Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ತುಮಕೂರು ಪ.ಜಾ.-ಪ.ಪಂಗಡದ ವಿದ್ಯಾರ್ಥಿ...

ತುಮಕೂರು ಪ.ಜಾ.-ಪ.ಪಂಗಡದ ವಿದ್ಯಾರ್ಥಿ ನಿಲಯದಲ್ಲಿ ಡ್ಯಾನ್ಸ್ ಪ್ರಕರಣ: ಮಕ್ಕಳ ರಕ್ಷಣಾ ನೀತಿ, ಮಾರ್ಗಸೂಚಿಗಳ ಉಲ್ಲಂಘನೆ

ತ್ರಿಸದಸ್ಯ ಸಮಿತಿಯ ಸತ್ಯಶೋಧನಾ ವರದಿ

ಜಿ.ಮಹಾಂತೇಶ್,ಜಿ.ಮಹಾಂತೇಶ್,29 July 2024 12:18 PM IST
share
ತುಮಕೂರು ಪ.ಜಾ.-ಪ.ಪಂಗಡದ ವಿದ್ಯಾರ್ಥಿ ನಿಲಯದಲ್ಲಿ ಡ್ಯಾನ್ಸ್ ಪ್ರಕರಣ: ಮಕ್ಕಳ ರಕ್ಷಣಾ ನೀತಿ, ಮಾರ್ಗಸೂಚಿಗಳ ಉಲ್ಲಂಘನೆ

ಬೆಂಗಳೂರು: ತುಮಕೂರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯದಲ್ಲಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಕೈ ಹಿಡಿದು ಡ್ಯಾನ್ಸ್ ಮಾಡಿದ್ದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಮತ್ತು ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುವುದು ಸಾಬೀತಾಗಿದೆ.

ತುಮಕೂರಿನ ಹಿಂದಿನ ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದ ಈ ಪ್ರಕರಣದಲ್ಲಿ ಮಕ್ಕಳ ಹಕ್ಕು ಘನತೆ, ಗುರುತು, ಸ್ವಾತಂತ್ರ್ಯ, ಗೌಪ್ಯತೆ, ನಂಬಿಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದನ್ನು ತ್ರಿಸದಸ್ಯ ಸಮಿತಿಯ ಸತ್ಯಶೋಧನಾ ವರದಿಯು ಖಚಿತಪಡಿಸಿದೆ.

ಅಲ್ಲದೇ ಇದು ಯಾವುದೂ ಒಂದು ರೀತಿಯ ಸ್ವಹಿತಾಸಕ್ತಿಯ ಉದ್ದೇಶದಿಂದಲೇ ಮಾಡಿರುವ ಕಾರ್ಯಕ್ರಮ ಮತ್ತು ಅಪ್ರಾಪ್ತ ಬಾಲಕಿಯರು ಇರುವಾಗ ಸಂಜೆ, ರಾತ್ರಿ ವೇಳೆ ಯಾವುದೇ ಕಾರ್ಯಕ್ರಮ ಆಯೋಜಿಸುವಾಗ ಸ್ಪಷ್ಟ ನಿಯಮ ಮತ್ತು ಕ್ರಮ ಬದ್ದತೆ ಇಲ್ಲದೇ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂಬುದನ್ನು ಸಮಿತಿಯು ತನಿಖೆ ವೇಳೆಯಲ್ಲಿ ಬಯಲು ಮಾಡಿದೆ.

ಸತ್ಯಶೋಧನಾ ಸಮಿತಿಯು ನೀಡಿರುವ ವರದಿಯ ಪ್ರತಿಯು "the-file.in'ಗೆ ಲಭ್ಯವಾಗಿದೆ.

ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿ ನಿಲಯದ ಸಿಬ್ಬಂದಿ ಹಾಗೂ ಇತರ ಅಧಿಕಾರಿಗಳು ಮಕ್ಕಳ ಹಕ್ಕುಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ ನಡತೆ ನಿಯಮ 2021 ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ರ ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಉಲ್ಲಂಘನೆ ಆಗಿದೆ,' ಎಂದು ಸತ್ಯಶೋಧನಾ ವರದಿಯು ಅಭಿಪ್ರಾಯಿಸಿರುವುದು ವರದಿಯಿಂದ ಗೊತ್ತಾಗಿದೆ.

