Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಭದ್ರತೆಯ ದೃಷ್ಟಿಯಿಂದ ಬದಲಿಸಬೇಕಿದೆ...

ಭದ್ರತೆಯ ದೃಷ್ಟಿಯಿಂದ ಬದಲಿಸಬೇಕಿದೆ ತುಂಗಭದ್ರಾ ಜಲಾಶಯದ ಆರು ಗೇಟ್‌ಗಳು

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು15 Aug 2025 11:29 PM IST
share
ಭದ್ರತೆಯ ದೃಷ್ಟಿಯಿಂದ ಬದಲಿಸಬೇಕಿದೆ ತುಂಗಭದ್ರಾ ಜಲಾಶಯದ ಆರು ಗೇಟ್‌ಗಳು

ಕೊಪ್ಪಳ, ಆ.15: ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್ ನಂ. 19 ಮುರಿದು ಒಂದು ವರ್ಷವಾದರೂ ಈವರೆಗೆ ಅದನ್ನು ಸರಿಪಡಿಸಲಾಗಿಲ್ಲ, ಈ ನಡುವೆ ಇನ್ನೊಂದು ಆಘಾತಕಾರಿ ಅಂಶ ಹೊರಬಂದಿದ್ದು, ಜಲಾಶಯದ ಅರು ಗೇಟ್‌ಗಳು ಸವೆತದಿಂದ ಬಾಗಿದ್ದು (ಬೆಂಡ್) ಅದನ್ನು ಒಂದು ವೇಳೆ ಮೇಲೆತ್ತಲು ಪ್ರಯತ್ನಿಸಿದರೆ ಜಲಾಶಯಕ್ಕೆ ಹಾನಿ ಆಗುವ ಸಂಭವ ಇದೆ ಎಂಬ ಮಾಹಿತಿ ಹೊರ ಬಂದಿದೆ.

ಕಳೆದ ವರ್ಷ ಟಿಬಿ ಡ್ಯಾಂನ ಕ್ರಷ್ಟ್ ಗೇಟ್ 19 ಮುರಿದಿದ್ದರಿಂದ ನಿತ್ಯ ಲಕ್ಷಂತಾರ ಕ್ಯೂಸೆಕ್ ನೀರು ಪೋಲಾಗಿತ್ತು. ಮುರಿದ ಗೇಟ್‌ನ್ನು ಸರಿಪಡಿಸುವ ಸಲುವಾಗಿ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹಿಸಲಾಗುತ್ತಿಲ್ಲ, ಓಳಹರಿವಿನಿಂದ ಬಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ಕಾರಣದಿಂದ ರೈತರಿಗೆ ಒಂದೇ ಬೆಳೆಗೆ ನೀರು ಇದ್ದು, ಎರಡನೇ ಬೆಳೆಗೆ ಬೇಕಾಗುವ ನೀರು ಜಲಾಶಯದಲ್ಲಿ ಸಂಗ್ರಹಿಸಲಾಗುತ್ತಿಲ್ಲ. ಜಲಾಶಯದ ಭದ್ರತೆಯ ದೃಷ್ಠಿಯಿಂದ ಹೆಚ್ಚು ನೀರು ಸಂಗ್ರಹಿಸಲು ಸಾಧ್ಯವಾಗದ ಕಾರಣ ಮತ್ತೆ ಆರು ಗೇಟ್ ಗಳಿಗೆ ಹಾನಿಯಾಗಿರುವ ವಿಚಾರವು ರೈತರು ಆತಂಕ ಪಡುವಂತಾಗಿದೆ.

ಕೇಂದ್ರ ಸರಕಾರದ ಡ್ಯಾಂ ಸೇಪ್ಟಿ ರಿವೀವ್ ಕಮಿಟಿಯು ಜಲಾಶಯದ ಕುರಿತು ಅಧ್ಯಯನ ನಡೆಸಿ ವರದಿ ನೀಡಿದ್ದು, ಅದರಂತೆ ಗೇಟ್ ಸಂಖ್ಯೆ 11, 18, 20, 24, 27 ಮತ್ತು 28, ಸಂಖ್ಯೆಯ ಗೇಟ್‌ಗಳು ಶೇ. 35-40ರಷ್ಟು ಸವೆದಿದ್ದು, ಇದರಿಂದ ಅವುಗಳು ಹಾನಿಗೀಡಾಗಿವೆ ಎಂದು ಹೇಳಲಾಗಿದೆ. ಇವುಗಳಂತೆ ಉಳಿದ ಗೇಟ್ ಗಳು ಕೂಡ ಸವೆದಿರುವುದರಿಂದ ಎಲ್ಲ ಗೇಟ್‌ಗಳನ್ನು ಬದಲಿಸಲು ತೀರ್ಮಾನ ಮಾಡಲಾಗಿದ್ದು, ಈ ಗೇಟ್‌ಗಳನ್ನು ಬದಲಿಸಲು ಎಂಟು ತಿಂಗಳಗಳ ಕಾಲವಕಾಶ ಬೇಕಾಗಬಹುದು ಎಂಬ ಮಾಹಿತಿ ತಿಳಿದುಬಂದಿದೆ.

