಾಟದಲ್ಲಿ ಬಳೆಗಳು ಒಡೆಯುವ ಕಾರಣದಿಂದಾಗಿ ಬೆಲೆ ಹೆಚ್ಚಾಗಿದ್ದು, ಪರ್ಯಾಯವಾಗಿ ಅಗ್ಗದ ಬೆಲೆಗೆ ಲೋಹ ಮತ್ತು ಪ್ಲಾಸ್ಟಿಕ್ ಬಳೆಗಳತ್ತ ಗ್ರಾಹಕರು ಮಾರು ಹೋಗಿದ್ದಾರೆ.

-ಮುಬಾರಕ್, ಬಳೆ ವ್ಯಾಪಾರಿ

ಹೊಲ ತೋಟಗಳಲ್ಲಿ ಕೆಲಸ ಮಾಡುವಾಗ ಗಾಜಿನ ಬಳೆ ಒಡೆದು ಹೋಗುವುದಲ್ಲದೆ, ಗಾಜಿನ ಬಳೆ ಸ್ವಲ್ಪ ದುಬಾರಿಯಾದ ಕಾರಣ ದಿನನಿತ್ಯ ಪ್ಲಾಸ್ಟಿಕ್ ಮತ್ತು ಲೋಹದ ಬಳೆಗಳನ್ನು ಬಳಸುತ್ತೇವೆ. ಹಬ್ಬ ಹರಿದಿನ ಮದುವೆಗಳಲ್ಲಿ ಮಾತ್ರ ಗಾಜಿನ ಬಳೆ ಬಳಸುತ್ತೇವೆ.

-ರಂಜಿತಾ, ಗೃಹಿಣಿ




share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X