ವಿದ್ಯಾರ್ಥಿನಿಲಯದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಾವೊಬ್ಬ ಅಧಿಕಾರಿಗಳು ಕೂಡ ಕಾರ್ಯಕ್ರಮ ಆಯೋಜನೆ ಮತ್ತು ಆ ದಿನದಂದು ಜರುಗಿದ ವಿವಿಧ ಕಾರ್ಯಕ್ರಮಗಳನ್ನು ಬಿಂಬಿಸುವ ಒಂದೇ ಒಂದು ಫೋಟೋ ಕೂಡ ಲಭ್ಯವಿಲ್ಲ

ಕಾರ್ಯಕ್ರಮ ಆಯೋಜನೆಯ ಯಾವುದೇ ಸ್ಪಷ್ಟ ರೂಪುರೇಷೆಗಳು ಹಾಗೂ ಕಾರ್ಯಕ್ರಮದ ಪ್ರಾರಂಭದಿಂದ ಅಂತ್ಯದವರೆಗೆ ಏನು ಜರುಗಿತು ಎಂಬುದನ್ನೂ ತನಿಖಾ ಸಮಿತಿ ಮುಂದೆ ಸ್ಪಷ್ಟವಾಗಿ ಮಾಹಿತಿ ನೀಡುವಲ್ಲಿ ವಿಫಲರಾಗಿ ಅನೇಕ ಅಂಶಗಳನ್ನು ಮರೆ ಮಾಚಿರುವುದನ್ನು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

2023ರ ನವೆಂಬರ್ 16ರಂದು ಈ ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳ ದಿನಾಚರಣೆ, ಕನ್ನಡ ರಾಜ್ಯೋತ್ಸವ, ದೀಪಾವಳಿ ಅಥವಾ ಜಿಲ್ಲಾಧಿಕಾರಿಗೆ ಅಭಿನಂದನಾ ಕಾರ್ಯಕ್ರಮ ಎಂದ ಒಬ್ಬಬ್ಬರು ಒಂದೊಂದು ತರಹದ ಹೇಳಿದ್ದಾರೆ. ಇದು ಎಲ್ಲಾ ಮಕ್ಕಳೇ ಆಯೋಜಿಸಿದ್ದು ಎಂದು ವಿಭಿನ್ನ ಹೇಳಿಕೆ ನೀಡಿರುವುದನ್ನು ಸಮಿತಿಯು ಒರೆಗೆ ಹಚ್ಚಿದೆ.

ಇವು ಯಾವುದೇ ಆಗಿದ್ದಲ್ಲಿ 18 ವರ್ಷದೊಳಗಿನ ಬಾಲಕಿಯರು ಇರುವ ವಿದ್ಯಾರ್ಥಿನಿಯರ ನಿಲಯದಲ್ಲಿ ಹಗಲು ಅಥವಾ ಸಂಜೆ 6 ಗಂಟೆ ಒಳಗೇ ಆಯೋಜಿಸಬೇಕಿತ್ತು. ಆದರೆ ಈ ಬಗ್ಗೆ ಕನಿಷ್ಠ ಜ್ಞಾನ ಇಲ್ಲದೇ ಕಾರ್ಯಕ್ರಮವನ್ನು ಸಂಜೆ 6.30ರ ನಂತರ ಮಾಡಿರುವುದು ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ರಕ್ಷಣಾ ನೀತಿಯ ಸ್ಪಷ್ಟ ಉಲ್ಲಂಘನೆಯಾಗಿದೆ,' ಎಂದು ವರದಿಯಲ್ಲಿ ಸಮಿತಿಯು ವಿವರಿಸಿರುವುದು ತಿಳಿದು ಬಂದಿದೆ.

ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಈ ಕಾರ್ಯಕ್ರಮಗಳ ಆಯೋಜನೆಯ ಯಾವುದೇ ಕುರುಹುಗಳು ಅಥವಾ ವ್ಯವಸ್ಥೆಗಳು ಮಾಡಿರುವುದು ಕಿಂಚಿತ್ತೂ ಕಂಡುಬಂದಿಲ್ಲ, ಕೇವಲ ಕೆಲವು ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಹಿಂದೆ ಜಿಲ್ಲಾಧಿಕಾರಿಗಳು ಮಾಡಿದ ಉತ್ತಮ ಕೆಲಸಕ್ಕಾಗಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಾಲಕಿಯರ ವಸತಿ ನಿಲಯದಲ್ಲಿ ಸಂಜೆ 6 ಗುಂಟೆಯ ನಂತರ ಈ ತರಹದ ಕಾರ್ಯಕ್ರಮಗಳನ್ನು ಮಾಡುವುದು ತಪ್ಪು ಎಂಬ ಕನಿಷ್ಟ ಅರಿವು ಇರುವ ಜಿಲ್ಲೆಯ ಹಿರಿಯ ಅಧಿಕಾರಿಗಳು ಅಥವಾ ಇದರಲ್ಲಿ ಭಾಗವಹಿಸಿದ ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಈ ಕಾರ್ಯಕ್ರಮವನ್ನು ತಪ್ಪಿ ಸಬಹುದಿತ್ತು ಎಂದು ಸಮಿತಿಯು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಹಲವು ಬೆಳವಣಿಗೆಗಳನ್ನು ಗಮನಿಸಿರುವ ಸಮಿತಿಯು 'ಈ ವಸತಿ ನಿಲಯಕ್ಕೆ ಯಾವುದೇ ಮಕ್ಕಳ ರಕ್ಷಣಾ ನಿಯಮ ಇಲ್ಲದಿರುವುದು ಕಂಡು ಬಂತು. ಈ ಬಗ್ಗೆ ಯಾವುದೇ ಅಧಿಕಾರಿಗಳಿಗೆ ನಿಯಮ, ಕಾನೂನು ಇರುವ ಬಗ್ಗೆ ಸ್ವಲ್ಪವೂ ಅರಿವಿನ ಜ್ಞಾನ ಇಲ್ಲದಿರುವುದು ಕಂಡು ಬಂದಿದೆ. ಇದರಿಂದ ಈ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಕ್ಕು ಘನತೆ, ಗುರುತು, ಸ್ವತಂತ್ರತೆ, ಗೌಪ್ಯತೆ, ನಂಬಿಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದು ಸ್ಪಷ್ಟವಾಗಿ ಕಂಡು ಬಂದಿದೆ,' ಎಂದು ವರದಿಯಲ್ಲಿ ವಿವರಿಸಿದೆ. ಈ ವರದಿಯ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರೊಂದಿಗೆ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣವೇನು?

2023ರ ನವೆಂಬರ್ 16ರಂದು ತುಮಕೂರು ಜಿಲ್ಲೆಯ ನಗರ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ತೆರಳಿ ವಿದ್ಯಾರ್ಥಿನಿಯರೊಂದಿಗೆ ಸಭ್ಯತೆ ಮೀರಿ ಡ್ಯಾನ್ಸ್ ಮಾಡಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ಸೇರಿದಂತೆ ಹಲವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸರಕಾರದ ಮೆಟ್ಟಿಲೇರಿದ್ದರು. ಆ ನಂತರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಬಳ್ಳಾರಿ ಜಿಲ್ಲೆಯ ಸದಸ್ಯ ಎಚ್ಸಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಂಜಲಿ ರಾಮಣ್ಣ ಮತ್ತು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ತಿರುಮಲರಾವ್ ಅವರನ್ನೊಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ನೀಡಿರುವ ವರದಿಯು, ಜಿಲ್ಲಾಧಿಕಾರಿಗಳೂ ಸೇರಿದಂತೆ ಇಲಾಖೆಯ ಅಧಿಕಾರಿಗಳ ಮುಖವಾಡವನ್ನೂ ಕಳಚಿ ಹಾಕಿದೆ.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X