ಸದ್ಯ ಜಲಾಶಯದಲ್ಲಿ 80 ಟಿಎಂಸಿಗೂ ಹೆಚ್ಚು ನೀರು ಸಂಗ್ರಹಿಸದಂತೆ ತಜ್ಞರು ಹೇಳಿದ್ದು, ಹಾಗಾಗಿ ಎಷ್ಟೇ ಒಳ ಹರಿವು ಹೆಚ್ಚಾದರೂ ನೀರು ಸಂಗ್ರಹಿಸಲಾಗುತ್ತಿಲ್ಲ, ಒಂದು ಗೇಟನ್ನು ಒಂದು ವರ್ಷವಾದರೂ ಸರಿಪಡಿಸಲಾಗಿಲ್ಲ, ಆದರೆ ಈಗ ಎಲ್ಲ ಗೇಟ್ ಗಳನ್ನು ಸರಿಪಡಿಸಲು ಎಷ್ಟು ವರ್ಷ ಆಗುತ್ತೋ? ಎಂಬ ಮಾತುಗಳು ರೈತಾಪಿ ವರ್ಗದಿಂದ ಕೇಳಿಬರುತ್ತಿವೆ.

ಯಾವುದೇ ಸರಕಾರಗಳು ಆಡಳಿತದಲ್ಲಿ ಇರಲಿ, ಈ ಭಾಗದ ಜನರು, ರೈತರ ಮತ್ತು ಕಲ್ಯಾಣ ಕರ್ನಾಟಕದ ಬಗ್ಗೆ ಯಾವಾಗಲು ತಲೆ ಕೆಡೆಸಿ ಕೊಳ್ಳುವುದಿಲ್ಲ. ಒಂದು ವೇಳೆ ಕಾವೇರಿ ಜಲಾಶಯಕ್ಕೆ ಹೀಗಾಗಿದ್ದರೆ ಸರಕಾರವೇ ಅಲುಗಾಡುತ್ತಿತ್ತು ಎಂದು ರೈತರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಏನಾದರೂ ಇದರ ಬಗ್ಗೆ ರಾಜಕಾರಣಿಗಳಿಗೆ ಕೇಳಿದರೆ ಟಿಬಿ ಬೋರ್ಡ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ತುಂಗಭದ್ರಾ ಜಲಾಶಯಕ್ಕೆ ಏನಾದರೂ ಆದರೆ ಟಿಬಿ ಬೋರ್ಡ್ ನವರು ನೋಡಿಕೊಳ್ಳುತ್ತಾರೆ ಎಂದು ಹಾಲಿ-ಮಾಜಿಮಂತ್ರಿಗಳು ಹೇಳುತ್ತಾರೆ. ಆದರೆ, ಅವರು ನಿಜವಾಗಿಯೂ ತಮ್ಮ ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಾರೆ. ಆದರೆ ಜಲಾಶಯದಿಂದ ಹೂಳು ತೆಗೆಯುವುದಾಗಲಿ, ಸಮಾನಾಂತರ ಜಲಾಶಯ ನಿರ್ಮಾಣದ ಬಗ್ಗೆಯಾಗಲಿ ಒಂದು ಮಾತನ್ನು ಆಡುವುದಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ತುಂಗಭದ್ರಾ ಜಲಾಶಯದ ಎಲ್ಲ ಗೇಟ್ ಗಳನ್ನು ಬದಲಾಯಿಸಲು ತೀರ್ಮಾನ ಮಾಡಲಾಗಿದ್ದು, ಆದಷ್ಟು ಬೇಗ ಗೇಟ್‌ಗಳನ್ನು ಬದಲಾಯಿಸಲಾಗುವುದು. ಆರು ಗೇಟ್‌ಗಳು ಬೆಂಡ್ ಆಗಿದ್ದು, ಅದನ್ನು ಮೇಲಕ್ಕೆ ಎತ್ತಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಬೇರೆ ಗೇಟ್‌ಗಳನ್ನೇ ಜಾಸ್ತಿ ಮೇಲಕ್ಕೆ ಎತ್ತಿ ನೀರನ್ನು ಹರಿಸಲಾಗುತ್ತಿದೆ. ಒಂದು ವೇಳೆ 6 ಗೇಟ್‌ಗಳನ್ನು ಮೇಲಕ್ಕೆ ಎತ್ತಲು ಪ್ರಯತ್ನಿಸಿದರೆ ಜಲಾಶಯಕ್ಕೆ ಹಾನಿ ಆಗುವ ಸಾಧ್ಯತೆ ಇದೆ.

-ಶಿವರಾಜ್ ತಂಗಡಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X